ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯಗೆ ಪ್ರಾಜಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರವಾಗಿ ಇಂದು ನಡೆದ ಸಂಪುಟ ಸಭೆ ಅಂತ್ಯವಾದ ಬಳಿಕ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು,
ಇದಾದ ಬಳಿಕ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜಪಾಲರು ತೆಗೆದು ಕೊಂಡಿರುವಂತ ತೀರ್ಮಾನ ಕಾನೂನುಬಾಹಿರ ಹಾಗೂ ಸಂವಿಧಾನಕವಾದದ್ದು. ಸಚಿವ ಸಂಪುಟ ಸಂಪೂರ್ಣವಾಗಿ ಅದನ್ನ ತೀವ್ರವಾಗಿ ಖಂಡಿಸಿದೆ. ಯಾವ ದೃಷ್ಟಿಕೋನದಿಂದಲೂ ಇದು ಸರಿಯಾದ ನಿರ್ಧಾರವಲ್ಲ. ಇಡೀ ಸಚಿವ ಸಂಪುಟ ಇದನ್ನು ವಿರೋಧಿಸಿದೆ.ಇದಕ್ಕೆ ಯಾವುದೇ ಕಾನೂನಿನ ಬಲ ಇಲ್ಲ. ಸಂವಿಧಾನದ ಬಲ ಇಲ್ಲ ಅಂತ ಹೇಳಿ ತೀರ್ಮಾನ ಮಾಡಿದ್ದಾರೆ ಎಂದರು.
ರಾಜ್ಯಪಾಲರು ಈ ದೇಶದ ರಾಷ್ಟ್ರಾಧ್ಯಕ್ಷರ ಪ್ರತಿನಿಧಿಗಳು. ಸಂವಿಧಾನದ ಪ್ರತಿನಿಧಿಗಳಾಗಿ ಕೆಲಸ ಮಾಡಬೇಕು. ಸಂವಿಧಾನದ ಪ್ರತಿನಿಧಿಗಳಾಗಿ ಅವರು ಕೆಲಸ ಮಾಡಬೇಕು. ಅದನ್ನು ಬಿಟ್ಟು ಕೇಂದ್ರ ಸರ್ಕಾರ ಬಿಜೆಪಿಯ ಪ್ರತಿನಿಧಿಗಳಾಗಿ ಕೆಲಸ ಮಾಡಬಾರದು. ಈ ಒಂದು ಪ್ರಕರಣದಲ್ಲಿ ಅವರು ಕಾನೂನು ರೀತಿಯಲ್ಲಿ ನಡೆದುಕೊಳ್ಳದೆ ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಿದ್ದಾರೆ. ಈ ನಡವಳಿಕೆಯನ್ನ ಸಚಿವ ಸಂಪುಟ ಅತ್ಯಂತ ತೀವ್ರವಾಗಿ ಖಂಡಿಸಿದೆ.
ಕೇಂದ್ರ ಸರ್ಕಾರ ಅನಗತ್ಯವಾಗಿ ಜನರ ಆಶೀರ್ವಾದದಿಂದ ರಚನೆ ಆಗಿರುವುದರಿಂದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವುದಕ್ಕೆ ರಾಜ್ಯಪಾಲರನ್ನು ಬಳಸಿಕೊಳ್ಳುತ್ತಿರುವುದಕ್ಕೆ ರಾಜಪಾಲರು ಕೇಂದ್ರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಇದರ ಪರಿಣಾಮ ಫೆಡರಲ್ ವ್ಯವಸ್ಥೆಗೆ ದಕ್ಕೆ ಬರುತ್ತದೆ. ಅದರಿಂದ ಅವರ ನಡವಳಿಕೆ ಪ್ರಜಾಪ್ರಭುತ್ವಕ್ಕೆ ವಿರುದ್ಧ ವಾಗಿರತಕ್ಕಂತಹ ನಿರ್ಧಾರವಾಗಿರುವುದರಿಂದ ಇಡೀ ಸಂಪುಟ ಸಭೆ ಇದನ್ನ ತೀವ್ರವಾಗಿ ಖಂಡಿಸುತ್ತೇವೆ.
ಇಡೀ ಸಚಿವ ಸಂಪುಟ ಒಂದೇ ನಿರ್ಣಯಕ್ಕೆ ಬಂದಿದೆ. ಅಲ್ಲದೆ ಹೈಕಮಾಂಡ್ ಕೂಡ ಈ ಸಂದರ್ಭದಲ್ಲಿ ನಿಮ್ಮ ಜೊತೆಗಿರುತ್ತೇವೆ ಎಂದು ದೂರವಾಣಿ ಮೂಲಕ ತಿಳಿಸಿದ್ದಾರೆ. ಹಾಗಾಗಿ ಡಿಸಿಎಂ ಡಿಕೆ ಶಿವಕುಮಾರ್, ಹೈಕಮಾಂಡ್ ಅವರಿಗೆ, ಸಚಿವರುಗಳಿಗೆ, ಶಾಸಕರುಗಳಿಗೆ, ಕಾರ್ಯಕರ್ತರಿಗೆ, ಲೋಕಸಭಾ, ರಾಜ್ಯಸಭಾ ಸದಸ್ಯರಿಗೆ ಈ ಸಂದರ್ಭದಲ್ಲಿ ನಾನು ಧನ್ಯವಾದಗಳು ಹೇಳಿಕೆ ಬಯಸುತ್ತೇನೆ.