ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಚನ್ನಪಟ್ಟಣದಲ್ಲಿ ಆಗಸ್ಟ್ 30 ರಂದು ರಾಜ್ಯ ಸರ್ಕಾರದ ಬೃಹತ್ ಉದ್ಯೋಗ ಮೇಳ ಆಯೋಜಿಸುವುದಾಗಿ ಘೋಷಿಸಿದೆ.
ಈ ಕುರಿತು ಸಚಿವ ಡಾ.ಶರನಪ್ರಕಾಶ್ ಪಾಟೀಲ್ ಮಾಹಿತಿ ನೀಡಿದ್ದು, ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಉದ್ಯೋಗ ಮೇಳ ಯಶಸ್ವಿಯಾಗಿದ್ದು, ಎಲ್ಲಾ ಕಡೆಯೂ ಉದ್ಯೋಗ ಮೇಳ ಆಯೋಜಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದರು. ಅದರಂತೆ ಆ.30 ರಂದು ಚನ್ನಪಟ್ಟಣದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಬೆಂಗಳೂರಿನ ಶಿವಾಜಿನಗರದ 100 ಹಾಸಿಗೆಗಳ ಸಾಮರ್ಥ್ಯದ ಅತ್ಯಾಧುನಿಕ ಚರಕ ಆಸ್ಪತ್ರೆಯು ಸೆಪ್ಟೆಮಬರ್ 1 ರಂದು ಉದ್ಘಾಟನೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.