ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ಕಿಚ್ಚು ಹೆಚ್ಚಾಗಿದ್ದು , ಅಲ್ಲದೆ ಕೆಲವು ಜಿಲ್ಲೆಗಳಲ್ಲಿ ಪ್ರತಿಭಟನೆ ಹಿಂಸಾಚಾರ ರೂಪ ಪಡೆದುಕೊಂಡಿದೆ. ಇದೀಗ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಒಬ್ಬನಿಗೆ ಪ್ರತಿಭಟನೆಯ ವೇಳೆ ಗಾಯವಾಗಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ.
ಟ್ವೀಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯಪಾಲರ ಕಾನೂನು ಬಾಹಿರ ನಿರ್ಣಯ ಖಂಡಿಸಿ ಬಾಗಲಕೋಟೆಯಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸುವ ವೇಳೆ ದ್ಯಾಮಪ್ಪ ಎಂಬ ನನ್ನ ಅಭಿಮಾನಿಯೊಬ್ಬರು ಗಾಯಗೊಂಡ ವಿಚಾರ ಈಗಷ್ಟೆ ತಿಳಿಯಿತು.
ದೇಶದ ಸಂವಿಧಾನ, ಪ್ರಜಾಪ್ರಭುತ್ವದ ಉಳಿವಿಗಾಗಿ ನನ್ನ ಮತ್ತು ನಮ್ಮ ಪಕ್ಷದ ಪರವಾಗಿ ಇಂದು ಹೋರಾಟ ನಡೆಸುತ್ತಿರುವ ನನ್ನೆಲ್ಲ ಆತ್ಮೀಯ ಬಂಧುಗಳು ಪ್ರತಿಭಟನೆಯ ವೇಳೆ ದಯವಿಟ್ಟು ಎಚ್ಚರಿಕೆಯಿಂದಿರಿ. ನಿಮ್ಮ ಕಾಳಜಿ, ಆಕ್ರೋಶವನ್ನು ನಾನು ಅರ್ಥೈಸಿಕೊಳ್ಳಬಲ್ಲೆ ಆದರೆ ನನಗೆ ನಿಮ್ಮೆಲ್ಲರ ಆರೋಗ್ಯ, ಜೀವವೂ ಮುಖ್ಯ. ನಿಮ್ಮ ಪ್ರೀತಿಗೆ ನಾನು ಸದಾ ಋಣಿ ಎಂದು ಕಾರ್ಯಕರ್ತರಿಗೆ ಮುಖಂಡರಿಗೆ ಸಲಹೆ ನೀಡಿದ್ದಾರೆ.
ರಾಜ್ಯಪಾಲರ ಕಾನೂನು ಬಾಹಿರ ನಿರ್ಣಯ ಖಂಡಿಸಿ ಬಾಗಲಕೋಟೆಯಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸುವ ವೇಳೆ ದ್ಯಾಮಪ್ಪ ಎಂಬ ನನ್ನ ಅಭಿಮಾನಿಯೊಬ್ಬರು ಗಾಯಗೊಂಡ ವಿಚಾರ ಈಗಷ್ಟೆ ತಿಳಿಯಿತು.
ದೇಶದ ಸಂವಿಧಾನ, ಪ್ರಜಾಪ್ರಭುತ್ವದ ಉಳಿವಿಗಾಗಿ ನನ್ನ ಮತ್ತು ನಮ್ಮ ಪಕ್ಷದ ಪರವಾಗಿ ಇಂದು ಹೋರಾಟ ನಡೆಸುತ್ತಿರುವ ನನ್ನೆಲ್ಲ ಆತ್ಮೀಯ ಬಂಧುಗಳು… pic.twitter.com/tODrTu48f3— Siddaramaiah (@siddaramaiah) August 19, 2024