ಬೆಂಗಳೂರು : ಇಂದು ನಾಡಿನಾದ್ಯಂತ ವಿಘ್ನ ನಿವಾರಕ ಗಣೇಶ ಚತುರ್ಥಿ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗಣೇಶ ಚತುರ್ಥಿಯ ಶುಭಾಶಯಗಳನ್ನು ಕೋರಿದ್ದಾರೆ.
ಟ್ವೀಟರ್ ನಲ್ಲಿ ನಾಡಿನ ಜನತೆಗೆ ಶುಭ ಕೋರಿರುವ ಸಿಎಂ ಸಿದ್ದರಾಮಯ್ಯ, ನಾಡಬಂಧುಗಳಿಗೆ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು. ಸಂಕಷ್ಟಹರ ಗಣೇಶನು ಬದುಕಲ್ಲಿ ಎದುರಾಗುವ ಸಕಲ ವಿಘ್ನಗಳನ್ನು ಎದುರಿಸುವ ಆತ್ಮಬಲವನ್ನು ನಿಮ್ಮೆಲ್ಲರಲ್ಲೂ ತುಂಬಲಿ ಎಂದು ಹಾರೈಸುತ್ತೇನೆ. ಹಬ್ಬವನ್ನು ಸಡಗರ – ಸಂಭ್ರಮದಿಂದ ಆಚರಿಸೋಣ, ಇದರ ಜೊತೆಗೆ ಪರಿಸರ ಕಾಳಜಿಯನ್ನು ಮರೆಯದಿರೋಣ.
ನಾಡಬಂಧುಗಳಿಗೆ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು.
ಸಂಕಷ್ಟಹರ ಗಣೇಶನು ಬದುಕಲ್ಲಿ ಎದುರಾಗುವ ಸಕಲ ವಿಘ್ನಗಳನ್ನು ಎದುರಿಸುವ ಆತ್ಮಬಲವನ್ನು ನಿಮ್ಮೆಲ್ಲರಲ್ಲೂ ತುಂಬಲಿ ಎಂದು ಹಾರೈಸುತ್ತೇನೆ.
ಹಬ್ಬವನ್ನು ಸಡಗರ – ಸಂಭ್ರಮದಿಂದ ಆಚರಿಸೋಣ, ಇದರ ಜೊತೆಗೆ ಪರಿಸರ ಕಾಳಜಿಯನ್ನು ಮರೆಯದಿರೋಣ.#ಗಣೇಶಹಬ್ಬ #GaneshChaturthi2024 pic.twitter.com/bigMsehLa6— Siddaramaiah (@siddaramaiah) September 7, 2024