Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

10/05/2025 5:30 AM

ಬೆಂಗಳೂರು: 60.48 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಿ. ಜಗದೀಶ ಮಾಹಿತಿ

10/05/2025 5:00 AM

ಬೆಂಗಳೂರು: ಮಾನಸಿಕ ಆರೋಗ್ಯ ಸೇವೆ ಒದಗಿಸಲು ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ

10/05/2025 4:55 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾರಾಯಣ ಗುರುಗಳು ಪ್ರತಿಪಾದಿಸಿದ ಮನುಷ್ಯತ್ವದಿಂದ ಕೂಡಿದ ಸಮಾಜ ನಿರ್ಮಾಣ ನಮ್ಮ ಗುರಿ: ಸಿದ್ದರಾಮಯ್ಯ
KARNATAKA

ನಾರಾಯಣ ಗುರುಗಳು ಪ್ರತಿಪಾದಿಸಿದ ಮನುಷ್ಯತ್ವದಿಂದ ಕೂಡಿದ ಸಮಾಜ ನಿರ್ಮಾಣ ನಮ್ಮ ಗುರಿ: ಸಿದ್ದರಾಮಯ್ಯ

By kannadanewsnow0920/08/2024 9:50 PM

ಬೆಂಗಳೂರು : ಬ್ರಹ್ಮಶ್ರೀ ನಾರಾಯಣ ಗುರು ಅವರು ಪ್ರತಿಪಾದಿಸಿದಂತೆ ಎಲ್ಲರೂ ಮನುಷ್ಯರಾಗಿ ಗೌರವದಿಂದ ಬದುಕುವಂತಹ ಸಮ ಸಮಾಜದ ನಿರ್ಮಾಣ ನಮ್ಮ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಮಂಗಳವಾರ ರವೀಂದ್ರಕಲಾ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಸಮಾಜದಲ್ಲಿರುವ ಅಸಮಾನತೆಯನ್ನು ನಿವಾರಿಸಿ, ಸಾಮಾಜಿಕ ನ್ಯಾಯದ ಪರವಾದ ಸಮಾಜ ನಿರ್ಮಾಣಕ್ಕೆ ನಾವು ಬದ್ದರಾಗಿದ್ದೇವೆ. ಮನುಷ್ಯರಲ್ಲಿ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ನಾರಾಯಣ ಗುರುಗಳು ಹೇಳಿದರು. ಅದರಂತೆ ಪ್ರತಿಯೊಬ್ಬರೂ ಅನುಸರಿಸಿ ಬಾಳಲು ಪ್ರಯತ್ನಿಸಬೇಕು ಎಂದು ಅವರು ಕರೆ ನೀಡಿದರು.

ನಾರಾಯಣ ಗುರು ಅವರು ಈಡಿಗ ಜನಾಂಗದಲ್ಲಿ ಜನಿಸಿದ್ದರೂ, ಯಾವುದೇ ಧರ್ಮ, ಜಾತಿ, ಭಾಷೆಗೆ ಸೀಮಿತರಾಗಿದ್ದವರಲ್ಲ. ಅವರು ಬುದ್ಧ, ಬಸವ, ಕನಕದಾಸ ರೀತಿಯ ಸಂತರು. ಸಮಾಜದಲ್ಲಿ ಸುಧಾರಣೆ ಬಯಸಿ ಅದಕ್ಕಾಗಿ ಜೀವನವನ್ನು ಮುಡಿಪಾಗಿಟ್ಟವರು. ಈ ಹಿನ್ನೆಲೆಯಲ್ಲಿ ಸರ್ಕಾರದ ವತಿಯಿಂದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಿಸಲಾಗುತ್ತಿದೆ.

ಸಮಾಜದಲ್ಲಿ ಕೆಲವು ಪಟ್ಟಭದ್ರರು ಹಿತಾಸಕ್ತಿಗಳು ಮೇಲ್ವರ್ಗ, ಕೆಳ ವರ್ಗ ಎಂದು ವರ್ಗೀಕರಣ ಮಾಡಿ ಬಹಳ ಹಿಂದೆಯೇ ವರ್ಣ ವ್ಯವಸ್ಥೆಯನ್ನು ಜಾರಿಗೆ ತಂದಿದ್ದಾರೆ. ಶೂದ್ರರಿಗೆ ಆಸ್ತಿ ಉತ್ಪಾದನೆ ಮಾಡುವುದು ಬಿಟ್ಟರೆ, ಆಸ್ತಿಯ ಮೇಲೆ ಯಾವುದೇ ಹಕ್ಕು ಇರಲಿಲ್ಲ.ಅವರನ್ನು ಅಕ್ಷರ ಸಂಸ್ಕೃತಿಯಿಂದ ವಂಚಿತರನ್ನಾಗಿ ಮಾಡಲಾಗಿತ್ತು. ಶೂದ್ರರು ಅಕ್ಷರ ಸಂಸ್ಕೃತಿಯಿಂದ ವಂಚಿತರಾದ ಹಿನ್ನಲೆಯಲ್ಲಿ ಅವಕಾಶಗಳಿಂದಲೂ ವಂಚಿತರಾದರು.

ನಾರಾಯಣ ಗುರು ಅವರು ಶಿಕ್ಷಣದಿಂದ ಮಾತ್ರ ಈ ಸಂಕೋಲೆಗಳಿಂದ ಸ್ವತಂತ್ರರಾಗಲು ಸಾಧ್ಯ ಎಂದು ಬಲವಾಗಿ ನಂಬಿದ್ದರು. ಸ್ವತಂತ್ರವಾದ ಆಲೋಚನೆ, ಚಿಂತನೆ ಬರಬೇಕಾದರೆ ವಿದ್ಯೆ ಕಲಿಯಲೇ ಬೇಕು. ವಿದ್ಯೆ ಇಲ್ಲದಿದ್ದರೆ ಸ್ವಾಭಿಮಾನ ಕೂಡಾ ಇರುವುದಿಲ್ಲ.ಗುಲಾಮಗಿರಿ ಮನೆ ಮಾಡಿಕೊಂಡಿರುತ್ತದೆ.

ಅವಕಾಶ ಸಿಕ್ಕಿದರೆ ಪ್ರತಿಯೊಬ್ಬರೂ ವಿದ್ಯಾವಂತರಾಗುತ್ತಾರೆ. ವಿದ್ಯೆಗೆ ಯಾವುದೇ ಜಾತಿಯಿಲ್ಲ. ಅಂಬೇಡ್ಕರ್‌, ವಾಲ್ಮಿಕಿ, ವ್ಯಾಸ, ಕಾಳಿದಾಸ ಇದಕ್ಕೆ ಉದಾಹರಣೆ. ನಾರಾಯಣ ಗುರುಗಳು ತಮ್ಮ ನಡವಳಿಕೆಯಿಂದ, ಕಲಿತ ವಿದ್ಯೆಯಿಂದ ಸಂತರಾಗಿ ಬೆಳೆದರು.

ಸ್ವಾತಂತ್ರ್ಯ ಬಂದು 77 ವರ್ಷವಾದರೂ, ಇಂದಿನವರೆಗೂ ಎಲ್ಲರೂ ವಿದ್ಯಾವಂತರಾಗಲು ಸಾಧ್ಯವಾಗಿಲ್ಲ. ಇನ್ನೂ 25 ಶೇಕಡಾ ಜನರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಕ್ರಿಶ್ಚಿಯನ್‌ ಮಿಷನರಿಗಳ ಕಾರಣದಿಂದ ಕರಾವಳಿಯಲ್ಲಿ ವಿದ್ಯಾವಂತರ ಪ್ರಮಾಣ ಹೆಚ್ಚಾಗಿದೆ.

ಎಷ್ಟೆ ಕಷ್ಟ ಬಂದರೂ ನಾವು ನಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು. ಇದುವೇ ನಾರಾಯಣ ಗುರುವಿಗೆ ನಾವು ಸಲ್ಲಿಸುವ ನಿಜವಾದ ಗೌರವ ಎಂದರು.

ಯಾವ ಜಾತಿ ವ್ಯವಸ್ಥೆಯೂ ಇಲ್ಲದೆ, ಮನುಷ್ಯರಾಗಿ ಬಾಳಿ ಎಂದು ನಾರಾಯಣ ಗುರು ಅವರು ಬೋಧಿಸಿದರು. ಜಾತಿ ಆಧಾರದಲ್ಲಿ ತುಚ್ಛವಾಗಿ ಕಾಣುವ ಮನೋಭಾವ ಹೋಗಬೇಕು. ಯಾವ ಜಾತಿಯಲ್ಲಿ ಹುಟ್ಟಿದ್ದರೂ ಗೌರವ ನೀಡಬೇಕು.

ಇಂದು ಅನೇಕ ವಿದ್ಯಾವಂತರು ಕೂಡಾ ಗುಲಾಮಗಿರಿಯಿಂದ ಹೊರ ಬರಲು ಇನ್ನೂ ಸಾಧ್ಯವಾಗದಿರುವುದು ವಿಷಾದನೀಯ.

ಶೂದ್ರರಿಗೆ ದೇವಾಲಯ ಪ್ರವೇಶ ನಿರಾಕರಿಸಿದ ಸಂದರ್ಭದಲ್ಲಿ ಅದರ ವಿರುದ್ಧ ಸಂಘರ್ಷಕ್ಕಿಳಿಯದೆ, ನಾರಾಯಣ ಗುರು ಅವರು ಅವರದ್ದೇ ಆದ ದೇವಾಲಯ ನಿರ್ಮಿಸಲು ಹಾಗೂ ಅರ್ಚಕರನ್ನು ನೇಮಿಸಲು ಕರೆ ನೀಡಿದರು.ಈ ರೀತಿ ಕೇರಳದಲ್ಲಿ 60ಕ್ಕೂ ಅಧಿಕ ದೇವಾಲಯ ಕಟ್ಟಿದರು. ಕರಾವಳಿಯಲ್ಲೂ ದೇವಾಲಯಗಳನ್ನು ನಿರ್ಮಿಸಿದರು. ಪ್ರವೇಶ ನಿರಾಕರಿಸುವ ದೇವಾಲಯಗಳಿಗೆ ಹೋಗಲೇ ಬೇಡಿ ಎಂದು ಹೇಳಿ ಸರಳವಾಗಿ ಜನರಿಗೆ ಅರ್ಥವಾಗುವ ರೀತಿಯಲ್ಲಿ ಧರ್ಮವನ್ನು ಪ್ರತಿಪಾದಿಸಿದರು.

ನಾರಾಯಣ ಗುರುಗಳು ಮೌಡ್ಯ, ಕಂದಾಚಾರಗಳ ವಿರುದ್ಧ ಬಸವಾದಿ ಶರಣರ ರೀತಿಯಲ್ಲಿ ಜಾಗೃತಿ ಮೂಡಿಸಿದರು. ಇಂದು ನಾವು ವಿದ್ಯಾವಂತರಾದರೂ ಮೌಡ್ಯಗಳನ್ನು ಬಿಟ್ಟಿಲ್ಲ. ವೈಜ್ಞಾನಿಕತೆ, ವೈಚಾರಿಕತೆ ಬೆಳೆಸಲು ಪ್ರಯತ್ನವೇ ಮಾಡಿಲ್ಲ. ಏನಾದರೂ ಕಷ್ಟ ಬಂದ ತಕ್ಷಣ ಮೌಡ್ಯಗಳಿಗೆ ಶರಣಾಗುತ್ತೇವೆ. ತಮ್ಮ ಸಂಕಷ್ಟಗಳಿಗೂ ಕರ್ಮ ಸಿದ್ದಾಂತದ ಕಾರಣ ಹೇಳುತ್ತೇವೆ. ಸಂಕಷ್ಟ ಬಂದಾಗ ಹಣೆಯಲ್ಲಿ ಬರೆದದ್ದು, ಹಿಂದಿನ ಜನ್ಮದ ಕರ್ಮ ಎಂದು ಹೇಳುವುದು ಸರಿಯಲ್ಲ. ಅದೆಲ್ಲಾ ಸುಳ್ಳು. ಮೌಡ್ಯ, ಗೊಡ್ಡು ಸಂಪ್ರದಾಯ, ಕಂದಾಚಾರಗಳನ್ನು ನಂಬಬೇಡಿ. ನಾರಾಯಾಣ ಗುರು, ಬಸವಣ್ಣ ಹೇಳಿದ ರೀತಿ ನಡೆಯಿರಿ. ಕರ್ಮ ಸಿದ್ಧಾಂತದ ವಿರುದ್ಧ ಬಸವಾದಿ ಶರಣರೂ ಬೋಧನೆ ಮಾಡಿದರು. ಆದ್ದರಿಂದಲೇ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ನಾವು ಘೋಷಿಸಿದ್ದೇವೆ.

ಕುವೆಂಪು ಅವರು, ಹುಟ್ಟುತ್ತಾ ಪ್ರತಿ ಮಗು ಕೂಡಾ ವಿಶ್ವ ಮಾನವರಾಗಿ ಹುಟ್ಟುತ್ತಾರೆ. ಆದರೆ ಬೆಳೆಯುತ್ತಾ ಅಲ್ಪ ಮಾನವರಾಗುತ್ತಾರೆ. ಆದರೆ ಹಾಗೆ ಆಗಬಾರದು. ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಎಂದು ಹೇಳಿದ್ದಾರೆ.

ಈಡಿಗರ ಸಂಘದ ಆವರಣದಲ್ಲಿರುವ ವಿದ್ಯಾರ್ಥಿ ನಿಲಯ ಶಿಥಿಲವಾಗಿದ್ದು, ಅದರ ನವೀಕರಣಕ್ಕೆ ಅನುದಾನ ಒದಗಿಸಲಾಗುವುದು. ಈಡಿಗರ ಸಮುದಾಯ ಭವನಕ್ಕೂ ಅನುದಾನ ನೀಡಲಾಗುವುದು. ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಆದೇಶ ಹೊರಡಿಸಲಾಗುವುದು ಎಂದು ಅವರು ಹೇಳಿದರು.

ಬೆಂಗಳೂರಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗಾಗಿ ಮನೆ-ಮನೆ ಸಮೀಕ್ಷೆ ಪ್ರಾರಂಭ: ತುಷಾರ್ ಗಿರಿ ನಾಥ್

ಮಂಡ್ಯದಲ್ಲಿ ಸಿಡಿದೆದ್ದ ಕೈ ಕಾರ್ಯಕರ್ತರು; ರಾಜ್ಯಪಾಲರ ಪ್ರತಿಕೃತಿ ದಹಿಸಿ ಆಕ್ರೋಶ

Share. Facebook Twitter LinkedIn WhatsApp Email

Related Posts

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

10/05/2025 5:30 AM2 Mins Read

ಬೆಂಗಳೂರು: 60.48 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಿ. ಜಗದೀಶ ಮಾಹಿತಿ

10/05/2025 5:00 AM2 Mins Read

ಬೆಂಗಳೂರು: ಮಾನಸಿಕ ಆರೋಗ್ಯ ಸೇವೆ ಒದಗಿಸಲು ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ

10/05/2025 4:55 AM1 Min Read
Recent News

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

10/05/2025 5:30 AM

ಬೆಂಗಳೂರು: 60.48 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಿ. ಜಗದೀಶ ಮಾಹಿತಿ

10/05/2025 5:00 AM

ಬೆಂಗಳೂರು: ಮಾನಸಿಕ ಆರೋಗ್ಯ ಸೇವೆ ಒದಗಿಸಲು ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ

10/05/2025 4:55 AM

BREAKING: ಭಾರತ-ಪಾಕ್ ಉದ್ವಿಗ್ನತೆ ನಡುವೆ ‘ಆಪರೇಷನ್ ಸಿಂಧೂರ್’ ಸಿನಿಮಾ ಘೋಷಣೆ; ಮೊದಲ ಪೋಸ್ಟರ್ ರಿಲೀಸ್

09/05/2025 10:14 PM
State News
KARNATAKA

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

By kannadanewsnow0710/05/2025 5:30 AM KARNATAKA 2 Mins Read

ಬೆಂಗಳೂರು: 2025-26ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಕಲಿಕೆಗಾಗಿ ವಿವಿಧ ಸಂಸ್ಥೆಗಳಲ್ಲಿನ…

ಬೆಂಗಳೂರು: 60.48 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಿ. ಜಗದೀಶ ಮಾಹಿತಿ

10/05/2025 5:00 AM

ಬೆಂಗಳೂರು: ಮಾನಸಿಕ ಆರೋಗ್ಯ ಸೇವೆ ಒದಗಿಸಲು ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ

10/05/2025 4:55 AM

ಚಿಕ್ಕಮಗಳೂರು ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ.ಬಾಲಕೃಷ್ಣ ಸರ್ಕಾರಿ ಸೇವೆಯಿಂದ ವಜಾ

09/05/2025 9:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.