ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಅವರನ್ನು ಇಂದು ಬೆಳ್ಳಂಬೆಳಗ್ಗೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗುತ್ತಿದ್ದು, ಬೆಲೊರೊ ವಾಹನದಿಂದ ಇದೀಗ ನಟ ದರ್ಶನ್ ರನ್ನು ಟಿಟಿ ವಾಹನಕ್ಕೆ ಶಿಫ್ಟ್ ಮಾಡಲಾಗಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ವಿಚಾರವಾಗಿ ನಟ ದರ್ಶನ್ ಅವರನ್ನು ಬಳ್ಳಾರಿಯ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದ್ದು, ಪೊಲೀಸರು ಏಕಾಏಕಿ ರೂಟ್ ಮ್ಯಾಪ್ ಬದಲಾಯಿಸಿದ್ದಾರೆ. ಚಿತ್ರದುರ್ಗದ ಬದಲು ಆಂಧ್ರ ಮಾರ್ಗವಾಗಿ ಬಳ್ಳಾರಿಗೆ ಹೋಗಲಿದ್ದಾರೆ. ಪರಪ್ಪನ ಅಗ್ರಹಾರದಿಂದ ಸಿಲ್ಕ್ ಬೋರ್ಡ್. ಹೆಬ್ಬಾಳ, ಯಲಹಂಕ, ದೇವನಹಳ್ಳಿ, ಚಿಕ್ಕಬಳ್ಳಾಪುರ, ಬಾಗೇಪಲ್ಲಿ, ಪೆನಗೊಂಡ, ಅನಂತಪುರ ಮಾರ್ಗವಾಗಿ ಬಳ್ಳಾರಿಗೆ ಎಂಟ್ರಿ ಕೊಡಲಿದ್ದಾರೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿ ರಾಜಾತಿಥ್ಯ ನೀಡಿದ ಹಿನ್ನೆಲೆಯಲ್ಲಿ ನಟ ದರ್ಶನ್ ರನ್ನು ಸ್ಥಳಾಂತರಿಸುವ ಪ್ರಕ್ರಿಯೆ ಆರಂಭವಾಗಿದ್ದು, ಬೆಂಗಳೂರಿನಿಂದ ಬಳ್ಳಾರಿಯ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ನಟ ದರ್ಶನ್ ಅವರನ್ನು ಮುಂಜಾನೆ 4 ಗಂಟೆ ಸುಮಾರಿಗೆ ಬೋಲೇರೋ ವಾಹನದಲ್ಲಿ ಬಳ್ಳಾರಿ ಸೆಂಟ್ರಲ್ ಜೈಲಿಗೆ ಕರೆದುಕೊಂಡು ಹೋಗಲಾಗುತ್ತಿದೆ.
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ರನ್ನು ನ್ಯಾಯಾಲಯದ ಆದೇಶದಂತೆ ಪೊಲೀಸ್ ಭದ್ರತೆಯಲ್ಲಿ ಬಳ್ಳಾರಿಯ ಸೆಂಟ್ರಲ್ ಜೈಲಿಗೆ ಸ್ಥಳಾಂತರಿಸಲಾಗುತ್ತಿದೆ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಬಳ್ಳಾರಿ ಜೈಲು ತಲುಪಲಿದ್ದಾರೆ ಎನ್ನಲಾಗಿದೆ.