Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

3 ದಿನದ ಮಗುವನ್ನು ರಕ್ಷಿಸಿ, ಸಾಕಿದ ಮಹಿಳೆಯನ್ನೇ ಹತ್ಯೆಗೈದ ‘ದತ್ತು ಪುತ್ರಿ’: ಕಾರಣ ಏನು ಗೊತ್ತಾ?

17/05/2025 2:36 PM

BIG NEWS : ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ‘ಬಮೂಲ್’ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ : ಮಾಜಿ ಸಂಸದ ಡಿಕೆ ಸುರೇಶ್

17/05/2025 2:19 PM

SHOCKING : ಬಾಗಲಕೋಟೆಯಲ್ಲಿ ಮನ ಕಲಕುವ ಘಟನೆ : ತಾಳಿ ಕಟ್ಟಿದ ಕೂಡಲೇ ‘ಹೃದಯಾಘಾತದಿಂದ’ ವರ ಸಾವು!

17/05/2025 2:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಬಿಎಂಪಿ ವಲಯದಲ್ಲಿ ʼನಂಬಿಕೆ ನಕ್ಷೆʼ ಯೋಜನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಚಾಲನೆ
KARNATAKA

ಬಿಬಿಎಂಪಿ ವಲಯದಲ್ಲಿ ʼನಂಬಿಕೆ ನಕ್ಷೆʼ ಯೋಜನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಚಾಲನೆ

By kannadanewsnow0902/09/2024 3:46 PM

ಬೆಂಗಳೂರು : “ಕಟ್ಟಡ ನಕ್ಷೆ ಮಂಜೂರಾತಿ ವಿಚಾರದಲ್ಲಿ ಬೆಂಗಳೂರು ನಗರದ ಜನರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ʼನಂಬಿಕೆ ನಕ್ಷೆʼ ಯೋಜನೆ ಜಾರಿಗೆ ತರಲಾಗುತ್ತಿದೆ. ಜನರೇ ತಮ್ಮ ಕಟ್ಟಡ ನಕ್ಷೆಯನ್ನು ಅನುಮೋದಿತ ಕಟ್ಟಡ ವಿನ್ಯಾಸಕಾರರು ಅಥವಾ ಎಂಜಿನಿಯರ್ ಗಳ ಬಳಿ ಅನುಮೋದಿಸಿಕೊಂಡು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಮಂಜೂರಾತಿ ಪಡೆದುಕೊಳ್ಳುವ ಯೋಜನೆ ಇದಾಗಿದೆ. 50/80 ವಿಸ್ತೀರ್ಣದ ವರೆಗಿನ ನಿವೇಶನಗಳಿಗೆ ಈ ಯೋಜನೆ ಅನ್ವಯವಾಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು “ಬಿಡಿಎ, ಗೃಹನಿರ್ಮಾಣ ಸಂಘದವರು 50/80 ವಿಸ್ತೀರ್ಣದ ವರೆಗಿನ ನಿವೇಶನಗಳನ್ನೇ ಹೆಚ್ಚಾಗಿ ಅಭಿವೃದ್ಧಿಪಡಿಸಿರುತ್ತಾರೆ. ಇಷ್ಟು ವಿಸ್ತೀರ್ಣದ ನಿವೇಶನದಲ್ಲಿ ಮನೆ ನಿರ್ಮಾಣ ಹಾಗೂ ನವೀಕರಣಕ್ಕೆ ಜನರು ಯಾವುದೇ ತೊಂದರೆಯಿಲ್ಲದೇ ಮುಂದಾಗಬಹುದು. ಅನುಮೋದಿತ ಲೆಕ್ಕ ಪರಿಶೋದಕರಂತೆ ಅನುಮೋದಿತ ಎಂಜಿನಿಯರ್ ಗಳು ಹಾಗೂ ಕಟ್ಟಡ ವಿನ್ಯಾಸಕಾರರ ಮೂಲಕ ತಾತ್ಕಾಲಿಕ ಕಟ್ಟಡ ನಕ್ಷೆಗೆ ಅನುಮತಿ ನೀಡಲಾಗುವುದು. ನಂತರ ಪಾಲಿಕೆಯ ಎಂಜಿನಿಯರ್ ಗಳು ಪರಿಶೀಲನೆ ನಡೆಸುತ್ತಾರೆ” ಎಂದರು.

“ಮೊದಲು ಬಿಬಿಎಂಪಿಯ 2 ವಲಯಗಳಲ್ಲಿ ಪ್ರಾಯೋಗಿಕವಾಗಿ ಈ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಯಶಸ್ವಿಯಾಗಿ ಜಾರಿಯಾದ ಈ ಯೋಜನೆಯ ಸಾಧಕ ಭಾದಕಗಳನ್ನು ಸರಿಪಡಿಸಿ ಪ್ರಸ್ತುತ ಬಿಬಿಎಂಪಿಯ ಎಲ್ಲಾ ವಲಯಗಳಿಗೆ ವಿಸ್ತರಿಸಲಾಗುತ್ತಿದೆ. ಇದರಿಂದ ಜನರು ಪಾಲಿಕೆಗೆ ಅಲೆಯುವುದು ತಪ್ಪುತ್ತದೆ” ಎಂದು ಹೇಳಿದರು.

ನಗರದಾದ್ಯಂತ 2,795 ರಸ್ತೆಗುಂಡಿಗಳು, ಪ್ರಮುಖ ರಸ್ತೆಗಳ ದುರಸ್ತಿಗೆ ರೂ. 660 ಕೋಟಿ

“ಬಿಬಿಎಂಪಿ ವಲಯದಲ್ಲಿ 2,795 ರಸ್ತೆಗುಂಡಿಗಳನ್ನು ಗುರುತಿಸಲಾಗಿದೆ ಎಲ್ಲಾ ರಸ್ತೆ ಗುಂಡಿಗಳನ್ನು ಮುಂದಿನ 15 ದಿನಗಳಲ್ಲಿ ಸಂಪೂರ್ಣವಾಗಿ ಮುಚ್ಚಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ರೂ. 660 ಕೋಟಿ ವೆಚ್ಚದಲ್ಲಿ ಪ್ರಮುಖ ರಸ್ತೆಗಳನ್ನು ದುರಸ್ತಿ ಕೆಲಸ ಕೈಗೆತ್ತಿಕೊಳ್ಳಲಾಗುವುದು” ಎಂದರು.

“ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದಾಗ ಮುಖ್ಯರಸ್ತೆಗಳನ್ನು ಬಿಟ್ಟು ಒಳ ರಸ್ತೆಗಳಲ್ಲಿ ಓಡಾಡಿದೆ. ಅವರಿಗಿಂತ ನಾವೇ ಎಷ್ಟೋ ಮುಂದಿದ್ದೇವೆ. ಅವರನ್ನು ಟೀಕೆ ಮಾಡುತ್ತಿಲ್ಲ, ಅಲ್ಲಿನ ಪರಿಸ್ಥಿತಿ ಬೇರೆ ಇರಬಹುದು” ಎಂದರು.

“ಮಳೆ ಬಂದ ತಕ್ಷಣ ನಗರದಾದ್ಯಂತ ಎಲ್ಲೆಲ್ಲಿ ನೀರು ನಿಲ್ಲುತ್ತಿತ್ತು, ವಸತಿ ಪ್ರದೇಶಗಳಿಗೆ ನೀರು ನುಗ್ಗಿ ಜನರಿಗೆ ತೊಂದರೆ ಉಂಟಾಗುತ್ತಿತ್ತು ಅವುಗಳನ್ನು ಭಾಗಶಃ ಸರಿ ಪಡಿಸಲಾಗಿದೆ. ಇದಕ್ಕಾಗಿ ಅಧಿಕಾರಿಗಳಿಗೆ ಅಭಿನಂದನೆಗಳು” ಎಂದು ಹೇಳಿದರು.

“ರಾಜಕಾಲುವೆಯ 50 ಮೀ. ಸುತ್ತಳತೆಯಲ್ಲಿ ಯಾವುದೇ ನಿರ್ಮಾಣ ಕಾರ್ಯಗಳನ್ನು ಮಾಡುವಂತಿಲ್ಲ ಎಂದು ಎನ್ ಜಿಟಿಯ ನಿಯಮಗಳು ಸೇರಿದಂತೆ ಒಂದಷ್ಟು ನಿಯಮಗಳಿಗೆ. ಪ್ರಸ್ತುತ 300 ಕಿ.ಮೀ ಅನ್ನು ಗುರುತಿಸಿ 30 ಅಡಿ ರಸ್ತೆ ನಿರ್ಮಾಣ ಮಾಡಲಾಗುವುದು. ಭೂಮಿ ಬಿಟ್ಟುಕೊಡುವ ಖಾಸಗಿ ಜಮೀನುಗಳ ಮಾಲೀಕರಿಗೆ ಪರಿಹಾರವಾಗಿ ಟಿಡಿಆರ್ ನೀಡಲಾಗುವುದು. ಅದನ್ನು ಅವರು ಮಾರಾಟ ಮಾಡಿಕೊಳ್ಳಬಹುದು” ಎಂದರು.

“ಹೆಬ್ಬಾಳ, ನಾಗಾವರ, ಬೆಳ್ಳಂದೂರು ಅಕ್ಕಪಕ್ಕ, ಬೆಂಗಳೂರು ದಕ್ಷಿಣ ಭಾಗದಲ್ಲಿ ಒಂದಷ್ಟು ಕಡೆ ಭೂಮಿ ಗುರುತಿಸಲಾಗಿದೆ. ಮೊದಲ ಹಂತದಲ್ಲಿ 100 ಕಿ.ಮೀ ದೂರ ಕೆಲಸ ಮಾಡಲಾಗುವುದು. ಇದಕ್ಕಾಗಿ ರೂ. 200 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ. ಈ ವಿಚಾರವನ್ನು ಕ್ಯಾಬಿನೆಟ್, ಸಚಿವರ ಸಭೆ ಹಾಗೂ ವಿರೋಧ ಪಕ್ಷಗಳ ನಾಯಕರೊಟ್ಟಿಗೆ ನಡೆದ ಸಭೆಗಳಲ್ಲೂ ಪ್ರಾಸ್ತಪಿಸಲಾಗಿದೆ. ಈ ರಸ್ತೆಗಳಲ್ಲಿ ಬಸ್ ಓಡಾಟಕ್ಕೆ ಅವಕಾಶವಿಲ್ಲ. ಬದಲಾಗಿ ಶಾಲಾ, ನಾಗರಿಕರ ವಾಹನಗಳ ಓಡಾಟಕ್ಕೆ ಅವಕಾಶ ನೀಡಲಾಗುವುದು” ಎಂದು ಮಾಹಿತಿ ನೀಡಿದರು.

ಮಹಾತ್ಮಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿ 100 ವರ್ಷ: ಶಾಲಾ ಮಕ್ಕಳಿಂದ ಸ್ವಚ್ಚತೆ ಬಗ್ಗೆ ಅರಿವು

“ಮಹಾತ್ಮಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿ ಕರ್ನಾಟಕದಲ್ಲಿ ಅಧಿಕಾರ ವಹಿಸಿಕೊಂಡು 100 ವರ್ಷಗಳು ಸಂದಿವೆ. ಇದಕ್ಕಾಗಿ ನಗರದಾದ್ಯಂತ ಸ್ವಚ್ಚತಾ ಅಭಿಯಾನ ಹಮ್ಮಿಕೊಳ್ಳಲಾಗುವುದು. ಇದೇ ವೇಳೆ ಒಂದು ಸಾವಿರ ಶಾಲಾ ಮಕ್ಕಳು ಆನ್ ಲೈನ್ ಮೂಲಕ ಪತಿಜ್ಞಾವಿಧಿ ತೆಗೆದುಕೊಳ್ಳಲಿದ್ದಾರೆ” ಎಂದರು.

“ರಸ್ತೆ ಬದಿ ಹಾಗೂ ರಸ್ತೆಗಳಲ್ಲಿ ಕಸ ಎಸೆಯುವುದರ ವಿರುದ್ಧ ಜಾಗೃತಿ ಮೂಡಿಲಾಗುವುದು. ಮಕ್ಕಳಿಂದ ಕಸ ಎಸೆಯುವವರಿಗೆ ತಿಳಿಹೇಳುವ ಕೆಲಸ ಮಾಡಲಾಗುವುದು. ಅಕ್ಟೋಬರ್ 2 ರಂದು ಈ ಕಾರ್ಯಕ್ರಮ ರೂಪಿಸಲಾಗಿದೆ” ಎಂದರು.

ಸಿಎಂ ಕುರ್ಚಿ ಖಾಲಿಯಿಲ್ಲ, ಖಾಲಿ ಇದ್ದಿದ್ದರೆ ಮಾತನಾಡಬಹುದಿತ್ತು: ಡಿಸಿಎಂ ಡಿ.ಕೆ ಶಿವಕುಮಾರ್

BREAKING : ‘ಮನಿ ಲಾಂಡರಿಂಗ್’ ಕೇಸ್ : ‘ED’ ಯಿಂದ AAP ಶಾಸಕ ‘ಅಮಾನತುಲ್ಲಾ ಖಾನ್’ ಅರೆಸ್ಟ್!

ಏನಿದು ‘ಚುಂಬನ ಕಾಯಿಲೆ’.? ಹೇಗೆ ಹರಡುತ್ತೆ.? ಲಕ್ಷಣಗಳೇನು.? ಚಿಕಿತ್ಸೆ ಹೇಗೆ.? ಇಲ್ಲಿದೆ ಮಾಹಿತಿ.!

Share. Facebook Twitter LinkedIn WhatsApp Email

Related Posts

BIG NEWS : ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ‘ಬಮೂಲ್’ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ : ಮಾಜಿ ಸಂಸದ ಡಿಕೆ ಸುರೇಶ್

17/05/2025 2:19 PM1 Min Read

SHOCKING : ಬಾಗಲಕೋಟೆಯಲ್ಲಿ ಮನ ಕಲಕುವ ಘಟನೆ : ತಾಳಿ ಕಟ್ಟಿದ ಕೂಡಲೇ ‘ಹೃದಯಾಘಾತದಿಂದ’ ವರ ಸಾವು!

17/05/2025 2:17 PM1 Min Read

BREAKING : ಬೆಂಗಳೂರಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಕೆ : 4 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ, ಆಫ್ರಿಕಾ ಪ್ರಜೆ ಅರೆಸ್ಟ್!

17/05/2025 2:02 PM1 Min Read
Recent News

3 ದಿನದ ಮಗುವನ್ನು ರಕ್ಷಿಸಿ, ಸಾಕಿದ ಮಹಿಳೆಯನ್ನೇ ಹತ್ಯೆಗೈದ ‘ದತ್ತು ಪುತ್ರಿ’: ಕಾರಣ ಏನು ಗೊತ್ತಾ?

17/05/2025 2:36 PM

BIG NEWS : ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ‘ಬಮೂಲ್’ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ : ಮಾಜಿ ಸಂಸದ ಡಿಕೆ ಸುರೇಶ್

17/05/2025 2:19 PM

SHOCKING : ಬಾಗಲಕೋಟೆಯಲ್ಲಿ ಮನ ಕಲಕುವ ಘಟನೆ : ತಾಳಿ ಕಟ್ಟಿದ ಕೂಡಲೇ ‘ಹೃದಯಾಘಾತದಿಂದ’ ವರ ಸಾವು!

17/05/2025 2:17 PM

BREAKING : ಬೆಂಗಳೂರಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಕೆ : 4 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ, ಆಫ್ರಿಕಾ ಪ್ರಜೆ ಅರೆಸ್ಟ್!

17/05/2025 2:02 PM
State News
KARNATAKA

BIG NEWS : ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ‘ಬಮೂಲ್’ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ : ಮಾಜಿ ಸಂಸದ ಡಿಕೆ ಸುರೇಶ್

By kannadanewsnow0517/05/2025 2:19 PM KARNATAKA 1 Min Read

ಬೆಂಗಳೂರು : ಬೆಂಗಳೂರು ಒಕ್ಕೂಟದ ನಿರ್ದೇಶಕ ಸ್ಥಾನಕ್ಕೆ ಅರ್ಜಿಯನ್ನು ಸಲ್ಲಿಸಬೇಕು ಅಂತ ಪಕ್ಷದ ಮುಖಂಡರು ತೀರ್ಮಾನ ಮಾಡಿದ್ದಾರೆ‌. ಹಾಗಾಗಿ ಅವರ…

SHOCKING : ಬಾಗಲಕೋಟೆಯಲ್ಲಿ ಮನ ಕಲಕುವ ಘಟನೆ : ತಾಳಿ ಕಟ್ಟಿದ ಕೂಡಲೇ ‘ಹೃದಯಾಘಾತದಿಂದ’ ವರ ಸಾವು!

17/05/2025 2:17 PM

BREAKING : ಬೆಂಗಳೂರಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಕೆ : 4 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ, ಆಫ್ರಿಕಾ ಪ್ರಜೆ ಅರೆಸ್ಟ್!

17/05/2025 2:02 PM

BREAKING : ಕನ್ನಡ ಚಿತ್ರರಂಗದ ಉಳಿವಿಗಾಗಿ `ಶಿವಣ್ಣ’ನ ನಿವಾಸದಲ್ಲಿ ಮಹತ್ವದ ಸಭೆ : ದುನಿಯಾ ವಿಜಿ, ಧ್ರುವ ಸರ್ಜಾ ಸೇರಿ ಹಲವು ನಟರು ಭಾಗಿ.!

17/05/2025 1:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.