ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ರಾಜಾತಿಥ್ಯ, ಹಾಗೂ ಕಾಫಿ ಸಿಗರೇಟ್ ಮತ್ತು ವಿಡಿಯೋ ಕಾಲ್ ವಿಚಾರವಾಗಿ ಇಂದು ಗೃಹ ಸಚಿವ ಜಿ.ಪರಮೇಶ್ವರ ಅವರನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಹಾಗೂ ಕಾನೂನು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಮೋಹನ್ ಅವರು ಭೇಟಿ ಮಾಡಿದ್ದಾರೆ.
ಪ್ರಕರಣದ ಕುರಿತು ಗೃಹ ಸಚಿವರಿಗೆ ಪೊಲೀಸ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. A2 ಆರೋಪಿ ನಟ ದರ್ಶನ್ ಗೆ ಸಿಗರೇಟ್ ಸೇವನೆಗೆ ಅವಕಾಶ ನೀಡಿರುವುದು ಹಾಗೂ ವಿಡಿಯೋ ಕಾಲ್ ಮಾಡಲು ವ್ಯವಸ್ಥೆ ಕಲ್ಪಿಸಿರುವುದರ ಬಗ್ಗೆ ಪೊಲೀಸ್ ಅಧಿಕಾರಿಗಳು ಗೃಹ ಸಚಿವ ಜಿ ಪರಮೇಶ್ವರ್ ಅವರಿಗೆ ಮಾಹಿತಿ ನೀಡಿದರು.ಆದರೆ ರಾತ್ರಿಯೆ ಪರಮೇಶ್ವರ್ ಅವರು ದೂರವಾಣಿ ಮೂಲಕ ಘಟನೆ ಕುರಿತಂತೆ ಮಾಹಿತಿ ಪಡೆದಿದ್ದರು.
ನಿನ್ನೆ ರಾತ್ರಿ ಜಿ.ಪರಮೇಶ್ವರ್ ಅವರು ಕಾರಾಗೃಹದ ಡಿಜಿ ಮಾಲಿನಿ ಕೃಷ್ಣಮೂರ್ತಿ ಅವರಿಗೆ ದೂರವಾಣಿ ಕರೆಯ ಮೂಲಕ ಘಟನೆ ಕುರಿತು ಚರ್ಚಿಸಿದ್ದಾರೆ ವೇಳೆ ಜೈಲಿನ ಆಂತರಿಕ ತನಿಖೆ ನಡೆಸಿ ವರದಿ ಸಲ್ಲಿಸಿ ಎಂದು ಜಿ ಪರಮೇಶ್ವರ ಅವರು ಸಿಟ್ಟಾಗಿದ್ದಾರೆ. ಇದೀಗ ಬೆಂಗಳೂರ್ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಮೋಹನ್ ಭೇಟಿ ಮಾಡಿ ವರದಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.