Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹೇಮಾವತಿ ನದಿಯ ನಾಲೆಗೆ ಕಾರು ಉರುಳಿ ಬಿದ್ದು ಇಬ್ಬರು ಸಾವು: ಕೊಚ್ಚಿ ಹೋದ ಮತ್ತಿಬ್ಬರು

24/08/2025 5:15 PM

SHOCKING: ಋತುಚಕ್ರ ನಿಲ್ಲಿಸಲು ಮಾತ್ರೆ ಸೇವಿಸಿದ ವಿದ್ಯಾರ್ಥಿನಿ ಸಾವು | Period-Delaying Pills Side Effects

24/08/2025 5:02 PM

ಕುಂಕುಮ ಇಡುವ ವೇಳೆ ಅನುಚಿತ ವರ್ತನೆ ಆರೋಪ: ದೇವಸ್ಥಾನದಲ್ಲೇ ಅರ್ಚಕನಿಗೆ ಹಿಗ್ಗಾಮುಗ್ಗಾ ಥಳಿತ

24/08/2025 4:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಮೂಲೆ’ ನಿವೇಶನ ಅಕ್ರಮ ಹಂಚಿಕೆ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಿದ ವಿಚಾರ : ಸ್ಪಷ್ಟನೆ ನೀಡಿದ ಸಚಿವ MB ಪಾಟೀಲ್
KARNATAKA

‘ಮೂಲೆ’ ನಿವೇಶನ ಅಕ್ರಮ ಹಂಚಿಕೆ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಿದ ವಿಚಾರ : ಸ್ಪಷ್ಟನೆ ನೀಡಿದ ಸಚಿವ MB ಪಾಟೀಲ್

By kannadanewsnow0523/08/2024 6:56 PM

ಬೆಂಗಳೂರು : ಮುಡಾ ಹಗರಣದಿಂದ ಈಗಾಗಲೇ ಸಿಎಂ ಸಿದ್ದರಾಮಯ್ಯ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದರ ಮಧ್ಯ ಇದೀಗ ಬೃಹತ್ ಕೈಗಾರಿಕಾ ಸಚಿವರಾಗಿರುವಂತಹ ಎಂಬಿ ಪಾಟೀಲ್ ವಿರುದ್ಧ ಕೂಡ ಇದೀಗ ಕೆ ಐ ಎ ಡಿ ಬಿ ಯಲ್ಲಿ ಅವ್ಯವಹಾರ ಎಸಗಿದ್ದಾರೆ ಎಂದು ಆರೋಪಿಸಿ ಆರ್‌ಟಿಐ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಈ ಕುರಿತು ಸಚಿವ ಎಂಬಿ ಪಾಟೀಲ್ ಇದೀಗ ಸ್ಪಷ್ಟನೆ ನೀಡಿದ್ದಾರೆ.

ಕೆಐಎಡಿಬಿಯಲ್ಲಿ ಸಿ.ಎ ನಿವೇಶನಗಳ ಹಂಚಿಕೆಗೆ ಕೈಗೊಂಡ ಪಾರದರ್ಶಕ ಕ್ರಮಗಳ ಬಗ್ಗೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದು, ಸಿಎ ನಿವೇಶನಗಳನ್ನು ಅತ್ಯಂತ ಪಾರದರ್ಶಕ ವ್ಯವಸ್ಥೆ ಮೂಲಕ ನಿಯಮಾನುಸಾರ ಹಂಚಿಕೆ ಮಾಡಲಾಗುತ್ತಿದೆ. ನಾಗರಿಕ ಸೌಲಭ್ಯದ (CA) ನಿವೇಶನಗಳನ್ನು ಅರ್ಹ ಸಂಸ್ಥೆಗಳಿಗೆ ಹಂಚಿಕೆ ಮಾಡಲಾಗಿದೆ. ಇದರಲ್ಲಿ ಯಾವ ಅಕ್ರಮವೂ ಆಗಿಲ್ಲ.

ನನ್ನ ವಿರುದ್ಧ ಈಗ ನೀಡಿರುವ ದೂರು ತುಂಬಾ ಹಳೆಯದ್ದು ಎಂದು ಬೆಂಗಳೂರಿನಲ್ಲಿ ಕೈಗಾರಿಕಾ ಇಲಾಖೆಯ ಸಚಿವ ಎಂಬಿ ಪಾಟೀಲ್ ಹೇಳಿಕೆ ನೀಡಿದರು ದಿನಾಂಕ ಬದಲಿಸಿ ನನ್ನ ವಿರುದ್ಧ ಮತ್ತೊಂದು ದೂರು ನೀಡಿದ್ದಾರೆ ಈ ಸಂಬಂಧ ಈ ಹಿಂದೆ ರಾಜ್ಯಪಾಲರಿಗೆ ನಾನು ಉತ್ತರ ನೀಡಿದ್ದೇನೆ. ನಾನು ಕೈಗಾರಿಕೆ ಸಚಿವ ನಾದ ಮೇಲೆ ಯಾವುದೇ ಬದಲಾವಣೆ ಮಾಡಿಲ್ಲ

ಎಲ್ಲಾ ನಿಯಮಗಳನ್ನು ಈ ಹಿಂದಿನ ಸರಕಾರವೇ ರೂಪಿಸಿತ್ತು ರಾಜ್ಯಪಾಲರು ನೋಟಿಸ್ ನೀಡಿದರೆ ನಾನು ಉತ್ತರ ಕೊಡುತ್ತೇನೆ ಮೂಲೆ ನಿಮಿಷ ಹಂಚಿಕೆಯಲ್ಲಿ ಯಾವುದೇ ನಿಯಮ ಉಲ್ಲಂಘಿಸಿಲ್ಲ ನಿಯಮದಂತೆ ಕೆ.ಐಎಡಿಬಿ ಮೂಲೆ ನಿವೇಶನ ಹಂಚಿಕೆ ಮಾಡಲಾಗಿದೆ ವಾಣಿಜ್ಯ ಇಲಾಖೆಯಲ್ಲಿ ಹರಾಜು ಹಾಕುವ ಪದ್ಧತಿ ಇಲ್ಲ ವಾಣಿಜ್ಯ ನಿವೇಶನಗಳನ್ನು ಮಾತ್ರ ಹರಾಜು ಹಾಕಲಾಗುತ್ತದೆ.ಈ ಬಗ್ಗೆ ಇಲಾಖೆಯ ವೆಬ್ಸೈಟ್ನಲ್ಲಿ ಜಾಹೀರಾತು ನೀಡಿದ್ದೇನೆ. ಪಾರದರ್ಶಕವಾಗಿ ಕೆಐಎಡಿಬಿ ಮೂಲೆ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದರು.

ಇಷ್ಟಕ್ಕೂ ಸಿ.ಎ ನಿವೇಶನಗಳನ್ನು ಪ್ರಕಾರ ಹರಾಜು ಹಾಕುವ ಪದ್ದತಿಯಿಲ್ಲ. ವಾಣಿಜ್ಯ ಉದ್ದೇಶದ ನಿವೇಶನಗಳನ್ನು ಮಾತ್ರ ಹರಾಜು ಹಾಕಲು ಅವಕಾಶ ಇದೆ.ಸಿ.ಎ ನಿವೇಶನಗಳ ಹಂಚಿಕೆಗಾಗಿ ಪತ್ರಿಕೆಗಳಲ್ಲಿ ವ್ಯಾಪಕ ಪ್ರಚಾರ ಕೊಡುವುದರ ಜತೆಗೆ ಇಲಾಖಾ ವೆಬ್ ಸೈಟ್ ನಲ್ಲೂ ಪ್ರಕಟಿಸಲಾಗಿದೆ. ವೆಬ್ ಸೈಟ್ ನಲ್ಲಿ ಹಾಕುವ ವ್ಯವಸ್ಥೆ ಮೊದಲು ಇರಲಿಲ್ಲ. ಇದು‌ ಮೊದಲು ಎಂದು ತಿಳಿಸಿದರು.

ಸಿ.ಎ ನಿವೇಶನಗಳ ಹಂಚಿಕೆಯನ್ನು ಹಿಂದೆಲ್ಲ ಸರ್ಕಾರದಿಂದ ಅನುಮೋದನೆ ಪಡೆದು ನೇರವಾಗಿ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಹಂಚಿಕೆ ಹೆಚ್ಚು ಪಾರದರ್ಶಕವಾಗಿ ನಡೆಯಲಿ ಎನ್ನುವ ಕಾರಣಕ್ಕೆ ಮೊದಲು ಸಿ.ಇ.ಒ., ಇವರ ಅಧ್ಯಕ್ಷತೆಯಲ್ಲಿನ ಉಪಸಮಿತಿ ಅರ್ಹತೆಯನ್ನು ಪರಿಶೀಲಿಸಿ ಇಲಾಖಾ ಸಚಿವರ ಅಧ್ಯಕ್ಷತೆಯ ರಾಜ್ಯ ಮಟ್ಟದ ಏಕ ಗವಾಕ್ಷಿ ಸಮಿತಿಗೆ ಶಿಫಾರಸ್ಸು ಮಾಡಿದ ನಂತರ ಈ ರಾಜ್ಯ ಮಟ್ಟದ ಸಮಿತಿ ತೀರ್ಮಾನದ ಮೂಲಕ ಅರ್ಹರಿಗೇ ಹಂಚಿಕೆ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದರು.

ಈ ಸಮಿತಿಯಲ್ಲಿ ಅಭಿವೃದ್ಧಿ ಆಯುಕ್ತರು, ಇಲಾಖಾ ಪ್ರಧಾನ ಕಾರ್ಯದರ್ಶಿ, ಇತರೆ ಇಲಾಖೆಯ ಪ್ರಧಾನ ಕಾರ್ಯದರ್ಶಿ/ಇಲಾಖಾ ಮುಖ್ಯಸ್ಥರು, ಕೈಗಾರಿಕಾ ಆಯುಕ್ತರು, ಸಿ.ಇ.ಒ., ಕೆಐಎಡಿಬಿ, ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಉದ್ಯೋಗ ಮಿತ್ರ ಹಾಗೂ ಇತರೆ ಎಲ್ಲಾ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಸದಸ್ಯರಾಗಿರುತ್ತಾರೆ.ಈ ಬಾರಿ ಒಟ್ಟು 377.69 ಎಕರೆ ಪ್ರದೇಶದ 193 ನಿವೇಶನಗಳಿಗೆ ಅರ್ಜಿ ಅಹ್ವಾನಿಸಲಾಗಿದ್ದರೂ ಕೇವಲ 43 ನಿವೇಶನಗಳನ್ನು (96.59 ಎಕರೆ) ಮಾತ್ರ ಹಂಚಿಕೆ ಮಾಡಲಾಗಿದೆ. ಅಂದರೆ ಅಂದಾಜು 25% ಮಾತ್ರ ಹಂಚಿಕೆ ಮಾಡಿದ್ದು ಉಳಿದ ನಿವೇಶನಗಳು ಹಂಚಿಕೆಗೆ ಬಾಕಿ ಇವೆ ಎಂದು ತಿಳಿಸಿದರು.

ಒಂದೊಂದೇ ಅರ್ಜಿ ಬಂದ ಪ್ರಕರಣಗಳಲ್ಲಿ ಅಂತಹ ಹಂಚಿಕೆಯನ್ನು ಮಾಡಲು ಅವಕಾಶವಿದ್ದರೂ (ಇದು ಟೆಂಡರ್ ಪ್ರಕ್ರಿಯೆ ಅಲ್ಲ) ಇದನ್ನು ಪರಿಗಣಿಸದೆ ಹೊಸದಾಗಿ ನೋಟಿಫಿಕೇಷನ್ ಮಾಡಲಾಗುತ್ತಿದೆ. ಇದರಿಂದ ಅರ್ಹರಿಗೆ ಇನ್ನಷ್ಟೂ ಅವಕಾಶ ಲಭ್ಯವಾಗಲಿದೆ. 41 ಕಡೆ ಒಂದೊಂದೇ ಅರ್ಜಿ ಬಂದಿತ್ತು. ಅದನ್ನು ಮತ್ತೆ ಹೊಸದಾಗಿ ಕರೆದಿದ್ದೇವೆ. ಮತ್ತೊಂದು ವಿಶೇಷ ಅಂದರೆ ಇದೇ ಮೊದಲ ಬಾರಿಗೆ ಸಿ.ಎ ನಿವೇಶನಗಳ ಹಂಚಿಕೆಯಲ್ಲೂ ಪರಿಶಿಷ್ಟ ಜಾತಿ/ಪಂಗಡದವರಿಗೆ ಶೇ 24.10 ರಷ್ಟು ಮೀಸಲಿಡುವ ಐತಿಹಾಸಿಕ ತೀರ್ಮಾನ ನನ್ನ ಅವಧಿಯಲ್ಲಿ ಆಗಿದೆ ಎಂದರು.

2018ರ ಸರ್ಕಾರದ ತೀರ್ಮಾನದಂತೆ 1½ ಪಟ್ಟು ಹಂಚಿಕೆ ದರ ಇದ್ದಿದ್ದನ್ನು ದಿನಾಂಕ: 07.06.2021ರಂದು ಸರ್ಕಾರದಲ್ಲಿ prevailing allotment rate ಗೆ ಹಂಚಿಕೆ ಮಾಡಲು ತೀರ್ಮಾನಿಸಿ ಅದರಂತೆ ಕೆಐಎಡಿಬಿ ಗೆ ಸೂಚನೆ ನೀಡಲಾಗಿದೆ. ಹಾಗಾಗಿ ನನ್ನ ಅವಧಿಯಲ್ಲಿ ಸಿಎ ನಿವೇಶನಗಳ ಹಂಚಿಕೆ ದರವನ್ನು ಕಡಿಮೆ ಮಾಡಿಲ್ಲ. ಬದಲಿಗೆ ಹಂಚಿಕೆಯನ್ನು ಪಾರದರ್ಶಕವಾಗಿ ಮಾಡಲು ಕ್ರಮವಹಿಸಿದೆ.ಸಿಎ ನಿವೇಶನಗಳು ನಾಗರೀಕ ಸೌಲಭ್ಯದ ಉದ್ದೇಶಕ್ಕಾಗಿ ಮತ್ತು ಕೈಗಾರಿಕೆಗಳ ಪೂರಕ ಉದ್ಧೇಶಗಳಿಗೆ ಬಳಕೆಯಾಗುವುದರಿಂದ ಹೆಚ್ಚಿನ ದರ ವಿಧಿಸಲಾಗುತ್ತಿಲ್ಲ. ಅಲ್ಲದೇ ಕೆಐಎಡಿಬಿ ಯು no profit no loss ಸಂಸ್ಥೆಯಾಗಿರುತ್ತದೆ ಎಂದರು.

ಕೆಐಎಡಿಬಿ ನಿಯಮಾವಳಿಗಳ ನಿಯಮ 7 ರಲ್ಲಿ ಕೆಐಎಡಿಬಿ ನಿವೇಶನಗಳ ಹಂಚಿಕೆಗಾಗಿ ವ್ಯಾಪಕ ಪ್ರಚಾರ/ಪತ್ರಿಕಾ ಪ್ರಕಟಣೆ ನೀಡಬೇಕೆಂಬ ನಿಯಮವಿದ್ದು ಅದರಂತೆ ವ್ಯಾಪಕ ಪ್ರಚಾರ ನೀಡಲಾಗಿದೆ. ಹಾಗಾಗಿ ನಿಯಮ ಉಲ್ಲಂಘನೆಯಾಗಿಲ್ಲ.ಬೆಂಗಳೂರು ಮಾತ್ರವಲ್ಲದೇ ರಾಜ್ಯದ 21 ಜಿಲ್ಲೆಗಳಲ್ಲೂ ಇರುವ ಸಿಎ ನಿವೇಶನಗಳ ಹಂಚಿಕೆಗೆ ಅರ್ಜಿ ಅಹ್ವಾನಿಸಿ ಹಂಚಿಕೆ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.

Share. Facebook Twitter LinkedIn WhatsApp Email

Related Posts

ಹೇಮಾವತಿ ನದಿಯ ನಾಲೆಗೆ ಕಾರು ಉರುಳಿ ಬಿದ್ದು ಇಬ್ಬರು ಸಾವು: ಕೊಚ್ಚಿ ಹೋದ ಮತ್ತಿಬ್ಬರು

24/08/2025 5:15 PM1 Min Read

ಕುಂಕುಮ ಇಡುವ ವೇಳೆ ಅನುಚಿತ ವರ್ತನೆ ಆರೋಪ: ದೇವಸ್ಥಾನದಲ್ಲೇ ಅರ್ಚಕನಿಗೆ ಹಿಗ್ಗಾಮುಗ್ಗಾ ಥಳಿತ

24/08/2025 4:42 PM1 Min Read

SIT ತನಿಖೆಯಿಂದ ಧರ್ಮಸ್ಥಳದ ಅಪಪ್ರಚಾರ ಹಿಂದಿನ ಮುಖವಾಡ ಕಳಚಿ, ಸತ್ಯ ಬಯಲಿಗೆ: ಸಚಿವ ರಾಮಲಿಂಗಾರೆಡ್ಡಿ

24/08/2025 4:23 PM2 Mins Read
Recent News

ಹೇಮಾವತಿ ನದಿಯ ನಾಲೆಗೆ ಕಾರು ಉರುಳಿ ಬಿದ್ದು ಇಬ್ಬರು ಸಾವು: ಕೊಚ್ಚಿ ಹೋದ ಮತ್ತಿಬ್ಬರು

24/08/2025 5:15 PM

SHOCKING: ಋತುಚಕ್ರ ನಿಲ್ಲಿಸಲು ಮಾತ್ರೆ ಸೇವಿಸಿದ ವಿದ್ಯಾರ್ಥಿನಿ ಸಾವು | Period-Delaying Pills Side Effects

24/08/2025 5:02 PM

ಕುಂಕುಮ ಇಡುವ ವೇಳೆ ಅನುಚಿತ ವರ್ತನೆ ಆರೋಪ: ದೇವಸ್ಥಾನದಲ್ಲೇ ಅರ್ಚಕನಿಗೆ ಹಿಗ್ಗಾಮುಗ್ಗಾ ಥಳಿತ

24/08/2025 4:42 PM

SIT ತನಿಖೆಯಿಂದ ಧರ್ಮಸ್ಥಳದ ಅಪಪ್ರಚಾರ ಹಿಂದಿನ ಮುಖವಾಡ ಕಳಚಿ, ಸತ್ಯ ಬಯಲಿಗೆ: ಸಚಿವ ರಾಮಲಿಂಗಾರೆಡ್ಡಿ

24/08/2025 4:23 PM
State News
KARNATAKA

ಹೇಮಾವತಿ ನದಿಯ ನಾಲೆಗೆ ಕಾರು ಉರುಳಿ ಬಿದ್ದು ಇಬ್ಬರು ಸಾವು: ಕೊಚ್ಚಿ ಹೋದ ಮತ್ತಿಬ್ಬರು

By kannadanewsnow0924/08/2025 5:15 PM KARNATAKA 1 Min Read

ಹಾಸನ: ಜಿಲ್ಲೆಯ ಹೇಮಾವತಿ ನದಿ ನಾಲೆಗೆ ಕಾರೊಂದು ಉರುಳಿ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿ, ಮತ್ತಿಬ್ಬರು ಕೊಚ್ಚಿ ಹೋಗಿರುವಂತ ಶಂಕೆ…

ಕುಂಕುಮ ಇಡುವ ವೇಳೆ ಅನುಚಿತ ವರ್ತನೆ ಆರೋಪ: ದೇವಸ್ಥಾನದಲ್ಲೇ ಅರ್ಚಕನಿಗೆ ಹಿಗ್ಗಾಮುಗ್ಗಾ ಥಳಿತ

24/08/2025 4:42 PM

SIT ತನಿಖೆಯಿಂದ ಧರ್ಮಸ್ಥಳದ ಅಪಪ್ರಚಾರ ಹಿಂದಿನ ಮುಖವಾಡ ಕಳಚಿ, ಸತ್ಯ ಬಯಲಿಗೆ: ಸಚಿವ ರಾಮಲಿಂಗಾರೆಡ್ಡಿ

24/08/2025 4:23 PM

ಸೆಪ್ಟೆಂಬರ್​ 2025ರಲ್ಲಿ ಎರಡೆರಡು ಗ್ರಹಣಗಳು; ಗರ್ಭಿಣಿಯರು ಏನು ಮಾಡಬೇಕು? ಏನು ಮಾಡಬಾರದು?

24/08/2025 4:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.