ಕೊಪ್ಪಳ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಕರ್ನಾಟಕ ರಾಜ್ಯವನ್ನು ಬಿಟ್ಟು ಹೋಗುವಂತೆ ಅಭಿಯಾನ ಮಾಡಲಾಗುತ್ತದೆ ಎಂದು ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಸಂವಿಧಾನದ ಕೊಲೆ ಆಗುತ್ತಿದೆ. ಅಡ್ಡದಾರಿ ಹಿಡಿದು ಸರ್ಕಾರಕ್ಕೆ ತೊಂದರೆ ಕೊಡುವ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ನಡೆಯುತ್ತಲೇ ಇದೆ. ಕಪ್ಪು ಚುಕ್ಕೆ ಇಲ್ಲದ ಸಿಎಂ ಗೆ ಮಾನಸಿಕವಾಗಿ ಕುಗ್ಗಿಸಲು ಬಿಜೆಪಿ ಹೊರಟಿದೆ ಸಿಎಂ ತಪ್ಪು ಮಾಡಿದ್ದರೆ ನಮ್ಮ ಹೈಕಮಾಂಡ್ ಸುಮ್ಮನೆ ಇರುತ್ತಿತ್ತಾ ಅಥವಾ ಕಾನೂನು ಸುಮ್ಮನೆ ಇರುತ್ತಿತ್ತ? ಎಂದು ಕಿಡಿ ಕಾರಿದರು.
ರಾಜಕೀಯದಲ್ಲಿ ಸಿಎಂ ಸಿದ್ದರಾಮಯ್ಯಗೆ ಯಾವುದೇ ಕಪ್ಪು ಚುಕ್ಕೆ ಇಲ್ಲ.ನಮ್ಮ ಸರ್ಕಾರವನ್ನು ಕುಗ್ಗಿಸುವ ಬಿಜೆಪಿ ತಂತ್ರಕ್ಕೆ ನಾವು ಹೆದರಲ್ಲ. ರಾಜ್ಯಪಾಲ ಗೆಹ್ಲೋಟ್ ಅವರ ನಡೆ ಇಡಿ ರಾಜ್ಯದ ಜನರಿಗೆ ಗೊತ್ತಾಗಿದೆ. ರಾಜ್ಯಪಾಲರು ಬಿಜೆಪಿಯ ತಾಳಕ್ಕೆ ತಕ್ಕ ಹಾಗೆ ಕುಣಿಯುತ್ತಿದ್ದಾರೆ.ರಾಜ್ಯಪಾಲ ಗೆಹ್ಲೊಟ್ ಮೊದಲು ಕರ್ನಾಟಕ ಬಿಟ್ಟು ಹೋಗಲಿ. ರಾಜ್ಯಪಾಲರು ರಾಜ ಬಿಟ್ಟು ಹೋಗುವಂತೆ ಅಭಿಯಾನ ಮಾಡುತ್ತೇವೆ ಎಂದು ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ ಸಚಿವ ಶಿವರಾಜ್ ತಂಗಡಗಿ ಆಕ್ರೋಶ ಹೊರ ಹಾಕಿದರು.
ಇನ್ನೂ ಸಿಎಂ ಕುರ್ಚಿಗಾಗಿ ಮ್ಯೂಸಿಕಲ್ ಚೇರ್ ಆಡುತ್ತಿದ್ದಾರೆಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆಗೆ ಸಚಿವ ಶಿವರಾಜ್ ತಂಗಡಿಗೆ ತಿರುಗೇಟು ನೀಡಿದ್ದು, ಬಿಜೆಪಿಯಲ್ಲಿ ಮ್ಯೂಸಿಕಲ್ ಚೇರ್ ಆಡಿ ಮೂರು ಸಿಎಂ ಬದ್ಲಾವಣೆ ಆದರು. ನಮ್ಮಲ್ಲಿ ಅಂತಹ ಮ್ಯೂಸಿಕಲ್ ಚೇರ್ ಇಲ್ಲ ಎಂದು ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ ಸಚಿವ ಶಿವರಾಜ್ ತಂಗಡಿಗೆ ಹೇಳಿಕೆ ನೀಡಿದರು.
ಸಿಎಂ ಸಿದ್ದರಾಮಯ್ಯ ಬಗ್ಗೆ ಮಾತನಾಡೋಕೆ ಬಿಜೆಪಿಗೆ ಯೋಗ್ಯತೆ ಇಲ್ಲ. ಎಚ್ ಡಿ ಕುಮಾರಸ್ವಾಮಿ ಗೆ SIT ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಕೇಳಲಾಗಿದೆ.ಆದರೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲು ಹಿಂದೇಟು ಹಾಕುತ್ತಿದ್ದಾರೆ.ಇದನ್ನು ನೋಡಿದರೆ ಮೋದಿ ಹೇಳಿದಂತೆ ರಾಜ್ಯಪಾಲರು ಕುಣಿಯುತ್ತಿದ್ದಾರೆ ಎಂದು ಶಿವರಾಜ್ ತಂಗಡಗಿ ಆರೋಪಿಸಿದರು.