ಮುಂಬೈ: ಕೋಲ್ಕತ್ತಾದಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಮಾಸುವ ಮುನ್ನವೇ ಮುಂಬೈನ ಸಿಯಾನ್ ಆಸ್ಪತ್ರೆಯಲ್ಲಿ ವೈದ್ಯೆಯ ಮೇಲೆ ದೈಹಿಕ ಹಲ್ಲೆ ನಡೆಸಿದ ಆಘಾತಕಾರಿ ಘಟನೆ ಇಂದು ಮುಂಜಾನೆ ನಡೆದಿದೆ.
ಕೋಲ್ಕತ್ತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ಕೆಲವು ದಿನಗಳ ನಂತರ ಈ ಘಟನೆ ನಡೆದಿದೆ.
ಮುಂಬೈನ ಸಿಯಾನ್ ಆಸ್ಪತ್ರೆಯ ವಾರ್ಡ್ನಲ್ಲಿ ಕರ್ತವ್ಯನಿರತ ವೈದ್ಯೆ ಮೇಲೆ ಹಲ್ಲೆ ನಡೆಸಿ ದುಷ್ಕರ್ಮಿ ಪರಾರಿಯಾಗಿದ್ದಾನೆ. ಮುಂಜಾನೆ 3:30 ರ ಸುಮಾರಿಗೆ 5-6 ರೋಗಿಗಳ ಪರಿಚಾರಕರ ಗುಂಪು ನಿವಾಸಿ ವೈದ್ಯರಿಗೆ ಬೆದರಿಕೆ ಹಾಕಿ ದೈಹಿಕವಾಗಿ ಹಲ್ಲೆ ಮಾಡಲು ಪ್ರಯತ್ನಿಸಿತು.
ಮಹಾರಾಷ್ಟ್ರ ಅಸೋಸಿಯೇಷನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಘಟನೆಯನ್ನು ಖಂಡಿಸಿದೆ. ಆಸ್ಪತ್ರೆಯು ಯಾವುದೇ ಹೇಳಿಕೆಯನ್ನು ನೀಡಿಲ್ಲವಾದರೂ, ಮಹಾರಾಷ್ಟ್ರ ಅಸೋಸಿಯೇಷನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ (ಎಂಎಆರ್ಡಿ) ಈ ಘಟನೆಯನ್ನು ಖಂಡಿಸಿದೆ ಮತ್ತು ಈ ಬಗ್ಗೆ ಹೇಳಿಕೆ ನೀಡಿದೆ.
“ಈ ಆತಂಕಕಾರಿ ಘಟನೆಯು ಗಮನಾರ್ಹ ಭದ್ರತಾ ವೈಫಲ್ಯವನ್ನು ಎತ್ತಿ ತೋರಿಸುತ್ತದೆ. ನಮ್ಮ ವೈದ್ಯರ ಸುರಕ್ಷತೆಯಲ್ಲಿ ಯಾವುದೇ ರಾಜಿ ಇಲ್ಲ. ಈ ಪರಿಸ್ಥಿತಿಗೆ ತಕ್ಷಣದ ಗಮನ ಮತ್ತು ಎಲ್ಲಾ ಆಸ್ಪತ್ರೆಗಳಲ್ಲಿ ಕಟ್ಟುನಿಟ್ಟಾದ ಭದ್ರತಾ ಕ್ರಮಗಳನ್ನು ಜಾರಿಗೆ ತರುವ ಅಗತ್ಯವಿದೆ ಎಂದು ಹೇಳಿದೆ.