Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಲ್ಲಿ ಅನಧಿಕೃತ `ಬೈಕ್ ಟ್ಯಾಕ್ಸಿ’ ವಿರುದ್ಧ ‘ಸಾರಿಗೆ ಇಲಾಖೆ’ ಸಮರ : ನಿನ್ನೆ ಒಂದೇ ದಿನ 103 ‘ಬೈಕ್ ಟ್ಯಾಕ್ಸಿ’ ಸೀಜ್, ತಲಾ 5,000 ರೂ.ದಂಡ.!

17/06/2025 1:46 PM

BREAKING : ಐಶ್ವರ್ಯಾಗೌಡ ವಿರುದ್ಧ ಚಿನ್ನಾಭರಣ ವಂಚನೆ ಕೇಸ್ : ಮಾಜಿ ಸಂಸದ ಡಿ.ಕೆ. ಸುರೇಶ್ ಗೆ `ED’ ಅಧಿಕಾರಿಗಳಿಂದ ಸಮನ್ಸ್

17/06/2025 1:25 PM

BIG NEWS : ಹೆಣಗಳ ಮೇಲಿನ ರಾಜಕೀಯ ಬಿಜೆಪಿ ಪಾಲಿಗೆ ಹೊಸದೇನಲ್ಲ : ರಾಜೀನಾಮೆ ಕೇಳಿದ ಬಿಜೆಪಿ ನಾಯಕರಿಗೆ ‘CM ಸಿದ್ದರಾಮಯ್ಯ’ ತಿರುಗೇಟು..!

17/06/2025 1:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರಿಗೆ ಗೌರವ ನೀಡುವುದನ್ನು ಕಲಿಯಬೇಕು: ಆರ್.ಅಶೋಕ್
KARNATAKA

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರಿಗೆ ಗೌರವ ನೀಡುವುದನ್ನು ಕಲಿಯಬೇಕು: ಆರ್.ಅಶೋಕ್

By kannadanewsnow0924/08/2024 4:00 PM

ಬೆಂಗಳೂರು: ರಾಜ್ಯಪಾಲರು ವಿಧೇಯಕ ವಾಪಸ್ ಕಳುಹಿಸಿದಾಗ ಅದಕ್ಕೆ ಸ್ಪಷ್ಟೀಕರಣ ಕೊಟ್ಟು ಮನವರಿಕೆ ಮಾಡುವುದು ಸರ್ಕಾರದ ಕರ್ತವ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರಿಗೆ ಗೌರವ ನೀಡುವುದನ್ನು ಕಲಿಯಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಮುಜರಾಯಿ ಇಲಾಖೆಗೆ ಸಂಬಂಧಿಸಿದ ವಿಧೇಯಕ ಸೇರಿದಂತೆ ಹಲವು ವಿಧೇಯಕಗಳನ್ನು ರೂಪಿಸಿದೆ. ಇಂತಹ ವಿಧೇಯಕಗಳ ಸಾಧಕ-ಬಾಧಕಗಳ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡುವ ಅಧಿಕಾರ ರಾಜ್ಯಪಾಲರಿಗೆ ಇದೆ. ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಅಂದಿನ ರಾಜ್ಯಪಾಲರಾಗಿದ್ದ ಹಂಸರಾಜ್ ಭಾರದ್ವಾಜ್ ಹತ್ತಾರು ವಿಧೇಯಕಗಳನ್ನು ವಾಪಸ್ ಕಳುಹಿಸಿದ್ದರು ಎಂದರು.

ರಾಜಭವನ ಎಂದರೆ ಬಿಜೆಪಿ ಕಚೇರಿ ಎನ್ನುವುದು ಹಳಸಿದ ಮಾತು.‌ ವಿಧೇಯಕವನ್ನು ಮರಳಿ ಕಳುಹಿಸಿದರೆ ಅದಕ್ಕೆ ಸರ್ಕಾರ ಸ್ಪಷ್ಟೀಕರಣ ಕೊಟ್ಟು ಗೊಂದಲ ನಿವಾರಿಸಬೇಕು. ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಡುವುದು ಸರ್ಕಾರದ ಕರ್ತವ್ಯ. ಈ ಕರ್ತವ್ಯ ಮಾಡದೇ ಇದ್ದಲ್ಲಿ ಅದು ಸರ್ಕಾರದ ನಿರ್ಲಕ್ಷ್ಯವೇ ಹೊರತು ರಾಜ್ಯಪಾಲರ ತಪ್ಪಲ್ಲ. ಸರ್ಕಾರ ತಪ್ಪು ಮಾಡಿ ಅದನ್ನು ರಾಜ್ಯಪಾಲರ ಮೇಲೆ ಹೇರುವುದು ಸರಿಯಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರಿಗೆ ಗೌರವ ನೀಡುವುದನ್ನು ಕಲಿಯಬೇಕು ಎಂದರು.

ನಾವು ಸರ್ಕಾರ ಬೀಳಿಸಲ್ಲ

ಬಿಜೆಪಿ ಎಂದಿಗೂ ಸರ್ಕಾರ ಬೀಳಿಸುವ ಪ್ರಯತ್ನ ಮಾಡಿಲ್ಲ. ಅಂತಹ ಅವಶ್ಯಕತೆ ನಮಗಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಯಾರು ಸಿಎಂ ಆಗಬೇಕೆಂದು ಮ್ಯೂಸಿಕಲ್ ಚೇರ್ ನಂತೆ ಸ್ಪರ್ಧೆ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ ಹೀಗೆ ಎಲ್ಲರೂ ಮುಖ್ಯಮಂತ್ರಿ ಆಗುತ್ತಾರೆ ಎಂಬ ಮಾತು ಕೇಳಿಬರುತ್ತಿದೆ. ಕಾಂಗ್ರೆಸ್ ಶಾಸಕರಲ್ಲೇ ಈ ವಿಷಯ ಬಹಳ ಚರ್ಚೆಯಾಗುತ್ತಿದೆ ಎಂದರು.

ಲೋಕಸಭೆ ಚುನಾವಣೆಯಲ್ಲಿ ಸೋತ ಕೂಡಲೇ, ಜನರಿಗೆ ನಿಯತ್ತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ನಿಂದಿಸುತ್ತಿದ್ದಾರೆ. ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಿದ್ದು, ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೂ ಬೆಂಗಳೂರಿನ ಜನರನ್ನು ಕಾಂಗ್ರೆಸ್ ನಾಯಕರು ಹೀಯಾಳಿಸಿ ಮಾತಾಡುತ್ತಾರೆ. ಬೆಂಗಳೂರಿನ ಜನರ ಬಗ್ಗೆ ಮಾತಾಡುವ ನೈತಿಕತೆ ಅವರಿಗಿಲ್ಲ. ಜನರಿಗೆ ಕುಡಿಯುವ ನೀರು ನೀಡುವುದು ಸರ್ಕಾರದ ಕರ್ತವ್ಯ. ಹೀಗೆ ಮಾತಾಡಿದ್ದಕ್ಕೆ ಕಾಂಗ್ರೆಸ್ ಜನರ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಮೊದಲಿನಿಂದಲೂ ಹಿಂದೂಗಳಿಗೆ ರಕ್ಷಣೆ ಇಲ್ಲ. ಬಾಂಗ್ಲಾದಂತೆ ಹಿಂದೂಗಳ ಮೇಲೆ ದೌರ್ಜನ್ಯ ನಡೆಸುತ್ತೇವೆ ಎಂದು ಕಾಂಗ್ರೆಸ್ ಶಾಸಕ ಐವನ್ ಡಿಸೋಜ ಹೇಳಿದ್ದಾರೆ. ಅದಕ್ಕೆ ಹಿರಿಯ ನಾಯಕರು ಏನೂ ಸ್ಪಷ್ಟನೆ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಕಾರ್ಯಕರ್ತರ ಪಕ್ಷ

ಅರಮನೆ ಮೈದಾನದಲ್ಲಿ ನಡೆದ, ಬಿಜೆಪಿ ಸದಸ್ಯತ್ವ ಅಭಿಯಾನದ ರಾಜ್ಯಮಟ್ಟದ ಕಾರ್ಯಾಗಾರದಲ್ಲಿ ಮಾತನಾಡಿದ ಆರ್.ಅಶೋಕ, ಕಾಂಗ್ರೆಸ್ ನಲ್ಲಿ ಕುಟುಂಬದ ಕುಡಿ ಇದ್ದರೆ ಮಾತ್ರ ಇಡೀ ಪಕ್ಷ ಜೀವಂತವಾಗಿರುತ್ತದೆ.‌ ಆದರೆ ಬಿಜೆಪಿ ಕಾರ್ಯಕರ್ತರಿಂದ ನಡೆಯುವ ಪಕ್ಷ. ಇಲ್ಲಿ ಕಾರ್ಯಕರ್ತರೇ ಮುಖ್ಯ. ಸದಸ್ಯತ್ವದ ಅಭಿಯಾನ ಮಾಡಿದರೆ ಒಬ್ಬ ವ್ಯಕ್ತಿಯನ್ನು ಬಿಜೆಪಿಗೆ ಬದ್ಧತೆಯಿಂದ ಸೇರಿಸಿದಂತಾಗುತ್ತದೆ‌ ಎಂದರು.

ಕಾಂಗ್ರೆಸ್ ಸರ್ಕಾರದ ದೋಷಗಳ ವಿರುದ್ಧ ಬಿಜೆಪಿ ನಿರಂತರವಾಗಿ ಹೋರಾಟ ಮಾಡುತ್ತಿದೆ. ಗ್ಯಾರಂಟಿಗಳ ಮೋಸದ ವಿರುದ್ಧ ಹೋರಾಟ, ಭ್ರಷ್ಟಾಚಾರದ ವಿರುದ್ಧ ಪಾದಯಾತ್ರೆ ಮೊದಲಾದವುಗಳ ಮೂಲಕ ಬಿಜೆಪಿ ಸಮರ್ಥವಾಗಿ ಕೆಲಸ ಮಾಡುತ್ತಿದೆ. 136 ಶಾಸಕರ ಬಲವಿದ್ದರೂ ಸಿಎಂ ಸಿದ್ದರಾಮಯ್ಯ ಸದನದಲ್ಲಿ ಉತ್ತರ ನೀಡದೆ ಪಲಾಯನ ಮಾಡಿದ್ದಾರೆ. ಬಿಜೆಪಿಯ ಹೋರಾಟದ ಫಲವಾಗಿ ಕಾಂಗ್ರೆಸ್ ಸರ್ಕಾರ ಈಗ ನಡುಗುತ್ತಿದೆ. ಈ ಮೂಲಕ ಪಕ್ಷ ಬಲವಾಗಿದೆ ಎಂದರು.

ಬಿಜೆಪಿಯನ್ನು ಸದಸ್ಯತ್ವ ಅಭಿಯಾನದ ಮೂಲಕ ಇನ್ನಷ್ಟು ಬಲಗೊಳಿಸಬೇಕು‌‌. ಹೆಚ್ಚು ಜನರನ್ನು ಪಕ್ಷಕ್ಕೆ ಸೇರಿಸಬೇಕು ಎಂದು ಸಲಹೆ ನೀಡಿದರು.

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ: NC ಜೊತೆಗಿನ ಮೈತ್ರಿಯ ಬಗ್ಗೆ ಬಿಜೆಪಿ ಟೀಕೆಗೆ ಕಾಂಗ್ರೆಸ್ ತಿರುಗೇಟು

ಉಕ್ರೇನ್ ಗೆ ನಾಲ್ಕು ‘ಭೀಷ್ಮ್ ಕ್ಯೂಬ್’ ಗಳನ್ನು ಉಡುಗೊರೆಯಾಗಿ ನೀಡಿದ ಭಾರತ | BHISHM Cubes

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಅನಧಿಕೃತ `ಬೈಕ್ ಟ್ಯಾಕ್ಸಿ’ ವಿರುದ್ಧ ‘ಸಾರಿಗೆ ಇಲಾಖೆ’ ಸಮರ : ನಿನ್ನೆ ಒಂದೇ ದಿನ 103 ‘ಬೈಕ್ ಟ್ಯಾಕ್ಸಿ’ ಸೀಜ್, ತಲಾ 5,000 ರೂ.ದಂಡ.!

17/06/2025 1:46 PM1 Min Read

BREAKING : ಐಶ್ವರ್ಯಾಗೌಡ ವಿರುದ್ಧ ಚಿನ್ನಾಭರಣ ವಂಚನೆ ಕೇಸ್ : ಮಾಜಿ ಸಂಸದ ಡಿ.ಕೆ. ಸುರೇಶ್ ಗೆ `ED’ ಅಧಿಕಾರಿಗಳಿಂದ ಸಮನ್ಸ್

17/06/2025 1:25 PM1 Min Read

BIG NEWS : ಹೆಣಗಳ ಮೇಲಿನ ರಾಜಕೀಯ ಬಿಜೆಪಿ ಪಾಲಿಗೆ ಹೊಸದೇನಲ್ಲ : ರಾಜೀನಾಮೆ ಕೇಳಿದ ಬಿಜೆಪಿ ನಾಯಕರಿಗೆ ‘CM ಸಿದ್ದರಾಮಯ್ಯ’ ತಿರುಗೇಟು..!

17/06/2025 1:18 PM3 Mins Read
Recent News

BREAKING : ಬೆಂಗಳೂರಲ್ಲಿ ಅನಧಿಕೃತ `ಬೈಕ್ ಟ್ಯಾಕ್ಸಿ’ ವಿರುದ್ಧ ‘ಸಾರಿಗೆ ಇಲಾಖೆ’ ಸಮರ : ನಿನ್ನೆ ಒಂದೇ ದಿನ 103 ‘ಬೈಕ್ ಟ್ಯಾಕ್ಸಿ’ ಸೀಜ್, ತಲಾ 5,000 ರೂ.ದಂಡ.!

17/06/2025 1:46 PM

BREAKING : ಐಶ್ವರ್ಯಾಗೌಡ ವಿರುದ್ಧ ಚಿನ್ನಾಭರಣ ವಂಚನೆ ಕೇಸ್ : ಮಾಜಿ ಸಂಸದ ಡಿ.ಕೆ. ಸುರೇಶ್ ಗೆ `ED’ ಅಧಿಕಾರಿಗಳಿಂದ ಸಮನ್ಸ್

17/06/2025 1:25 PM

BIG NEWS : ಹೆಣಗಳ ಮೇಲಿನ ರಾಜಕೀಯ ಬಿಜೆಪಿ ಪಾಲಿಗೆ ಹೊಸದೇನಲ್ಲ : ರಾಜೀನಾಮೆ ಕೇಳಿದ ಬಿಜೆಪಿ ನಾಯಕರಿಗೆ ‘CM ಸಿದ್ದರಾಮಯ್ಯ’ ತಿರುಗೇಟು..!

17/06/2025 1:18 PM

Shocking: ಅನೈತಿಕ ಸಂಬಂಧದ ಶಂಕೆ: ಪತ್ನಿಯ ಗುಪ್ತಾಂಗಕ್ಕೆ ಖಾರದ ಪುಡಿ ಹಾಕಿ ಕಬ್ಬಿಣದಿಂದ ಸುಟ್ಟ ಪತಿ

17/06/2025 1:11 PM
State News
KARNATAKA

BREAKING : ಬೆಂಗಳೂರಲ್ಲಿ ಅನಧಿಕೃತ `ಬೈಕ್ ಟ್ಯಾಕ್ಸಿ’ ವಿರುದ್ಧ ‘ಸಾರಿಗೆ ಇಲಾಖೆ’ ಸಮರ : ನಿನ್ನೆ ಒಂದೇ ದಿನ 103 ‘ಬೈಕ್ ಟ್ಯಾಕ್ಸಿ’ ಸೀಜ್, ತಲಾ 5,000 ರೂ.ದಂಡ.!

By kannadanewsnow5717/06/2025 1:46 PM KARNATAKA 1 Min Read

ಬೆಂಗಳೂರು : ರಾಜ್ಯಾಧ್ಯಂತ ಬೈಕ್ ಟ್ಯಾಕ್ಸಿ ಸೇವೆಗಳನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿತ್ತು. ಬೆಂಗಳೂರಿನಲ್ಲಿ ನಿಷೇಧದ ನಡುವೆ ಬೈಕ್ ಟ್ಯಾಕ್ಸಿ ಚಲಾಯಿಸಿದ…

BREAKING : ಐಶ್ವರ್ಯಾಗೌಡ ವಿರುದ್ಧ ಚಿನ್ನಾಭರಣ ವಂಚನೆ ಕೇಸ್ : ಮಾಜಿ ಸಂಸದ ಡಿ.ಕೆ. ಸುರೇಶ್ ಗೆ `ED’ ಅಧಿಕಾರಿಗಳಿಂದ ಸಮನ್ಸ್

17/06/2025 1:25 PM

BIG NEWS : ಹೆಣಗಳ ಮೇಲಿನ ರಾಜಕೀಯ ಬಿಜೆಪಿ ಪಾಲಿಗೆ ಹೊಸದೇನಲ್ಲ : ರಾಜೀನಾಮೆ ಕೇಳಿದ ಬಿಜೆಪಿ ನಾಯಕರಿಗೆ ‘CM ಸಿದ್ದರಾಮಯ್ಯ’ ತಿರುಗೇಟು..!

17/06/2025 1:18 PM

BREAKING : ಮುಂದಿನ ತಿಂಗಳು ವಿಜಯಪುರದಲ್ಲಿ ರಾಜ್ಯ ಸಚಿವ ಸಂಪುಟ ಸಭೆ | Karnataka Cabinet Meeting

17/06/2025 1:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.