ಬೆಂಗಳೂರು : ಬೆಂಗಳೂರಿನ ಕಾವೇರಿಪುರದ ಮನೆಯಲ್ಲಿ ಇಬ್ಬರು ಹೆಣ್ಣು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದಂತಹ ಘಟನೆಗೆ ಸಂಬಂಧಿಸಿದಂತೆ ಅಮೃತಹಳ್ಳಿ ಠಾಣೆಯ ಪೊಲೀಸರು ಆರೋಪಿ ಮಲತಂದೆ ಸುಮಿತ್ ನನ್ನು ಬಂಧಿಸಿದ್ದಾರೆ.
ಹೌದು ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಆರೋಪಿ ಸುಮಿತ್ ನನ್ನು ಬಂಧಿಸಿದ್ದಾರೆ. ನಿನ್ನೆ ರಾತ್ರಿ ಅಮೃತಹಳ್ಳಿ ಠಾಣೆಯ ಪೋಲಿಸರಿಂದ ಆರೋಪಿ ಸಮೀತ್ ಪಂಧನವಾಗಿದೆ. ಬೆಂಗಳೂರುನ್ನು ತೊರೆಯಲು ಸುಮಿತ್ ರೈಲ್ವೆ ನಿಲ್ದಾಣಕ್ಕೆ ಬಂದಿದ್ದ ಎನ್ನಲಾಗಿದೆ. ರಾತ್ರಿ ಯಶವಂತಪುರ ರೈಲ್ವೆ ನಿಲ್ದಾಣಕ್ಕೆ ಸುಮಿತ್ ಬಂದಿದ್ದ. ಈ ವೇಳೆ ಟಿಕೆಟ್ ಗಾಗಿ ಮೊಬೈಲ್ ಆನ್ ಮಾಡಿದ್ದಾನೆ.
ಕೆಲವೇ ಸೆಕೆಂಡ್ ಆನ್ ಮಾಡಿ ಮತ್ತೆ ಮೊಬೈಲ್ ಆಫ್ ಮಾಡಿದ್ದ. ಅಷ್ಟೊತ್ತಿಗೆ ಆಗಲೇ ಆರೋಪಿಯನ್ನು ಪೊಲೀಸರು ಆತನನ್ನು ಸುತ್ತುವರೆದಿದ್ದರರು. ಆರೋಪಿಯನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಕಾವೇರಿಪುರದ ನಿವಾಸದಲ್ಲಿರುವ ತನ್ನ ಇಬ್ಬರು ಮಕ್ಕಳನ್ನು ಮಚ್ಚಿನಿಂದ ಭೀಕರವಾಗಿ ಕೊಲೆ ಮಾಡಿ ಆರೋಪಿಸುಮಿತ್ ಅಲ್ಲಿಂದ ಪರಾರಿಯಾಗಿದ್ದ. ಪ್ರಕರಣವನ್ನು ದಾಖಲಿಸಿಕೊಂಡಿದ್ದ ಅಮೃತ ಹಳೆಯ ಠಾಣೆಯ ಪೊಲೀಸರು ಸುಮಿತ್ ಗಾಗಿ ತೀವ್ರ ಶೋಧ ನಡೆಸಿದರು ನಿನ್ನೆ ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು ಇದೀಗ ವಿಚಾರಣೆಗೆ ಒಳಪಡಿಸಿದ್ದಾರೆ.