Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಭಾರಿ ಮಳೆ ಹಿನ್ನೆಲೆ : ಈ ಜಿಲ್ಲೆಗಳಲ್ಲಿ ಇಂದು ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

05/07/2025 7:18 AM

BREAKING : ಮೈಸೂರಲ್ಲಿ ಹುಲಿ ದಾಳಿಗೆ ಒಂದು ಹಸು ಬಲಿ, ಎರಡು ಹಸುಗಳಿಗೆ ಗಂಭೀರ ಗಾಯ : ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ!

05/07/2025 7:13 AM

BREAKING: ವಾಣಿಜ್ಯ ವಾಹನ ಮಾಲೀಕರಿಗೆ ಗುಡ್ ನ್ಯೂಸ್: ಎಲಿವೇಟೆಡ್ ಹೆದ್ದಾರಿ ಭಾಗಗಳಿಗೆ ಟೋಲ್ ಶೇ.50ರಷ್ಟು ಕಡಿತ

05/07/2025 7:11 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ‘SC, ST ವರ್ಗ’ದವರಿಗೆ ಗುಡ್ ನ್ಯೂಸ್: ‘ಒಳಮೀಸಲಾತಿ ಜಾರಿ’ಗೆ ಮುಂದಾದ ‘ರಾಜ್ಯ ಸರ್ಕಾರ’
KARNATAKA

GOOD NEWS: ‘SC, ST ವರ್ಗ’ದವರಿಗೆ ಗುಡ್ ನ್ಯೂಸ್: ‘ಒಳಮೀಸಲಾತಿ ಜಾರಿ’ಗೆ ಮುಂದಾದ ‘ರಾಜ್ಯ ಸರ್ಕಾರ’

By kannadanewsnow0928/08/2024 6:32 PM

ಬೆಂಗಳೂರು: ರಾಜ್ಯ ಸರ್ಕಾರದಿಂದ ಎಸ್ಸಿ, ಎಸ್ಟಿ ಸಮುದಾಯದವರಿಗೆ ಗುಡ್ ನ್ಯೂಸ್ ಎನ್ನುವಂತೆ ಒಳಮೀಸಲಾತಿ ಜಾರಿಗೊಳಿಸಲು ಮುಂದಾಗಿದೆ. ಸಿಎಂ ಸಿದ್ಧರಾಮಯ್ಯ ಬಳಿಗೆ ಮಾದಿಗ ಮುಖಂಡರ ನಿಯೋಗ ಭೇಟಿ ನೀಡಿದಾಗ, ಸುಪ್ರೀಂ ಕೋರ್ಟ್ ತೀರ್ಪು ಜಾರಿಗೆ ಬದ್ಧನೆಂದು ಅವರು ಅಭಯ ನೀಡಿರುವುದಾಗಿ ತಿಳಿದು ಬಂದಿದೆ.

ಸುಪ್ರೀಂ ಕೋರ್ಟ್ ತೀರ್ಪಿನ ಅನ್ವಯ ಒಳಮೀಸಲಾತಿ ಜಾರಿಗೆ ತುರ್ತು ಕ್ರಮಕೈಗೊಳ್ಳುವಂತೆ ಕಾಂಗ್ರೆಸ್ ಪಕ್ಷದ ಮಾದಿಗ ಸಮುದಾಯದ ಮುಖಂಡರು ಸಚಿವರಾದ ಕೆ.ಎಚ್.ಮುನಿಯಪ್ಪ ಆರ್.ಬಿ.ತಿಮ್ಮಾಪೂರ್ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಬುಧವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಸಿಎಂ ಗೃಹ ಕಚೇರಿಯಲ್ಲಿ ಭೇಟಿ ಮಾಡಿದ ನಿಯೋಗದಲ್ಲಿನ ಮುಖಂಡರಾದ ಸಚಿವರಾದ ಕೆ.ಎಚ್.ಮುನಿಯಪ್ಪ ಆರ್.ಬಿ.ತಿಮ್ಮಾಪೂರ್, ಮಾಜಿ ಸಚಿವ ಎಚ್.ಆಂಜನೇಯ, ರಾಜ್ಯಸಭೆ ಮಾಜಿ ಸದಸ್ಯ ಡಾ.ಎಲ್.ಹನುಮಂತಯ್ಯ ಮಾತನಾಡಿ, ಒಳಮೀಸಲು ಜಾರಿಗೆ ಇದ್ದ ಅಡೆತಡೆಗೆ ಸುಪ್ರೀಂ ಕೋರ್ಟ್ ತೀರ್ಪು ನಿವಾರಣೆ ಮಾಡಿದೆ. ಅದೆಲ್ಲದಿಕ್ಕಿಂತಲೂ ತಾವೂ ಸದಾ ಶೋಷಿತರ ಪರ ಹೋರಾಟ, ಯೋಜನೆ ರೂಪಿಸುತ್ತಿರುವ ಹರಿಕಾರರು. ತಮ್ಮ ಸಾಮಾಜಿಕ ನ್ಯಾಯ ಬದ್ಧತೆ ಪ್ರಶ್ನಾತೀತ. ಒಳಮೀಸಲು ಜಾರಿಗೊಳಿಸಲು ತಮ್ಮಲ್ಲಿನ ಇಚ್ಛಾಶಕ್ತಿಗೆ ಬಲ ತುಂಬಲು ನಿಯೋಗದ ಮೂಲಕ ಮನವಿ ಸಲ್ಲಿಸುತ್ತಿದ್ದೇವೆ ಎಂದು ಹೇಳಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಮನವಿ ಪತ್ರವನ್ನು ಓದಿದ ಮಾಜಿ ಸಚಿವ ಎಚ್.ಆಂಜನೇಯ, ಮಾದಿಗ ಸಮುದಾಯಕ್ಕೆ ನ್ಯಾಯವಾಗಿ ದೊರಕಬೇಕಾಗಿದ್ದ ಮೀಸಲಾತಿ ಪ್ರಮಾಣ ನಿರೀಕ್ಷೆಮಟ್ಟದಲ್ಲಿ ದೊರೆತಿಲ್ಲ. ಈ ಸತ್ಯವನ್ನು ಅರಿತು ಜೊತೆಗೆ ಬಹಳಷ್ಟು ವರದಿಗಳನ್ನು ಮುಂದಿಟ್ಟುಕೊಂಡು ಒಳಮೀಸಲು ಜಾರಿಗೆ ಮಾದಿಗ ಸಮುದಾಯ ಸತತ ಮೂವತ್ತು ವರ್ಷಗಳಿಂದ ಹೋರಾಟ ನಡೆಸಿಕೊಂಡು ಬಂದಿದೆ ಎಂದರು.

ನಿರಂತರ ಹೋರಾಟದ ಫಲ ಒಳ ಮೀಸಲಾತಿ ವರ್ಗೀಕರಣಕ್ಕಾಗಿ ಸುಪ್ರೀಂ ಕೋರ್ಟ್ ಅಸ್ತು ಎಂದಿದೆ. ಜೊತೆಗೆ ಒಳ ಮೀಸಲಾತಿ ಕಲ್ಪಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆಯೆಂದು ಐತಿಹಾಸಿಕ ತೀರ್ಪನ್ನು ನೀಡಿದೆ.

ಈಗಾಗಲೇ ತೆಲಂಗಾಣ ಮತ್ತು ಆಂಧ್ರ ಪ್ರದೇಶ ಸರ್ಕಾರಗಳು ಒಳ ಮೀಸಲಾತಿ ವರ್ಗೀಕರಣಕ್ಕೆ ಮುಂದಾಗಿವೆ. ಅದೇ ರೀತಿ ತಾವು ಕೂಡ ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದು ಶೀಘ್ರ ಜಾರಿಗೊಳಿಸುವ ಮೂಲಕ ಸಮುದಾಯದ ಸಮಗ್ರ ಪ್ರಗತಿಗೆ ಮುಂದಾಗಬೇಕೆಂದು ಕೋರಿದರು.

ಮುಖ್ಯವಾಗಿ ಈಗಾಗಲೇ ಕೆ.ಪಿ.ಎಸ್.ಸಿ ಸೇರಿ ವಿವಿಧ ಇಲಾಖೆಗಳ ಮೂಲಕ ಘೋಷಿತವಾಗಿರುವ ಪರೀಕ್ಷೆಗಳನ್ನು ಒಳಮೀಸಲು ಜಾರಿಗೊಳ್ಳುವವರೆಗೂ ತಡೆ ಹಿಡಿಯಬೇಕು ಹಾಗೂ 384 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗೆ ಆಗಸ್ಟ್ 27 ರಂದು ನಡೆದಿರುವ ಪೂರ್ವಭಾವಿ ಪರೀಕ್ಷೆಗೆ ಸಂಬಂಧಿಸಿದಂತಹ ಮುಂದೆ ನಡೆಯುವ ಮುಖ್ಯ ಪರೀಕ್ಷೆಯಲ್ಲಿ ಒಳ ಮೀಸಲಾತಿ ಹಂಚಿಕೆ ಪ್ರಕಾರ ನಡೆಸುವ ಹುದ್ದೆಗಳು ಹಂಚಿಕೆಯಾಗುವಂತೆ ಷರತ್ತು ವಿಧಿಸಿ ನೋಟಿಫಿಕೇಷನ್ ಮಾಡಬೇಕು ಎಂದು ಮನವಿ ಮಾಡಿದರು.

ಒಳ ಮೀಸಲಾತಿ ಜಾರಿಗೊಳ್ಳುವವರೆಗೆ ರಾಜ್ಯ ಸರ್ಕಾರದ ಯಾವುದೇ ಇಲಾಖೆಗಳ ಹುದ್ದೆಗಳನ್ನು ತುಂಬುವ ಪ್ರಕ್ರಿಯೆಗಳು ನಡೆಯಬಾರದು ಹಾಗೂ ಸರ್ಕಾರದ ಯೋಜನೆಗಳಲ್ಲಿ ಆರ್ಥಿಕ ಮೀಸಲಾತಿ (SCSP/TSP), ಕೆ.ಐ.ಎ.ಡಿ.ಬಿ ಮತ್ತು ನಗರಾಭಿವೃದ್ಧಿ ಪ್ರಾಧಿಕಾರಗಳ ನಿವೇಶನಗಳನ್ನು ಹಂಚಿಕೆ ಮಾಡುವ ಪ್ರಕ್ರಿಯೆಯೂ ಸ್ಥಗಿತಗೊಳಿಸಬೇಕು.

ಸುಪ್ರೀಂ ಕೋರ್ಟ್ ತೀರ್ಪು ಬಂದ ತಕ್ಷಣ ತೆಲಂಗಾಣ, ಆಂಧ್ರ ಪ್ರದೇಶ, ಪಂಜಾಬ್, ಹರಿಯಾಣ ಮತ್ತಿತರ ರಾಜ್ಯಗಳ ಸರ್ಕಾರವೂ ಒಳ ಮೀಸಲಾತಿ ಜಾರಿಗೆ ಆಗುವವರೆಗೂ ಖಾಲಿಯಿರುವ ಹುದ್ದೆಗಳಿಗೆ ಕರೆದಿರುವ ಪ್ರಕ್ರಿಯೆಗಳಿಗೆ ತಕ್ಷಣ ತಡೆ ಹಿಡಿದಿದ್ದಾರೆ. ಅದೇ ಮಾರ್ಗವನ್ನು ರಾಜ್ಯದಲ್ಲೂ ಅನುಸರಿಸಬೇಕು ಎಂದು ಕೋರಿದರು.
ಸರ್ವರಿಗೂ ಸಮ ಪಾಲು-ಸಮ ಬಾಳು, ಸಾಮಾಜಿಕ ನ್ಯಾಯ, ಸಮಾನತೆಗಾಗಿ ಹೋರಾಟ ಮಾಡಿಕೊಂಡು ಬಂದಿರುವ ಅಹಿಂದ ವರ್ಗದ ನೇತಾರ ಆಗಿರುವ ತಾವು ನೊಂದ ಜನರ ಕುರಿತು ಅಂತಃಕರಣ ಹೃದಯ ಹೊಂದಿದ್ದಿರಾ. ಆದ್ದರಿಂದ ಶೋಷಿತರಲ್ಲೇ ಶೋಷಿತರು, ಅಸ್ಪೃಶ್ಯರಲ್ಲೇ ಅಸ್ಪೃಶ್ಯರು ಆದ ಮಾದಿಗ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಸುಪ್ರೀಂ ಕೋರ್ಟ್ ತೀರ್ಪಿನ ಅನ್ವಯ ಒಳ ಮೀಸಲು ಜಾರಿಗೆಗಾಗಿ ತಕ್ಷಣ ಆದೇಶ ಹೊರಡಿಸಬೇಕೆಂದು ವಿನಯಪೂರ್ವಕವಾಗಿ ವಿನಂತಿಸುತ್ತೇವೆ ಎಂದು ವಿನಂತಿಸಿದರು.

ಎಲ್ಲ ಮುಖಂಡರ ಮಾತು ಆಲಿಸಿ, ಮನವಿ ಪತ್ರ ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ನೊಂದ, ಅಸ್ಪೃಶ್ಯ ಸಮಾಜದ ನೋವಿನ ಅರಿವು ನನಗಿದೆ. ಒಳಮೀಸಲು ವಿಷಯದಲ್ಲಿ ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸಿದಂತೆ ಅದನ್ನು ಸ್ವಾಗತಿಸಿದ್ದೇನೆ. ಅದರರ್ಥ ನಾನು ನೊಂದ ಜನರ ಪರ ಎಂದರ್ಥ ಎನ್ನುವ ಮೂಲಕ ಒಳಮೀಸಲು ಜಾರಿಗೊಳಿಸುವ ಅಭಯ ನೀಡಿದರು.

ನಮ್ಮದು ರಾಷ್ಟ್ರೀಯ ಪಕ್ಷ. ಜೊತೆಗೆ ಸಚಿವ ಸಂಪುಟದಲ್ಲಿ ಈ ವಿಷಯ ತೀರ್ಮಾನಗೊಳ್ಳಬೇಕು. ನಾನು ಹಾಗೂ ಪಕ್ಷ ಸದಾ ನೊಂದ ಜನರ ಪರವಾಗಿ ಇರುವುದು ಎಂದು ಹೇಳಿದರು.

ಶಾಸಕರಾದ ಮಾಯಕೊಂಡದ ಕೆ.ಎಸ್.ಬಸವಂತಪ್ಪ ನೆಲಮಂಗಲದ ಶ್ರೀನಿವಾಸ್, ಮಾಜಿ ಸಚಿವ ಎಂ.ಶಿವಣ್ಣ,, ವಿಧಾನ ಪರಿಷತ್ತು ಸದಸ್ಯರಾದ ಡಾ.ಡಿ. ತಿಮ್ಮಯ್ಯ ನಿಯೋಗದಲ್ಲಿದ್ದರು.

BIG NEWS: ಕರ್ನಾಟಕ ಡಿಜಿಟಲ್ ಜಾಹೀರಾತು ಮಾರ್ಗಸೂಚಿ ಜಾರಿ: ಡಿಜಿಟಲ್ ಮಾಧ್ಯಮಗಳಿಗೆ ಸರ್ಕಾರಿ ಜಾಹೀರಾತು

BREAKING: ಆರ್ಜಿ ಕಾರ್ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಸದಸ್ಯತ್ವ ಅಮಾನತುಗೊಳಿಸಿದ ಐಎಂಎ | R G Kar Medical College

BREAKING : ನಟ ದರ್ಶನ್ ಗೆ ಜೈಲೇ ಗತಿ : ಸೆ.9ರವರೆಗೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿ ಕೋರ್ಟ್ ಆದೇಶ | Actor Darshan

ಬಿಜೆಪಿ ಕೇಂದ್ರ ಸರ್ಕಾರದ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿವರ್ತನೆ ಪರ್ವ ಆರಂಭ…!

Share. Facebook Twitter LinkedIn WhatsApp Email

Related Posts

BREAKING : ಭಾರಿ ಮಳೆ ಹಿನ್ನೆಲೆ : ಈ ಜಿಲ್ಲೆಗಳಲ್ಲಿ ಇಂದು ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

05/07/2025 7:18 AM1 Min Read

BREAKING : ಮೈಸೂರಲ್ಲಿ ಹುಲಿ ದಾಳಿಗೆ ಒಂದು ಹಸು ಬಲಿ, ಎರಡು ಹಸುಗಳಿಗೆ ಗಂಭೀರ ಗಾಯ : ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ!

05/07/2025 7:13 AM1 Min Read

BIG NEWS : ಲಿಂಗಾಯಿತ ಧರ್ಮದಲ್ಲಿರುವ ಜಂಗಮರು ‘ಬೇಡ’ & ‘ಬುಡ್ಗ’ ಜಂಗಮರಲ್ಲ : ಹೈಕೋರ್ಟ್

05/07/2025 6:14 AM1 Min Read
Recent News

BREAKING : ಭಾರಿ ಮಳೆ ಹಿನ್ನೆಲೆ : ಈ ಜಿಲ್ಲೆಗಳಲ್ಲಿ ಇಂದು ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

05/07/2025 7:18 AM

BREAKING : ಮೈಸೂರಲ್ಲಿ ಹುಲಿ ದಾಳಿಗೆ ಒಂದು ಹಸು ಬಲಿ, ಎರಡು ಹಸುಗಳಿಗೆ ಗಂಭೀರ ಗಾಯ : ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ!

05/07/2025 7:13 AM

BREAKING: ವಾಣಿಜ್ಯ ವಾಹನ ಮಾಲೀಕರಿಗೆ ಗುಡ್ ನ್ಯೂಸ್: ಎಲಿವೇಟೆಡ್ ಹೆದ್ದಾರಿ ಭಾಗಗಳಿಗೆ ಟೋಲ್ ಶೇ.50ರಷ್ಟು ಕಡಿತ

05/07/2025 7:11 AM

ಭಯೋತ್ಪಾದನೆ ಮಾನವೀಯತೆಯ ಶತ್ರು, ಅದಕ್ಕೆ ಯಾವುದೇ ಆಶ್ರಯವನ್ನು ನಿರಾಕರಿಸಲು ಒಂದಾಗಬೇಕು: ಪ್ರಧಾನಿ ಮೋದಿ

05/07/2025 6:57 AM
State News
KARNATAKA

BREAKING : ಭಾರಿ ಮಳೆ ಹಿನ್ನೆಲೆ : ಈ ಜಿಲ್ಲೆಗಳಲ್ಲಿ ಇಂದು ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

By kannadanewsnow0505/07/2025 7:18 AM KARNATAKA 1 Min Read

ಚಿಕ್ಕಮಗಳೂರು / ಶಿವಮೊಗ್ಗ : ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಭಾರಿ ಪ್ರಮಾಣದಲ್ಲಿ ಮಳೆ…

BREAKING : ಮೈಸೂರಲ್ಲಿ ಹುಲಿ ದಾಳಿಗೆ ಒಂದು ಹಸು ಬಲಿ, ಎರಡು ಹಸುಗಳಿಗೆ ಗಂಭೀರ ಗಾಯ : ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ!

05/07/2025 7:13 AM

BIG NEWS : ಲಿಂಗಾಯಿತ ಧರ್ಮದಲ್ಲಿರುವ ಜಂಗಮರು ‘ಬೇಡ’ & ‘ಬುಡ್ಗ’ ಜಂಗಮರಲ್ಲ : ಹೈಕೋರ್ಟ್

05/07/2025 6:14 AM

BREAKING : ರಾಜ್ಯದಲ್ಲಿ ಸರಣಿ ‘ಹೃದಯಾಘಾತ’ ಸಾವುಗಳಿಗೆ ಇದೆ ಕಾರಣ : ತಜ್ಞರ ವರದಿಯಲ್ಲಿ ಬಯಲಾಯ್ತು ಸ್ಪೋಟಕ ಅಂಶ!

05/07/2025 6:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.