ಕೊಪ್ಪಳ : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಶರಣಬಸವೇಶ್ವರ ದೇವಸ್ಥಾನ ನಿರ್ಮಾಣಕ್ಕೆ ನೀಡಲು ಮಹಿಳೆಯರು ಮುಂದಾಗಿದ್ದಾರೆ.
ಹೌದು, ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಹಿರೇಬಿಡನಾಳ ಗ್ರಾಮದ ಶರಣಬಸವೇಶ್ವರ ದೇವಸ್ಥಾನ ನಿರ್ಮಾಣಕ್ಕೆ ಒಂದು ತಿಂಗಳ ಗೃಹಲಕ್ಷ್ಮಿ ಹಣವನ್ನು ನೀಡಲು 50 ಮಹಿಳೆಯರು ನಿರ್ಧರಿಸಿದ್ದಾರೆ.
ಹಿರೀಬಿಡನಾಳ ಗ್ರಾಮದ ಶರಣಬಸವೇಶ್ವರ ದೇವಸ್ಥಾನದ ನಿರ್ಮಾಣ ಕಾರ್ಯಕ್ಕೆ ಗೃಹಲಕ್ಷ್ಮಿ ಯೋಜನೆಯ 1 ತಿಂಗಳ 2,000 ರೂ .ಹಣವನ್ನು ನೀಡಲು ಮಹಿಳೆಯರು ನೀಡಿದ್ದಾರೆ. ಮೂರು ತಿಂಗಳ ಪೈಕಿ 1 ತಿಂಗಳ ಗೃಹಲಕ್ಷ್ಮಿ ಹಣ 15 ದಿನಗಳ ಹಿಂದೆ ಬಂದಿದ್ದು, ಈ ಹಣವನ್ನು ದೇವಸ್ಥಾನ ನಿರ್ಮಾಣಕ್ಕೆ ನೀಡಿದ್ದಾರೆ.