ಪುಣೆ : ಮಹಾರಾಷ್ಟ್ರದ ಎನ್ಸಿಪಿಯ ಮಾಜಿ ಕಾರ್ಪೊರೇಟರ್ ವನರಾಜ್ ಅಂಡೇಕರ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ.
ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಜನನಿಬಿಡ ನಾನಾ ಪೇತ್ ಪ್ರದೇಶದಲ್ಲಿ ವನರಾಜ್ ಅಂಡೇಕರ್ ಮೇಲೆ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಪುಣೆ ಮುನ್ಸಿಪಲ್ ಕಾರ್ಪೊರೇಷನ್ (ಪಿಎಂಸಿ) ಎರಡು ದಿನಗಳ ಹಿಂದೆ ಅದೇ ಪ್ರದೇಶದಲ್ಲಿನ ತಮ್ಮ ಅಂಗಡಿಯ ವಿರುದ್ಧ ನಡೆಸಿದ ಅತಿಕ್ರಮಣ ವಿರೋಧಿ ಕ್ರಮದ ಬಗ್ಗೆ ವಿರುದ್ಧ ದ್ವೇಷವನ್ನು ಹೊಂದಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ” ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಪ್ರವೀಣ್ ಪಾಟೀಲ್ ತಿಳಿಸಿದರು.
ಪರಾರಿಯಾಗಿರುವ ದಾಳಿಕೋರರನ್ನು ಪೊಲೀಸರು ಇನ್ನೂ ಪತ್ತೆಹಚ್ಚಿ ಬಂಧಿಸಿಲ್ಲ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ವಶಪಡಿಸಿಕೊಂಡಿದ್ದು, ದಾಳಿಕೋರರು ನಾಲ್ಕು ದ್ವಿಚಕ್ರ ವಾಹನಗಳಲ್ಲಿ ಸ್ಥಳಕ್ಕೆ ತಲುಪಿ ದಾಳಿ ನಡೆಸುವುದನ್ನು ಸೆರೆಹಿಡಿದಿದ್ದಾರೆ. ಈ ಘಟನೆಯಿಂದ ಈ ಪ್ರದೇಶದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.