ದಕ್ಷಿಣಕನ್ನಡ : ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ್ ಹಾಗೂ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು.ಈ ಘಟನೆಗಳು ಮಾಸುವ ಮುನ್ನವೆ ಇದೀಗ ದಕ್ಷಿಣಕನ್ನಡದಲ್ಲಿ ಮುಸ್ಲಿಂ ವಿದ್ಯಾರ್ಥಿನಿಗೆ ಹಿಂದೂ ಬಾಲಕನೊಬ್ಬ ಚಾಕು ಇರಿದಿರುವ ಘಟನೆ ನಡೆದಿದೆ.
ಹೌದು ಮುಸ್ಲಿಂ ವಿದ್ಯಾರ್ಥಿನಿ ಮೇಲೆ ಅಪ್ರಾಪ್ತ ಹಿಂದೂ ಬಾಲಕನೊಬ್ಬ ಚಾಕು ಇರಿದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಒಂದು ಘಟನೆ ನಡೆದಿದೆ. ಕೊಂಬೆಟ್ಟು ಸರ್ಕಾರಿ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಗೆ ಹಿಂದೂ ಬಾಲಕ ಚಾಕು ಇರಿದಿದ್ದಾನೆ. ಚಾಕು ಇರಿದಿದ್ದರಿಂದ ವಿದ್ಯಾರ್ಥಿನಿಯ ಕೈಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.