Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING: ಡೆತ್ ನೋಟ್ ಬರೆದಿಟ್ಟು ಮಗನೊಂದಿಗೆ 13ನೇ ಮಹಡಿಯಿಂದ ಹಾರಿ ಮಹಿಳೆ ಆತ್ಮಹತ್ಯೆ.!

15/09/2025 8:05 AM

BREAKING: ವಕ್ಫ್‌ ತಿದ್ದುಪಡಿ ಕಾಯ್ದೆ: ಮಧ್ಯಂತರ ಆದೇಶ ಇಂದು ಪ್ರಕಟ | Waqf Act

15/09/2025 8:03 AM

BREAKING : ಭೀಕರ ರಸ್ತೆ ಅಪಘಾತದಲ್ಲಿ ಹಣಕಾಸು ಸಚಿವಾಲಯದ ಅಧಿಕಾರಿ `ನವಜೋತ್ ಸಿಂಗ್’ ಸಾವು : ಪತ್ನಿ ಗಂಭೀರ

15/09/2025 7:55 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜನರ ಆಶೀರ್ವಾದ ಇರೋವರೆಗೆ ನನ್ನ ಯಾರು ಅಲ್ಲಾಡಿಸೋಕಾಗಲ್ಲ: ಸಿಎಂ ಸಿದ್ಧರಾಮಯ್ಯ
KARNATAKA

ಜನರ ಆಶೀರ್ವಾದ ಇರೋವರೆಗೆ ನನ್ನ ಯಾರು ಅಲ್ಲಾಡಿಸೋಕಾಗಲ್ಲ: ಸಿಎಂ ಸಿದ್ಧರಾಮಯ್ಯ

By kannadanewsnow0930/08/2024 5:21 PM

ದೇವರಗುಡ್ಡ : ನನ್ನ ವಿರುದ್ಧ ನಡೆಯುತ್ತಿರುವ BJP-JDS ನ ಸೇಡು, ಹೊಟ್ಟೆಕಿಚ್ಚಿನ ಪಿತೂರಿ ಸಹಿಸಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ರಾಣೆಬೆನ್ನೂರು ತಾಲ್ಲೂಕು ದೇವರಗುಡ್ಡದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಕಂಚಿನ ಪುತ್ಥಳಿ ಲೋಕಾರ್ಪಣೆಗೊಳಿಸಿದ ಬಳಿಕ ಕನಕಭವನವನ್ನು ಉದ್ಘಾಟಿಸಿ ಮಾತನಾಡಿದರು.

ನನ್ನ ವಿರುದ್ಧ ನಡೆಯುತ್ತಿರುವ ಷಡ್ಯಂತ್ರವನ್ನು ಸಹಿಸುತ್ತೀರಾ ಎಂದು ಕಾರ್ಯಕ್ರಮದಲ್ಲಿ ನೆರೆದಿದ್ದ ಜನಸ್ತೋಮಕ್ಕೆ ಸಿಎಂ ಪ್ರಶ್ನಿಸಿದರು.

“ನಾವು ಸಹಿಸಲ್ಲ. ರೊಚ್ಚೆಗೇಳ್ತೇವೆ” ಎಂದು ಜನಸ್ತೋಮ ಪ್ರತಿಕ್ರಿಯಿಸಿತು.

ಮಾಲತೇಶ ದೇವರ ಆಶೀರ್ವಾದ-ನಿಮ್ಮ ಪ್ರೀತಿ ನನ್ನ ಮೇಲಿರಲಿ, ದೇವರಗುಡ್ಡದಲ್ಲಿ ಪೂಜೆ ಸಲ್ಲಿಸಿದ ಬಳಿಕ ಬಹಿರಂಗ ಸಭೆಯಲ್ಲಿ ಸಿಎಂ‌ ಮನವಿ ಮಾಡಿದರು.

ನಾನು ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ ಜನರಿಗೆ ಕೊಟ್ಟ ಮಾತನ್ನು ಈಡೇರಿಸುತ್ತಿದ್ದೇವೆ. ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೂ ಹಲವು ಭಾಗ್ಯಗಳನ್ನು ಜನರ ಮಡಿಲಿಗೆ ಹಾಕುವ ಮೂಲಕ ನುಡಿದಂತೆ ನಡೆದಿದ್ದೇನೆ. ಎರಡನೇ ಬಾರಿ ಸಿಎಂ ಆಗಿ ಒಂದೇ ವರ್ಷದಲ್ಲಿ ಐದಕ್ಕೆ ಐದೂ ಗ್ಯಾರಂಟಿಗಳನ್ನೂ ಜಾರಿ ಮಾಡಿದ್ದೇನೆ ಎಂದರು.

ನಾನು ಅಸೂಯೆ ಮಾಡುವವರಿಂದ ದ್ವೇಷದ ರಾಜಕಾರಣ ಮಾಡುವವರಿಂದ ಅಧಿಕಾರಕ್ಕೆ ಬರಲಿಲ್ಲ. ಜನರ ಆಶೀರ್ವಾದದಿಂದ ಹಿಂದುಳಿದ ಸಮಾಜದ ಸಿದ್ದರಾಮಯ್ಯ ಸಿಎಂ‌ ಆಗಿರೋದು. ಜನರ ಆಶೀರ್ವಾದ ಇರುವವರೆಗೂ ನನಗೆ ಯಾರೂ ಏನೂ ಮಾಡಲಾಗುವುದಿಲ್ಲ ಎಂದು BJP-JDS ಗೆ ಎಚ್ಚರಿಕೆ ನೀಡಿದರು.

ಜಾತಿ ವ್ಯವಸ್ಥೆಯ ಈ ಸಮಾಜದಲ್ಲಿ ಅತ್ಯಂತ ಕಟ್ಟ ಕಡೆಯ ವ್ಯಕ್ತಿಗೂ ಅವಕಾಶ ಸಿಗಬೇಕು ಎಂದು ಮಹಾತ್ಮಗಾಂಧಿ ಹೇಳಿದ್ದರು. ಇದರಲ್ಲಿ ನಂಬಿಕೆ ಇಟ್ಟು ಕಾರ್ಯಕ್ರಮ ರೂಪಿಸುತ್ತಿದ್ದೇನೆ. ಇದೇ BJP-JDS ನವರಿಗೆ ಹೊಟ್ಟೆಕಿಚ್ಚು. ಈ ಹೊಟ್ಟೆಕಿಚ್ಚಿನಿಂದ ಅವರೇ ನಾಶ ಆಗುತ್ತಾರೆಯೇ ಹೊರತು ನನ್ನನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಎಚ್ಚರಿಸಿದರು.

ನಾನು ಯಾರಿಗೂ, ಯಾವುದೇ ಪಿತೂರಿ-ಷಡ್ಯಂತ್ರಕ್ಕೂ ಭಯ ಪಡುವವನಲ್ಲ. ಬ್ರಿಟೀಷರಿಗೆ ಸಿಂಹಸ್ವಪ್ನವಾಗಿದ್ದ ಗೆರಿಲ್ಲಾ ಸೇನಾನಿ ರಾಯಣ್ಣನನ್ನು ಬ್ರಿಟೀಷರಿಗೆ ಮೋಸದಿಂದ ಹಿಡಿದುಕೊಟ್ಟವರು ನಮ್ಮವರೇ. ಇಂಥಾ ದೇಶದ್ರೋಹಿಗಳು ನಮ್ಮೊಳಗೆ ಈಗಲೂ ಇದ್ದಾರೆ. ಇಂಥಾ ದೇಶದ್ರೋಹಿಗಳು ಎಲ್ಲಾ ಕಾಲದಲ್ಲೂ ಇರುತ್ತಾರೆ. ಇಂಥವರನ್ನು ನಾವು ಒಗ್ಗಟ್ಟಿನಿಂದ ಎದುರಿಸಬೇಕು, ಸೋಲಿಸಬೇಕು ಎಂದರು.

ಸಂಗೊಳ್ಳಿ ರಾಯಣ್ಣನವರ ದೇಶಪ್ರೇಮ, ಹೋರಾಟ ಮನೋಭಾವವನ್ನು ನಾವು ರೂಢಿಸಿಕೊಂಡಾಗ ಮಾತ್ರ ರಾಯಣ್ಣನ ಆಶಯ ಈಡೇರುತ್ತದೆ ಎಂದರು.

ತಿಂಥಣಿ ಕನಕ ಗುರುಪೀಠದ ಸಿದ್ದರಾಮೇಶ್ವರ ಸ್ವಾಮೀಜಿ, ನರಸೀಪುರ ಅಂಬಿಗರ ಚೌಡಯ್ಯ ಪೀಠದ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮಿಗಳು, ಕಾರ್ಣಿಕದ ನಾಗಪ್ಪಜ್ಜ ಉರ್ಮಿ, ದೇವರಗುಡ್ದದ ಕರಿಯಪ್ಪಜ್ಜ ಹಕಾರಿ ಅವರ ದಿವ್ಯಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ಶಿವಣ್ಣ ವಹಿಸಿದ್ದರು.

ಸಚಿವರಾದ ಎಚ್.ಕೆ.ಪಾಟೀಲ್, ಶಿವಾನಂದ ಪಾಟೀಲ್, ಉಪಸಭಾಪತಿಗಳಾದ ರುದ್ರಪ್ಪ ಮಾ.ಲಮಾಣಿ, ವಿಧಾನಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ಶಾಸಕರಾದ ಶ್ರೀನಿವಾಸ್ ಮಾನೆ , ಮಾಜಿ ಸಚಿವ ಶಂಕರ್, ನೆಹರೂ ಓಲೆಕಾರ್, ಗುಡ್ಡದಾಪುರ ಗ್ರಾ.ಪಂ.ಅಧ್ಯಕ್ಷರಾದ ದ್ಯಾಮವ್ವ ಮೈ ಸತಗಿ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಮಾಲತೇಶ ಸನ್ನಿಧಿಯಲ್ಲಿ ಸಿಎಂ ಸಿದ್ಧರಾಮಯ್ಯ ಅವರು, ಮಾಲತೇಶ ದೇವರ ಸನ್ನಿದಿ ದೇವರಗುಡ್ಡವನ್ನು ಪ್ರವಾಸಿಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು. ದೇವರಗುಡ್ಡ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಇರುವ ತಡೆಯಾಜ್ಞೆಯನ್ನು ತೆರವುಗೊಳಿಸಲು ಕಾನೂನು ಹೋರಾಟ ನಡೆಸಲಾಗುವುದು. ದೇವರಗುಡ್ಡಕ್ಕೆ ಎಲ್ಲಾ ಮೂಲಭೂತ ಸೌಕರ್ಯಗಳನ್ನೂ ಒದಗಿಸಲಾಗುವುದು ಎಂಬುದಾಗಿ ಘೋಷಿಸಿದರು.

ನಿವೇಶನ ಲೂಟಿ ಮಾಡುತ್ತಿರುವುದು ನಾನಾ ನೀವಾ?: ಎಂ.ಬಿ.ಪಾಟೀಲರಿಗೆ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

ಬ್ಯಾಂಕ್ ಗ್ರಾಹಕರೇ ಗಮನಿಸಿ : `ಸೆಪ್ಟೆಂಬರ್’ ತಿಂಗಳಲ್ಲಿ ಬ್ಯಾಂಕುಗಳಿಗೆ 15 ದಿನ ರಜೆ!Bank Holidays

Share. Facebook Twitter LinkedIn WhatsApp Email

Related Posts

BREAKING : ಕರ್ನಾಟಕದ ಪ್ರಸಿದ್ಧ ಜನಪದ ವಿಧ್ವಾಂಸ `ಡಾ. ಎನ್.ಆರ್.ನಾಯಕ’ ನಿಧನ | N.R. Nayak passes away

15/09/2025 7:30 AM1 Min Read

BIG NEWS : ಕುರುಬ ಸಮುದಾಯ `ST’ ಸೇರ್ಪಡೆ ಸಂಬಂಧ ನಾಳೆ ಮಹತ್ವದ ಸಭೆ ನಿಗದಿ

15/09/2025 7:19 AM1 Min Read

ರಾಜ್ಯಾದ್ಯಂತ ಇಂದು ‘ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ ಆಚರಣೆ : ಸರ್ಕಾರದಿಂದ ಮಹತ್ವದ ಆದೇಶ

15/09/2025 7:13 AM5 Mins Read
Recent News

SHOCKING: ಡೆತ್ ನೋಟ್ ಬರೆದಿಟ್ಟು ಮಗನೊಂದಿಗೆ 13ನೇ ಮಹಡಿಯಿಂದ ಹಾರಿ ಮಹಿಳೆ ಆತ್ಮಹತ್ಯೆ.!

15/09/2025 8:05 AM

BREAKING: ವಕ್ಫ್‌ ತಿದ್ದುಪಡಿ ಕಾಯ್ದೆ: ಮಧ್ಯಂತರ ಆದೇಶ ಇಂದು ಪ್ರಕಟ | Waqf Act

15/09/2025 8:03 AM

BREAKING : ಭೀಕರ ರಸ್ತೆ ಅಪಘಾತದಲ್ಲಿ ಹಣಕಾಸು ಸಚಿವಾಲಯದ ಅಧಿಕಾರಿ `ನವಜೋತ್ ಸಿಂಗ್’ ಸಾವು : ಪತ್ನಿ ಗಂಭೀರ

15/09/2025 7:55 AM

ಎಲ್ಲಾ ಅಂಗಡಿಗಳಲ್ಲಿ `GST’ ಕಡಿತದ ಫಲಕಗಳು ಕಡ್ಡಾಯ : ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

15/09/2025 7:52 AM
State News
KARNATAKA

BREAKING : ಕರ್ನಾಟಕದ ಪ್ರಸಿದ್ಧ ಜನಪದ ವಿಧ್ವಾಂಸ `ಡಾ. ಎನ್.ಆರ್.ನಾಯಕ’ ನಿಧನ | N.R. Nayak passes away

By kannadanewsnow5715/09/2025 7:30 AM KARNATAKA 1 Min Read

ಹೊನ್ನಾವರ : ಕರ್ನಾಟಕದ ಪ್ರಸಿದ್ಧ ಜನಪದ ವಿದ್ವಾಂಸ, ಸಂಶೋಧಕ ಡಾ. ಎನ್.ಆರ್. ನಾಯಕ (90) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಎನ್.ಆರ್. ನಾಯಕ…

BIG NEWS : ಕುರುಬ ಸಮುದಾಯ `ST’ ಸೇರ್ಪಡೆ ಸಂಬಂಧ ನಾಳೆ ಮಹತ್ವದ ಸಭೆ ನಿಗದಿ

15/09/2025 7:19 AM

ರಾಜ್ಯಾದ್ಯಂತ ಇಂದು ‘ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ ಆಚರಣೆ : ಸರ್ಕಾರದಿಂದ ಮಹತ್ವದ ಆದೇಶ

15/09/2025 7:13 AM
vidhana soudha

ರಾಜ್ಯದ `ಪೊಲೀಸ್ ಸಿಬ್ಬಂದಿಗಳಿಗೆ ಗುಡ್ ನ್ಯೂಸ್’ : ಸರ್ಕಾರದಿಂದಲೇ ಉಚಿತ `ಕ್ಯಾನ್ಸರ್’ ಚಿಕಿತ್ಸೆ

15/09/2025 6:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.