Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ‘PF ಬ್ಯಾಲೆನ್ಸ್ ಚೆಕ್’ ಮಾಡಬೇಕೇ.? ಜಸ್ ಹೀಗೆ ಮಾಡಿ ಸಾಕು

15/09/2025 5:47 AM

BIG NEWS: ರಾಜ್ಯದಲ್ಲಿ ‘ಮತಾಂತರ ನಿಷೇಧ ಕಾಯ್ದೆ’ ವಾಪಸ್: ಸಿಎಂ ಸಿದ್ಧರಾಮಯ್ಯ ಸುಳಿವು?

15/09/2025 5:45 AM

BIG NEWS: ‘ಲಿವಿಂಗ್ ಟುಗೆದರ್’ ಬಳಿಕ ಮದುವೆಗೆ ನಿರಾಕರಿಸುವುದು ಅಪರಾಧವಲ್ಲ: ಹೈಕೋರ್ಟ್ ಮಹತ್ವದ ತೀರ್ಪು

15/09/2025 5:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘AI ಕೌಶಲ’ ಕುರಿತು ರಾಜ್ಯ ಸರ್ಕಾರದ ಜತೆ ಒಡಂಬಡಿಕೆಗೆ ‘ಮೈಕ್ರೋಸಾಫ್ಟ್’ ಒಲವು: ಸಚಿವ ಎಂ‌.ಬಿ ಪಾಟೀಲ
KARNATAKA

‘AI ಕೌಶಲ’ ಕುರಿತು ರಾಜ್ಯ ಸರ್ಕಾರದ ಜತೆ ಒಡಂಬಡಿಕೆಗೆ ‘ಮೈಕ್ರೋಸಾಫ್ಟ್’ ಒಲವು: ಸಚಿವ ಎಂ‌.ಬಿ ಪಾಟೀಲ

By kannadanewsnow0903/09/2024 8:49 PM

ಬೆಂಗಳೂರು: ಜನರೇಟೀವ್ ಎಐ ಮತ್ತು ಮುಂಚೂಣಿಗೆ ಬರುತ್ತಿರುವ ಆಧುನಿಕ ತಂತ್ರಜ್ಞಾನಗಳಿಗೆ ಸಂಬಂಧಿಸಿದ ಕೌಶಲಗಳನ್ನು ಕಲಿಸಲು ರಾಜ್ಯ ಸರ್ಕಾರದೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲು ಮೈಕ್ರೋಸಾಫ್ಟ್ ಕಂಪನಿಯು ಉತ್ಸುಕವಾಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಮಂಗಳವಾರ ಇಲ್ಲಿ ತಮ್ಮನ್ನು ಭೇಟಿಯಾದ ಮೈಕ್ರೋಸಾಫ್ಟ್ ಕಂಪನಿಯ ಭಾರತ ಮತ್ತು ದಕ್ಷಿಣ ಏಷ್ಯಾದ ಅಧ್ಯಕ್ಷ ಪುನೀತ್ ಚಾಂದೋಕ್ ನೇತೃತ್ವದ ಉನ್ನತ ಮಟ್ಟದ ನಿಯೋಗದ ಜತೆ ಅವರು ವಿಚಾರ ವಿನಿಮಯ ನಡೆಸಿದರು.

ಕರ್ನಾಟಕವನ್ನು ಭಾರತದ ಎಐ ತಂತ್ರಜ್ಞಾನದ ಪ್ರಮುಖ ತಾಣವನ್ನಾಗಿ ಮಾಡಲು ಮೈಕ್ರೋಸಾಫ್ಟ್ ಬಯಸಿದೆ. ಹೂಡಿಕೆದಾರರಿಗೆ ನೆರವು ನೀಡುವಂತಹ ಪ್ರಕ್ರಿಯೆಗಳಿಗೆ ಎಐ ತಂತ್ರಜ್ಞಾನವನ್ನು ಹೇಗೆ ಅನ್ವಯಿಸಬಹುದು ಮತ್ತು ಇದಕ್ಕೆ ಪರಿಣತರನ್ನು ಹೇಗೆ ತೊಡಗಿಸಬಹುದು ಎಂದು ಕಂಪನಿಯು ಚಿಂತಿಸುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ರಾಜ್ಯ ಸರಕಾರವು ತಂತ್ರಜ್ಞಾನದ ಬಳಕೆಯ ಪರವಾಗಿದ್ದು, ಮೈಕ್ರೋಸಾಫ್ಟ್ ತರಹದ ದೈತ್ಯ ಕಂಪನಿಗಳು ಇದಕ್ಕೆ ಮುಂದಡಿ ಇಡಬೇಕು. ಮೊದಲಿಗೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಆಡಳಿತದಲ್ಲಿ ಎಐ ತಂತ್ರಜ್ಞಾನ ಅಳವಡಿಕೆ ಬಗ್ಗೆ ನೆರವಾಗಬಹುದು ಎಂದು ಅವರು ನುಡಿದರು.

ಫೆಬ್ರುವರಿ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಮೈಕ್ರೋಸಾಫ್ಟ್ ಕಂಪನಿಯು ಸಕ್ರಿಯ ಪಾಲ್ಗೊಳ್ಳುವಿಕೆ ಬಗ್ಗೆ‌ ಈ ಸಂದರ್ಭದಲ್ಲಿ ಚರ್ಚಿಸಲಾಯಿತು.

ಮೈಕ್ರೋಸಾಫ್ಟ್ ಇಂಡಿಯಾದ ನಿಯೋಗದಲ್ಲಿ ಅದರ ವ್ಯವಸ್ಥಾಪಕ ನಿರ್ದೇಶಕಿ ಇರಿನಾ ಘೋಷ್, ಸ್ಟ್ರಾಟೆಜಿ ಹೆಡ್ ಶೀನು ಶೇಖರಿ, ಹಿರಿಯ ನಿರ್ದೇಶಕ ಅನೀಶ್ ಚಾಂಡಿ, ನಿರ್ದೇಶಕ ಸಂದೀಪ್ ಮಹಾಪಾತ್ರ ಮುಂತಾದವರು ಇದ್ದರು.

ಸರಕಾರದ ಪ್ರತಿನಿಧಿಗಳಾಗಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

ಹಾಲಿನ ಖರೀದಿ ದರ ಕಡಿತಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

BIG NEWS: ‘ನರ್ಸಿಂಗ್ ಕಾಲೇಜು’ ಕಟ್ಟಡದಲ್ಲಿ ‘ಮತ್ತೊಂದು ಕೋರ್ಸ್’ ನಡೆಸುತ್ತಿದ್ದರೇ ‘ಮಾನ್ಯತೆ ರದ್ದು’

BIG NEWS : ಏನ್ರಿ ಮೀಡಿಯಾ?…ಎಂದಿದ್ದ ಕೊಲೆ ಆರೋಪಿ ನಟ ದರ್ಶನ್ ಗೆ ಜೈಲಿನಲ್ಲಿ ಟಿವಿ ಬೇಕೆ ಬೇಕಂತೆ!

Share. Facebook Twitter LinkedIn WhatsApp Email

Related Posts

BIG NEWS: ರಾಜ್ಯದಲ್ಲಿ ‘ಮತಾಂತರ ನಿಷೇಧ ಕಾಯ್ದೆ’ ವಾಪಸ್: ಸಿಎಂ ಸಿದ್ಧರಾಮಯ್ಯ ಸುಳಿವು?

15/09/2025 5:45 AM1 Min Read

BREAKING: ರಾಯಚೂರಲ್ಲಿ ವಿಷ ಸೇವಿಸಿ ಮೂವರು ಯುವತಿಯರು ಆತ್ಮಹತ್ಯೆಗೆ ಯತ್ನ, ಒಬ್ಬರು ಸಾವು

14/09/2025 10:04 PM1 Min Read

ಚಿಕ್ಕಬಳ್ಳಾಪುರದಲ್ಲಿ ಗಣೇಶ ಮೆರವಣಿಗೆ ನೋಡಲು ತೆರಳುತ್ತಿದ್ದ ಇಬ್ಬರು ದುರ್ಮರಣ

14/09/2025 9:46 PM1 Min Read
Recent News

ನಿಮ್ಮ ‘PF ಬ್ಯಾಲೆನ್ಸ್ ಚೆಕ್’ ಮಾಡಬೇಕೇ.? ಜಸ್ ಹೀಗೆ ಮಾಡಿ ಸಾಕು

15/09/2025 5:47 AM

BIG NEWS: ರಾಜ್ಯದಲ್ಲಿ ‘ಮತಾಂತರ ನಿಷೇಧ ಕಾಯ್ದೆ’ ವಾಪಸ್: ಸಿಎಂ ಸಿದ್ಧರಾಮಯ್ಯ ಸುಳಿವು?

15/09/2025 5:45 AM

BIG NEWS: ‘ಲಿವಿಂಗ್ ಟುಗೆದರ್’ ಬಳಿಕ ಮದುವೆಗೆ ನಿರಾಕರಿಸುವುದು ಅಪರಾಧವಲ್ಲ: ಹೈಕೋರ್ಟ್ ಮಹತ್ವದ ತೀರ್ಪು

15/09/2025 5:40 AM

ಈಗ ಆಧಾರ್ ಕಾರ್ಡ್ ಡೌನ್ ಲೋಡ್ ಮತ್ತಷ್ಟು ಸುಲಭ: ಜಸ್ಟ್ WhatsAppನಲ್ಲೇ ಹೀಗೆ ಪಡೆಯಿರಿ

15/09/2025 5:35 AM
State News
KARNATAKA

BIG NEWS: ರಾಜ್ಯದಲ್ಲಿ ‘ಮತಾಂತರ ನಿಷೇಧ ಕಾಯ್ದೆ’ ವಾಪಸ್: ಸಿಎಂ ಸಿದ್ಧರಾಮಯ್ಯ ಸುಳಿವು?

By kannadanewsnow0915/09/2025 5:45 AM KARNATAKA 1 Min Read

ಬೆಂಗಳೂರು: ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಇಂತಹ ಮತಾಂತರ ನಿಷೇಧ ಕಾಯ್ದೆಯನ್ನು ವಾಪಾಸ್ ಪಡೆಯುವ ಸುಳಿವನ್ನು ಸಿಎಂ ಸಿದ್ಧರಾಮಯ್ಯ…

BREAKING: ರಾಯಚೂರಲ್ಲಿ ವಿಷ ಸೇವಿಸಿ ಮೂವರು ಯುವತಿಯರು ಆತ್ಮಹತ್ಯೆಗೆ ಯತ್ನ, ಒಬ್ಬರು ಸಾವು

14/09/2025 10:04 PM

ಚಿಕ್ಕಬಳ್ಳಾಪುರದಲ್ಲಿ ಗಣೇಶ ಮೆರವಣಿಗೆ ನೋಡಲು ತೆರಳುತ್ತಿದ್ದ ಇಬ್ಬರು ದುರ್ಮರಣ

14/09/2025 9:46 PM

ಮಲಗುವ ಮುನ್ನ ಈ 3 ಅಕ್ಷರಗಳ ಮಂತ್ರವನ್ನು ಪಠಿಸಿ, ಮರುದಿನ ನಿಮ್ಮ ಎಲ್ಲಾ ಪ್ರಯತ್ನ ಯಶಸ್ವಿ

14/09/2025 9:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.