ಬೆಂಗಳೂರು: ನಗರದ ದಾಸರಹಳ್ಳಿಯಲ್ಲಿ ಡಬಲ್ ಮರ್ಡರ್ ಮಾಡಿರುವಂತ ಘಟನೆ ನಡೆದಿದೆ. ಮಲತಂದೆಯಿಂದಲೇ ಇಬ್ಬರು ಹೆಣ್ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿರುವುದಾಗಿ ತಿಳಿದು ಬಂದಿದೆ.
ಬೆಂಗಳೂರಿನ ದಾಸರಹಳ್ಳಿಯ ಕಾವೇರಿ ಲೇಔಟ್ ನಲ್ಲಿ ಮಲತಂದೆಯಿಂದಲೇ ಮಚ್ಚಿನಿಂದ ಕೊಚ್ಚಿ ಇಬ್ಬರು ಹೆಣ್ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿರುವುದಾಗಿ ತಿಳಿದು ಬಂದಿದೆ.
ಉತ್ತರ ಭಾರತ ಮೂಲದ ವ್ಯಕ್ತಿಯಿಂದ ಇಬ್ಬರು ಹೆಣ್ಣುಮಕ್ಕಳನ್ನು ಮರ್ಡರ್ ಮಾಡಿರುವುದಾಗಿ ಹೇಳಲಾಗುತ್ತಿದೆ. ಸುಮಾರು 14 ವರ್ಷ ಹಾಗೂ 15 ವರ್ಷದ ಇಬ್ಬರು ಹೆಣ್ಣುಮಕ್ಕಳನ್ನು ಹತ್ಯೆ ಮಾಡಲಾಗಿದೆ. ಇಬ್ಬರನ್ನು ಮರ್ಡರ್ ಮಾಡಿರುವಂತ ಆರೋಪಿ ಅಲ್ಲಿಂದ ಪರಾರಿಯಾಗಿರುವುದಾಗಿ ತಿಳಿದು ಬಂದಿದೆ.
ಈ ಸಂಬಂಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ವಿಷಯ ತಿಳಿದು ಘಟನಾ ಸ್ಥಳಕ್ಕೆ ಈಶಾನ್ಯ ವಿಭಾಗದ ಡಿಸಿಪಿ ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರಿಗರ ಗಮನಕ್ಕೆ : ‘ಕೃಷ್ಣ ಜನ್ಮಾಷ್ಟಮಿ’ ಪ್ರಯುಕ್ತ ‘ಇಸ್ಕಾನ್ ಟೆಂಪಲ್’ ಬಳಿ ಸಂಚಾರ ಮಾರ್ಗ ಬದಲಾವಣೆ