ಮಂಡ್ಯ: ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ನಿಲ್ಲುವಂತೆ ಕಾಣುತ್ತಿಲ್ಲ. ಮಂಡ್ಯ ಜಿಲ್ಲೆಯಲ್ಲಿ ಮತ್ತೆ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ.
ಮಂಡ್ಯದ ಆಲೆಮನೆ, ಹೆಲ್ತ್ ಕ್ವಾಟ್ರಸ್ ಬಳಿಕ ಇದೀಗ ನಾಗಮಂಗಲದ ಮಾವಿನಕೆರೆ ತೋಟದ ಮನೆಯಲ್ಲಿ ಭ್ರೂಣ ಹತ್ಯೆ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿದ್ದು, ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಡಿಹೆಚ್ ಒ ಡಾ.ಮೋಹನ್ ನೇತೃತ್ವದ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಭ್ರೂಣ ಹತ್ಯೆ ಕಿಟ್, ಸ್ಕ್ಯಾನಿಂಗ್ ಯಂತ್ರ ಪತ್ತೆಯಾಗಿದೆ. ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಸ್ಕ್ಯಾನಿಂಗ್ ಮಾಡುತ್ತಿದ್ದ ಆರೋಪಿ ಅಭಿಷೇಕ್ ಪರಾರಿಯಾಗಿದ್ದಾನೆ. ಪ್ರಕರಣ ಸಂಬಂಧ ಮನೆಯ ಮಾಲೀಕ ಧನಂಜಯ್, ಆರೋಗ್ಯ ಇಲಾಖೆಯ ಗ್ರೂಪ್ ಡಿ ನೌಕರೆ ಹಾಗೂ ಗರ್ಭಿಣಿಯ ಪತಿ ಸೇರಿ ಮೂವರನ್ನು ಬಂಧಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.