ಬೆಂಗಳೂರು : ರಾಜ್ಯದಲ್ಲಿ ಕಳೆದ ಬಾರಿ ಮಳೆ ಆಗದೆ ರೈತರು ಹಾಗೂ ಜನರು ತೀವ್ರ ಸಂಕಷ್ಟವನ್ನು ಎದುರಿಸಿದ್ದರು. ಆದರೆ ಈ ಬಾರಿ ರಾಜ್ಯದಲ್ಲಿ ವಾಡಿಕೆಗಿಂತ ಅತಿ ಹೆಚ್ಚು ಮಳೆಯಾಗಿದೆ ಇದರ ಪರಿಣಾಮ ಅನೇಕ ಕಡೆ ಅವಾಂತರಗಳು ಸೃಷ್ಟಿಯಾಗಿವೆ. ಇದರ ಮಧ್ಯ ಇದೀಗ ಬೆಂಗಳೂರಿನ ಬಿಬಿಎಂಪಿ ಮುಖ್ಯ ಕಚೇರಿಯ ಎದುರುಗಡೆ ಇರುವ ರಸ್ತೆಯೇ ಕುಸಿದಿದೆ.
ಹೌದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಕಚೇರಿಯ ಮುಂದಿನ ರಸ್ತೆ ಕುಸಿದಿದೆ. ದೇವಾಂಗ ಹಾಸ್ಟೆಲ್ ಕಡೆಗೆ ಹೋಗುವ ರಸ್ತೆಯಲ್ಲಿ ರಸ್ತೆ ಕುಸಿದಿದೆ. ರಸ್ತೆ ಕುಸಿದಿದ್ದರಿಂದ ಚರಂಡಿ ನೀರು ಹೊರಗೆ ಹರಿಯುತ್ತಿದೆ. ರಸ್ತೆ ಕುಸಿತ ಜಾಗದಲ್ಲಿ ಸದ್ಯ ಟ್ರಾಫಿಕ್ ಪೊಲೀಸರು ಬ್ಯಾರಿಕೆಡ್ ಅಳವಡಿಸಿದ್ದಾರೆ. ಇದರಿಂದ ಸಾರ್ವಜನಿಕರು ಬಿಬಿಎಂಪಿ ನಿರ್ಲಕ್ಷದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.
ಸಹಜವಾಗಿ ರಸ್ತೆ ಚರಂಡಿ ವಿದ್ಯುತ್ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳನ್ನು ಬಿಬಿಎಂಪಿ ಸಿಲಿಕಾನ್ ಸಿಟಿ ಜನರಿಗೆ ಒದಗಿಸುತ್ತದೆ. ಎಲ್ಲೇ ರಸ್ತೆಗಳಲ್ಲಿ ತೆಗ್ಗು ಗುಂಡಿ ಬಿದ್ದರೂ ಸಹ ಬಿಬಿಎಂಪಿ ಸಿಬ್ಬಂದಿಗಳು ಬಂದು ಸರಿ ಪಡಿಸುತ್ತಿದ್ದರು. ಆದರೆ ಇದೀಗ ಬಿಬಿಎಂಪಿ ಕಶೇರಿಯ ಮುಂಭಾಗದಲ್ಲಿಯೇ ರಸ್ತೆ ಕುಸಿದಿದ್ದರಿಂದ ಸಹಜವಾಗಿ ಸಾರ್ವಜನಿಕರು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.ಅಲ್ಲದೆ ಆದಷ್ಟು ಬೇಗ ಬಿಬಿಎಂಪಿ ಚುನಾವಣೆ ನಡೆಸಿ ಎಂದು ಆಗ್ರಹಿಸಿದ್ದಾರೆ.