Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಸೋಲನ್‌ನಲ್ಲಿ ಸಿಲಿಂಡರ್ ಸ್ಫೋಟ: ಬೆಂಕಿಯ ಕೆನ್ನಾಲಿಗೆಗೆ 7 ವರ್ಷದ ಕಂದಮ್ಮ ಬಲಿ, ಅವಶೇಷಗಳಡಿ 9 ಮಂದಿ ಸಿಲುಕಿರುವ ಶಂಕೆ!

12/01/2026 11:59 AM

ಗಾಂಧಿ ಆಶ್ರಮದಲ್ಲಿ ಜರ್ಮನ್ ನಾಯಕ: ಚಾನ್ಸಲರ್ ಫ್ರೆಡ್ರಿಕ್ ಮೆರ್ಜ್‌ಗೆ ಆತ್ಮೀಯ ಸ್ವಾಗತ ಕೋರಿದ ಪ್ರಧಾನಿ ಮೋದಿ

12/01/2026 11:51 AM

BREAKING: ಬಾಹ್ಯಾಕಾಶದಲ್ಲಿ ಭಗ್ನಗೊಂಡ ಭಾರತದ ಕನಸು: 16 ಉಪಗ್ರಹಗಳ ಹೊತ್ತು ಸಾಗಿದ್ದ PSLV-C62 ವಿಫಲ | ISRO

12/01/2026 11:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈತರಿಗೆ ಗುಡ್ ನ್ಯೂಸ್: ಸೆ.2ರಿಂದ ರಾಜ್ಯಾಧ್ಯಂತ ‘1-5 ನಮೂನೆ ಡಿಜಿಟಲ್ ಪೋಡಿ’ ದುರಸ್ಥಿ ಅಭಿಯಾನ
KARNATAKA

ರೈತರಿಗೆ ಗುಡ್ ನ್ಯೂಸ್: ಸೆ.2ರಿಂದ ರಾಜ್ಯಾಧ್ಯಂತ ‘1-5 ನಮೂನೆ ಡಿಜಿಟಲ್ ಪೋಡಿ’ ದುರಸ್ಥಿ ಅಭಿಯಾನ

By kannadanewsnow0931/08/2024 4:50 AM

ಬೆಂಗಳೂರು : ಸೆಪ್ಟೆಂಬರ್‌ 2 ರಿಂದ 1-5 ನಮೂನೆ ಪೋಡಿ ದುರಸ್ಥಿ ಕಾರ್ಯವನ್ನು ಅಭಿಯಾನ ಮಾದರಿಯಲ್ಲಿ ರಾಜ್ಯಾದ್ಯಂತ ಜಾರಿಗೊಳಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ದಶಕಗಳಿಂದ ಬಾಕಿ ಉಳಿದಿರುವ ಪೋಡಿ ದುರಸ್ಥಿ ಕಾರ್ಯಕ್ಕೆ ಚುರುಕು ನೀಡುವ ಸಂಬಂಧ ವಿಕಾಸಸೌಧದಲ್ಲಿ ಶುಕ್ರವಾರ ಎಲ್ಲಾ ಜಿಲ್ಲಾಧಿಕಾರಿಗಳು, ತಹಶೀಲ್ದಾರರು, ಕಂದಾಯ ನಿರೀಕ್ಷಕರೂ ಸೇರಿ ಇಲಾಖೆಯ ಎಲ್ಲಾ ಅಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಚಿವ ಕೃಷ್ಣ ಬೈರೇಗೌಡ ಅವರು ಸಭೆ ನಡೆಸಿದರು.

“ರಾಜ್ಯದಲ್ಲಿ ಸುಮಾರು 10 ಲಕ್ಷ ರೈತರಿಗೆ ಹತ್ತಾರು ವರ್ಷಗಳ ಹಿಂದೆ ಸರ್ಕಾರಿ ಜಮೀನು ಅಕ್ರಮ ಸಕ್ರಮದಡಿ ಮಂಜೂರಾಗಿದ್ದರೂ ಸಹ, ಪೋಡಿ ದುರಸ್ಥಿ ಆಗದೆ ಬಾಕಿ ಉಳಿದಿದೆ. ಲಕ್ಷಾಂತರ ರೈತರು ಅನೇಕ ವರ್ಷಗಳಿಂದ ಪ್ರಯತ್ನ ಮಾಡುತ್ತಿದ್ದರೂ ಸಹ, ಕೆಲವೇ ಕೆಲವರಿಗೆ ಮಾತ್ರ ಪೋಡಿ ದುರಸ್ಥಿಯಾಗಿದ್ದು ಬಹುತೇಕರಿಗೆ ಆಗಿರುವುದಿಲ್ಲ. ಇದರಿಂದಾಗಿ ಹಲವು ರೈತರು ತೀವ್ರ ತೊಂದರೆಗೆ ಸಿಲುಕಿದ್ದು, ಅಧಿಕಾರಿಗಳು ಸೆಪ್ಟೆಂಬರ್‌ 2 ರಿಂದ ಅಭಿಯಾನ ಮಾದರಿಯಲ್ಲಿ 1-5 ನಮೂನೆ ಪೋಡಿ ದುರಸ್ಥಿ ಕೆಲಸಕ್ಕೆ ಮುಂದಾಗಬೇಕು, ರೈತರ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು” ಎಂದು ಸೂಚಿಸಿದರು.

ಮುಂದುವರೆದು, “ಜಮೀನು ಮಂಜೂರಾಗಿದ್ದರೂ ಪೋಡಿಯಾಗಿ ಆರ್.ಟಿ.ಸಿ ಆಗದೆ ಇರುವುದರಿಂದ, ಅಂತಹ ರೈತರ ಪರಿಸ್ಥಿತಿ ತ್ರಿಶಂಕುವಿನಂತೆ ಆಗಿದೆ. ತಾಲ್ಲೂಕು ಕಛೇರಿ, ಸರ್ವೆ ಕಛೇರಿಗಳಿಗೆ ಅಲೆದು ಅಲೆದು ಪ್ರಯೋಜನವಾಗದೆ ತೀವ್ರ ತೊಂದರೆಗೆ ತುತ್ತಾಗಿದ್ದಾರೆ. ಈ ಬಗ್ಗೆ ಬಹಳ ವರ್ಷಗಳಿಂದ ಚರ್ಚೆಗಳು, ಪ್ರಯತ್ನಗಳು ಆಗುತ್ತಿದ್ದರೂ ಸರಿಯಾದ ಪರಿಹಾರ ದೊರೆತಿರುವುದಿಲ್ಲ.

ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯನವರು ಈ ಸಮಸ್ಯೆಯನ್ನು ಪರಿಹರಿಸಲು, ಸೂಕ್ತ ಪರಿಹಾರ ಕ್ರಮಕೈಗೊಳ್ಳಲು ಸೂಚಿಸಿದ ಹಿನ್ನೆಲೆಯಲ್ಲಿ, ಕಂದಾಯ ಇಲಾಖೆ ದುರಸ್ಥಿಗೆ ಬಾಕಿಯಿರುವ ಪ್ರಕರಣಗಳ ವಿಲೆಗೆ ವ್ಯವಸ್ಥಿತವಾದ ಯೋಜನೆ ಆರಂಭಿಸಿದೆ” ಎಂದು ಮಾಹಿತಿ ನೀಡಿದರು.

“ಈ ಹಿಂದೆ ಪೋಡಿ ದುರಸ್ಥಿ ಮಾಡಲು ಅವಶ್ಯವಿರುವ 1-5 ನಮೂನೆಗಳನ್ನು ತಯಾರಿಸಲು ಕಾಗದದ ಕಡತಗಳನ್ನು ತಯಾರಿಸಲು ಪ್ರಯತ್ನಿಸಲಾಗಿತ್ತು. ಆದರೆ, ಆ ಕೆಲಸವೂ ಸಮರ್ಪಕವಾಗಿ ಆಗಿರುವುದಿಲ್ಲ. ಆದ ಕೆಲವು ಕಡತಗಳು ಕಾಣೆಯಾಗಿವೆ ಅಥವಾ ಕೈಗೆ ಸಿಗುವುದಿಲ್ಲ. ಇದರಿಂದ ಕಡತಗಳು ಇದ್ದರೂ ಅನೇಕರಿಗೆ ಅದರ ಪ್ರಯೋಜನ ಸಿಗುತ್ತಿಲ್ಲ. ಈ ಸಮಸ್ಯೆಗಳಿಂದ ಕಂದಾಯ ಇಲಾಖೆ ಪೋಡಿ ದುರಸ್ಥಿ 1-5 ಕಡತಗಳನ್ನು ಕಂಪ್ಯೂಟರ್ಗಳನ್ನು ಬಳಸಿ ಗಣಕೀಕರಿಸಿದ (ಡಿಜಿಟಲ್‌) 1-5 ಕಡತಗಳನ್ನು ತಯಾರಿಸಲು ಆರಂಭಿಸಿದೆ.

ಡಿಜಿಟಲ್‌ ಆ್ಯಪ್ ಮುಖಾಂತರ ಮಾಡುವುದರಿಂದ ಸರಳ, ವೇಗವಾಗಿ ಕಡತಗಳನ್ನು ತಯಾರಿಸಬಹುದು. ಯಾರ ಬಳಿ ವಿಳಂಬವಾಗಿದೆ ಎಂಬುದು ಪಾರದರ್ಶಕವಿರುವುದರಿಂದ, ವೇಗವಾಗಿ ಕೆಲಸವಾಗಬಹುದು. ಮೂಲ ಮಂಜೂರಿ ದಾಖಲೆಗಳನ್ನು ಸುರಕ್ಷಿತವಾಗಿಡಬಹುದು. ಮುಂದೆ ತಿದ್ದಲು, ನಕಲು ಮಾಡಲು ಸಾಧ್ಯವಿಲ್ಲ. ಒಬ್ಬ ರೈತನಿಗೆ ತಯಾರು ಮಾಡಿದ 1-5 (ನಮೂನೆ)ಕಡತ, ಆ ಸರ್ವೆ ನಂಬರಿನ ಎಲ್ಲಾ ರೈತರಿಗೂ ಅದೇ ಕಡತ ಅನುಕೂಲವಾಗುತ್ತದೆ. 1-5(ನಮೂನೆ)ಕಡತ ಕಾಣೆಯಾಗಲು ಅಥವಾ ಕಳೆದು ಹೋಗಲು ಸಾಧ್ಯವಿಲ್ಲ” ಎಂದು ತಿಳಿಸಿದರು.

ಮುಂದುವರೆದು, “ಈ ಅಭಿಯಾನವನ್ನು ಸೆಪ್ಟೆಂಬರ್‌ 02 ರಿಂದ ರಾಜ್ಯಾದ್ಯಂತ ಆರಂಭಿಸುತ್ತಿದ್ದೇವೆ. ರಾಜ್ಯದಲ್ಲಿ ಎಲ್ಲೆಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳ ದುರಸ್ಥಿಯಾಗದೆ ಬಾಕಿ ಉಳಿದಿದೆ ಅಂತಹ ಪ್ರತಿಯೊಂದು ಕಡೆಯಲ್ಲೂ ಡಿಜಿಟಲಾಗಿ 1-5(ನಮೂನೆ)ಕಡತ ಸೆಪ್ಟೆಂಬರ್‌ 02 ರಿಂದ ತಯಾರಿ ಮಾಡಲಾಗುವುದು. 1-5(ನಮೂನೆ)ಕಡತ ಎಲ್ಲಾ ಸರ್ಕಾರಿ ಜಮೀನಿಗೆ (ರೈತರಿಗೆ ಮಂಜೂರಾಗಿರುವ), ರೈತರ ಅರ್ಜಿಗೆ ಕಾಯದೆ ಕಂದಾಯ ಇಲಾಖೆ ಸ್ವಯಂ ಕಡತಗಳನ್ನು ತಯಾರಿಸಲಿದೆ.

1-5ನಮೂನೆ ಪ್ರಕಾರ ತಯಾರಾದ ಕಡತಗಳನ್ನು ಮುಂದೆ 6-10 ಮಾಡಿ ಅವರಿಗೆ ಸರ್ವೆಯೊಂದಿಗೆ ದುರಸ್ಥಿ ಮಾಡಿದ ನಂತರ ಹೊಸ ಸರ್ವೆ ನಂಬರ್ ಪಹಣಿಯೊಂದಿಗೆ ಸಂಪೂರ್ಣ ದಾಖಲೆ ಮಾಡಿಕೊಡಲಾಗುವುದು. ಇದನ್ನು ಅಭಿಯಾನ ಮಾದರಿಯಲ್ಲಿ ಅನುಷ್ಟಾನ ಮಾಡಲಾಗುವುದು. ಇದೊಂದು ದೀರ್ಘಕಾಲದ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಿ ರೈತರಿಗೆ ನೆಮ್ಮದಿಯನ್ನು ನೀಡುವ ಅಭಿಯಾನವಾಗಲಿದೆ. ಹೀಗಾಗಿ ಎಲ್ಲಾ ಅಧಿಕಾರಿಗಳೂ ಈ ಯೋಜನೆ ಯಶಸ್ವಿಯಾಗಲು ಸಹಕರಿಸಬೇಕಿದೆ. ಆ ಮೂಲಕ ರೈತರ ದೀರ್ಘ ಕಾಲದ ಸಮಸ್ಯೆಗಳನ್ನು ಪರಿಹರಿಸಲು ತಮ್ಮಿಂದಾದ ಸಹಕಾರ ನೀಡಬೇಕಿದೆ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮನವಿ ಮಾಡಿದರು.

ಹಾಸನದಲ್ಲಿ ಯಶಸ್ವಿಯಾದ ಪೈಲಟ್‌ ಯೋಜನೆ

ಡಿಜಿಟಲಾಗಿ 1-5(ನಮೂನೆ) ಪೋಡಿ ದುರಸ್ಥಿ ಕಾರ್ಯವನ್ನು ರಾಜ್ಯಾದ್ಯಂತ ವಿಸ್ತರಿಸುವ ಮುನ್ನ ಈ ಯೋಜನೆಯನ್ನು ಹಾಸನದಲ್ಲಿ ಪ್ರಾಯೋಗಿಕವಾಗಿ ನಡೆಸಲಾಗಿದೆ. ಈ ಪ್ರಾಯೋಗಿಕ ಯೋಜನೆ ಯಶಸ್ವಿಯಾಗಿರುವುದನ್ನು ಖಚಿತಪಡಿಸಿಕೊಂಡ ನಂತರವೇ ಇದೀಗ ರಾಜ್ಯಾದ್ಯಂತ ವಿಸ್ತರಿಸಲಾಗುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ತಿಳಿಸಿದರು.

ಈ ಬಗ್ಗೆ ಗಮನ ಸೆಳೆದ ಅವರು, “ಪೋಡಿ ದುರಸ್ಥಿಗೊಳಿಸಿ ರೈತರಿಗೆ ನೆಮ್ಮದಿ ನೀಡಬೇಕು ಎಂಬ ಉದ್ದೇಶದಿಂದ ಎಂಟು ತಿಂಗಳ ಹಿಂದೆಯೇ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್‌ ಕಟಾರಿಯಾ ಹಾಗೂ ಕಂದಾಯ ಆಯುಕ್ತರಾದ ಸುನೀಲ್‌ ಕುಮಾರ್‌ ಸೇರಿ ಹಿರಿಯ ಅಧಿಕಾರಿಗಳ ಜೊತೆ ನಿರಂತರವಾಗಿ ಚರ್ಚಿಸಲಾಯಿತು. ಚರ್ಚೆಯ ಫಲವಾಗಿ ಇದೀಗ ಡಿಜಿಟಲ್‌ ಆ್ಯಪ್ ಸಿದ್ದಗೊಂಡಿದೆ. ಇದರ ಸಹಾಯದಿಂದ 1-5(ನಮೂನೆ) ಪೋಡಿ ದುರಸ್ಥಿ ಕಾರ್ಯವನ್ನು ಸುಲಭವಾಗಿ ನಿಭಾಯಿಸಬಹುದು” ಎಂದರು.

ಮುಂದುವರೆದು, “ಆ್ಯಪ್ ಗೆ ಹಾಸನದಲ್ಲಿ ಪ್ರಾಯೋಗಿಕವಾಗಿ ಚಾಲನೆ ನೀಡಿ ಕಳೆದ ಕೆಲ ತಿಂಗಳಿನಿಂದ ಪೋಡಿ ದುರಸ್ಥಿ ಕೆಲಸವನ್ನು ಯಶಸ್ವಿಯಾಗಿ ಮುನ್ನಡೆಸಲಾಗುತ್ತಿದೆ. ಇದರ ಸಹಾಯದಿಂದ ಪೋಡಿ ದುರಸ್ಥಿ ಕೆಲಸ ನೂರಕ್ಕೆ ನೂರರಷ್ಟು ಸಾಧ್ಯ ಎಂಬುದನ್ನು ಹಾಸನದಲ್ಲಿ ಸಾಧಿಸಿ ತೋರಿಸಲಾಗಿದೆ. ಹೀಗಾಗಿ ಅಧಿಕಾರಿಗಳು ಪೋಡಿ ದುರಸ್ಥಿ ಬಗ್ಗೆ ಇನ್ನೂ ಕಥೆ ಹೇಳುವ ಅಗತ್ಯವಿಲ್ಲ. ಇಲಾಖೆಯ ಬಳಿ ಪ್ರತಿ ತಾಲೂಕಿನ ಡಾಟಾ ಇದ್ದು, ದುರಸ್ಥಿ ಕೆಲಸ ಎಲ್ಲಾ ತಾಲೂಕುಗಳಲ್ಲೂ ಅಭಿಯಾನ ಮಾದರಿಯಲ್ಲಿ ಆರಂಭವಾಗಬೇಕು.

ಅಲ್ಲದೆ, ಈ ಆ್ಯಪ್ ಮೂಲಕ ಯಾವ ಫೈಲು ಯಾವ ಅಧಿಕಾರಿಯ ಬಳಿ ಎಷ್ಟು ದಿನದಿಂದ ಬಾಕಿ ಇದೆ ಎಂಬ ಮಾಹಿತಿಯನ್ನೂ ಪತ್ತೆಹಚ್ಚಬಹುದು. ಹೀಗಾಗಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಿ. ನಿಮ್ಮ ತಾಲೂಕಿನಲ್ಲಿ ದರ್ಖಾಸ್ತು ಪೋಡಿ ಆಗಬೇಕಿರುವ ಸರ್ವೇ ನಂಬರ್ ಎಷ್ಟಿದೆ ಎಂದು ಮೊದಲು ಪಟ್ಟಿ ಮಾಡಿ, ಮುಖ್ಯವಾಗಿ ಜಿಲ್ಲಾಧಿಕಾರಿಗಳು ಪ್ರತಿ ವಾರ ಗ್ರಾಮ ಆಡಳಿತ ಅಧಿಕಾರಿಯಿಂದ ತಹಶೀಲ್ದಾರ್‌ ವರೆಗೆ ಎಲ್ಲಾ ಅಧಿಕಾರಿಗಳ ಸಭೆ ನಡೆಸಿ ಸಲಹೆ ಸೂಚನೆ ನೀಡಬೇಕು, ಈ ಬಗ್ಗೆ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸೂಕ್ತ ತರಬೇತಿ ನೀಡಬೇಕು ಹಾಗೂ ಪೋಡಿ ದುರಸ್ಥಿ ಕೆಲಸದ ಬಗ್ಗೆ ನಿರಂತರ ಮೇಲುಸ್ತುವಾರಿ ನಡೆಸಬೇಕು” ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

Share. Facebook Twitter LinkedIn WhatsApp Email

Related Posts

ಬೆಳಗಾವಿಯಲ್ಲಿ ಮತ್ತೊಂದು ದುರಂತ : ಸಕ್ಕರೆ ಕಾರ್ಖಾನೆ ಕ್ರಷಿಂಗ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕ ಸಾವು!

12/01/2026 11:17 AM1 Min Read

BREAKING : ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಬಿಗ್ ಶಾಕ್ : ಮತ್ತೆ ಟಿಕೆಟ್ ದರ 5% ಏರಿಕೆಗೆ ಮುಂದಾದ ‘BMRCL’

12/01/2026 11:02 AM1 Min Read

ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ

12/01/2026 10:42 AM1 Min Read
Recent News

BREAKING: ಸೋಲನ್‌ನಲ್ಲಿ ಸಿಲಿಂಡರ್ ಸ್ಫೋಟ: ಬೆಂಕಿಯ ಕೆನ್ನಾಲಿಗೆಗೆ 7 ವರ್ಷದ ಕಂದಮ್ಮ ಬಲಿ, ಅವಶೇಷಗಳಡಿ 9 ಮಂದಿ ಸಿಲುಕಿರುವ ಶಂಕೆ!

12/01/2026 11:59 AM

ಗಾಂಧಿ ಆಶ್ರಮದಲ್ಲಿ ಜರ್ಮನ್ ನಾಯಕ: ಚಾನ್ಸಲರ್ ಫ್ರೆಡ್ರಿಕ್ ಮೆರ್ಜ್‌ಗೆ ಆತ್ಮೀಯ ಸ್ವಾಗತ ಕೋರಿದ ಪ್ರಧಾನಿ ಮೋದಿ

12/01/2026 11:51 AM

BREAKING: ಬಾಹ್ಯಾಕಾಶದಲ್ಲಿ ಭಗ್ನಗೊಂಡ ಭಾರತದ ಕನಸು: 16 ಉಪಗ್ರಹಗಳ ಹೊತ್ತು ಸಾಗಿದ್ದ PSLV-C62 ವಿಫಲ | ISRO

12/01/2026 11:24 AM

BREAKING: ಇಸ್ರೋಗೆ ಶಾಕ್: ಸತತ ಎರಡನೇ ಬಾರಿಗೆ ವಿಫಲವಾಯ್ತು PSLV-C62 ಮಿಷನ್ | ISRO

12/01/2026 11:22 AM
State News
KARNATAKA

ಬೆಳಗಾವಿಯಲ್ಲಿ ಮತ್ತೊಂದು ದುರಂತ : ಸಕ್ಕರೆ ಕಾರ್ಖಾನೆ ಕ್ರಷಿಂಗ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕ ಸಾವು!

By kannadanewsnow0512/01/2026 11:17 AM KARNATAKA 1 Min Read

ಬೆಳಗಾವಿ : ಇತ್ತೀಚಿಗೆ ತಾನೇ ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟದಿಂದ 7 ಜನ ಕಾರ್ಮಿಕರು ಸಾವನ್ನಪ್ಪಿದ್ದರು.…

BREAKING : ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಬಿಗ್ ಶಾಕ್ : ಮತ್ತೆ ಟಿಕೆಟ್ ದರ 5% ಏರಿಕೆಗೆ ಮುಂದಾದ ‘BMRCL’

12/01/2026 11:02 AM

ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ

12/01/2026 10:42 AM

BREAKING : ಹೈದರಾಬಾದ್ ದೇವಸ್ಥಾನದಲ್ಲಿ ಮೂತ್ರ ವಿಸರ್ಜನೆ ಮಾಡಿ ವಿಕೃತಿ : ಬೀದರ್ ಮೂಲದ ಯುವಕ ಅರೆಸ್ಟ್!

12/01/2026 10:40 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.