ಹಾವೇರಿ : ಹಾವೇರಿಯಲ್ಲಿ ಪ್ರಕಾಶ್ ಎಂಬುವರು ತಮ್ಮ ಆರಾಧ್ಯದೈವ ನಟ ಪುನೀತ್ ರಾಜ್ಕುಮಾರ್ಗಾಗಿ ಸುಮಾರು 8 ಲಕ್ಷ ರೂ.ವೆಚ್ಚದಲ್ಲಿ ದೇವಸ್ಥಾನ ಕಟ್ಟಿಸುತ್ತಿದ್ದಾರೆ.
ಹಾವೇರಿ ತಾಲೂಕಿನ ಯಲಗಚ್ಚ ಗ್ರಾಮದ ಪ್ರಕಾಶ್ ಎಂಬುವರು ವೃತ್ತಿಯಲ್ಲಿ ಡ್ಯಾನ್ಸ್ ಮಾಸ್ಟರ್. ಪ್ರಕಾಶ್ಗೆ ನಟ ಡಾ ಪುನೀತ್ ರಾಜ್ಕುಮಾರ್ ಅಂದ್ರೆ ಪಂಚಪ್ರಾಣ. ಡಾ ಪುನೀತ್ ರಾಜ್ಕುಮಾರ್ ಜೊತೆ ನಟಿಸಬೇಕು ಎಂಬುದು ಪ್ರಕಾಶ್ ಅವರ ಅದಮ್ಯ ಆಸೆಯಾಗಿತ್ತು. ಆದರೆ ಅಪ್ಪು ಅವರನ್ನ ಭೇಟಿಯಾಗುವ ಅವಕಾಶ ಪ್ರಕಾಶ್ಗೆ ಸಿಗಲೇ ಇಲ್ಲ. ಕೊನೆಗೆ ಅಪ್ಪು ಅವರನ್ನ ದೂರದಿಂದ ನೋಡಿದ ತೃಪ್ತಿಯಿಂದ ಪ್ರಕಾಶ್ ಮನೆಗೆ ಮರಳಿದ್ದರು.
ಪ್ರಕಾಶ್ ಮಾತ್ರವಲ್ಲ ಅವರ ಇಡೀ ಕುಟುಂಬ ಪುನೀತ್ ಅಭಿಮಾನಿಗಳಾಗಿದ್ದು, ತಮ್ಮ ನೆಯ ಆವರಣದಲ್ಲಿ ಸುಮಾರು 8 ಲಕ್ಷ ರೂ. ಖರ್ಚು ಮಾಡಿ ದೆವಸ್ಥಾನ ಕಟ್ಟಿಸುತ್ತಿದ್ದಾರೆ. ದೇವಸ್ಥಾನದಲ್ಲಿ ಪುನೀತ್ ರಾಜ್ ಕುಮಾರ್ ಪುತ್ಥಳಿಯನ್ನೂ ಸಹ ನಿರ್ಮಿಸಲಾಗುತ್ತಿದ್ದು, ಅಂತಿಮ ಹಂತದಲ್ಲಿದ್ದು, ಸೆ. 26 ಕ್ಕೆ ಈ ದೇವಾಲಯವನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ ಉದ್ಧಾಟಿಸಲಿದ್ದಾರೆ.