ಬೆಂಗಳೂರು : ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಪೋಕ್ಸೋ ಪ್ರಕರಣವನ್ನು ಸಮಗ್ರ ತನಿಖೆಗೆ ಒಳಪಡಿಸುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಪೊಲೀಸ್ ಇಲಾಖೆಗೆ ಪತ್ರ ಬರೆದಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ನಾಗಲಕ್ಷ್ಮಿ ಚೌಧರಿ, ಪೋಕ್ಸೋ ಪ್ರಕರಣದ ವಿಚಾರಣೆ ನಡೆಯವಾಗಲೇ ಪೋಕ್ಸೋ ಕೇಸ್ ದಾಖಲಿಸಿದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಹೀಗಾಗಿ ಪ್ರಕರಣವನ್ನು ಮರು ತನಿಖೆ ಮಾಡಬೇಕು ಎಂದು ಪೊಲೀಸ್ ಇಲಾಖೆಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಪೋಕ್ಸೋ ಪ್ರಕರಣವನ್ನು ರದ್ದು ಕೋರಿ ಬಿ.ಎಸ್. ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಮಧ್ಯಂತರ ರಕ್ಷಣೆಗೆ ನೀಡಿತ್ತು. ಇದೀಗ ಅಶೋಕ್ ನಾಯ್ಕ್ ಅವರು ಮಧ್ಯಂತರ ತಡೆ ಆದೇಶವನ್ನು ತೆರವು ಮಾಡುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಪ್ರಕರಣದ ಹಿನ್ನೆಲೆ
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ 2024ರ ಮಾರ್ಚ್ 3ರಂದು ಅರ್ಜಿದಾರರ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.