ಬೆಳಗಾವಿ : ಸಿಎಂ ಸಿದ್ದರಾಮಯ್ಯ ಮಾಸ್ ಲೀಡರ್, ರಾಜಕೀಯ ದುರುದ್ದೇಶದಿಂದ ಈ ಮಾತು ಹೇಳುತ್ತಿಲ್ಲ.ಅವರ ಮೇಲೆ ನನಗೆ ತುಂಬಾ ಗೌರವ ಇದೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮಾಸ್ ಲೀಡರ್. ಸಿಡಿ ಶಿವು ಅಧಿಕಾರಕ್ಕೆ ಬಂದ್ರೆ ರಾಜ್ಯ ಅದೋಗತಿಗೆ ಹೋಗಲಿದೆ. ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ರೆ ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲವಿರುವುದಿಲ್ಲ ಎಂದು ಹೇಳಿದ್ದಾರೆ.
ಸಿಡಿ ಶಿವು ಬಂದ್ರೆ ರಾಜ್ಯ ಅದೋಗತಿಗೆ ಹೋಗಲಿದೆ. ಭ್ರಷ್ಟಾಚಾರದ ಪಿತಾಮಹ ಡಿಸಿಎಂ ಸಿಎಂ ರೇಸ್ ನಲ್ಲಿದ್ದಾರೆ. ಹೀಗಾಗಿ ಪಕ್ಷಕ್ಕೆ ಉಳಿಗಾಲವಿಲ್ಲ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯರನ್ನು ಹೊಗಳಿ ಡಿಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.