Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಕ್ಯಾನ್ಸರ್ ರೋಗಿಗಳಿಗೆ ಬಿಗ್ ಶಾಕ್: ದೇಶದಲ್ಲಿ ಕೀಮೋಥೆರಪಿ ಔಷಧಿ ದರ ಏರಿಕೆಗೆ ಕೇಂದ್ರ ಸರ್ಕಾರದ ಒಪ್ಪಿಗೆ

BREAKING : 200 ವೈದ್ಯರ ಖಾಯಂ ನೇರ ನೇಮಕಕ್ಕೆ ಅರೋಗ್ಯ ಇಲಾಖೆ ನಿರ್ಧಾರ : ಸಚಿವ ಯು.ಟಿ ಖಾದರ್

ಜೂ.12ಕ್ಕೆ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಕರಾವಳಿಗೆ ಮೊದಲ ಬಾರಿ ಆಗಮನ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಹುಲ್ ಗಾಂಧಿ ಮೀಸಲಾತಿ ರದ್ದು ಹೇಳಿಕೆ ವಿವಾದ: ನಾಳೆ ರಾಜ್ಯಾಧ್ಯಂತ ಬಿಜೆಪಿಯಿಂದ ಪ್ರತಿಭಟನೆಗೆ ಕರೆ
KARNATAKA

ರಾಹುಲ್ ಗಾಂಧಿ ಮೀಸಲಾತಿ ರದ್ದು ಹೇಳಿಕೆ ವಿವಾದ: ನಾಳೆ ರಾಜ್ಯಾಧ್ಯಂತ ಬಿಜೆಪಿಯಿಂದ ಪ್ರತಿಭಟನೆಗೆ ಕರೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಮೀಸಲಾತಿ ರದ್ದುಪಡಿಸುವುದಾಗಿ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರು ಅಮೆರಿಕದಲ್ಲಿ ತಮ್ಮ ಮನದಾಳದ ಮಾತನ್ನು ಹೇಳಿದ್ದಾರೆ. ಇದನ್ನು ಖಂಡಿಸಿ ಇವತ್ತಿನಿಂದ ಎರಡು ದಿನಗಳ ಕಾಲ ರಾಹುಲ್ ಗಾಂಧಿಯವರ ಪ್ರತಿಕೃತಿ ದಹನ ಮಾಡಲಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಪ್ರಕಟಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಎಸ್‍ಸಿ, ಎಸ್‍ಟಿಗಳಿಗೆ ಗೌರವ ಕೊಡಬೇಕು; ಅವರಿಗೆ ರಕ್ಷಣೆ ಕೊಡಬೇಕೆಂಬ ದೃಷ್ಟಿಯಿಂದ ನಾವು ರಾಜ್ಯಾದ್ಯಂತ ನಾಳೆ, ನಾಡಿದ್ದು ರಾಹುಲ್ ಗಾಂಧಿಯವರ ಪ್ರತಿಕೃತಿ ದಹನ ಮಾಡುತ್ತೇವೆ ಎಂದು ತಿಳಿಸಿದರು.

ರಾಹುಲ್ ಗಾಂಧಿಯವರು ಮೀಸಲಾತಿ ನಿಲ್ಲಿಸುವುದಾಗಿ ಹೇಳಿದ್ದಾರೆ. ಡಾ. ಬಿ.ಆರ್.ಅಂಬೇಡ್ಕರ್ ಅವರನ್ನು ಎರಡು ಸಾರಿ ಚುನಾವಣೆಯಲ್ಲಿ ಸೋಲಿಸಿದ ಪಕ್ಷ ಕಾಂಗ್ರೆಸ್. ಸಂವಿಧಾನವನ್ನು ಬರೆದ ಡಾ. ಬಿ.ಆರ್.ಅಂಬೇಡ್ಕರ್ ಅವರಿಗೆ ಅವತ್ತು ಅಪಮಾನ ಮಾಡಲಾಗಿತ್ತು. ಈಗ ಮೀಸಲಾತಿ ರದ್ದುಪಡಿಸುವುದಾಗಿ ಹೇಳಿ ಅವರ ವಿಚಾರಕ್ಕೇ ತಿಲಾಂಜಲಿ ನೀಡಲು ಹೊರಟಿದ್ದಾರೆ ಎಂದು ಟೀಕಿಸಿದರು.

ದಲಿತರ ಬದುಕಿಗೆ, ಎಸ್‍ಸಿ, ಎಸ್‍ಟಿಗಳ ಮೀಸಲಾತಿಗೆ ಕೊಡಲಿಪೆಟ್ಟು ಹಾಕುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ. ಇದೇನಾ ನೀವು ಬಾಬಾಸಾಹೇಬ ಅಂಬೇಡ್ಕರ್ ಅವರಿಗೆ ನೀಡುವ ಗೌರವ ಎಂದು ಪ್ರಶ್ನಿಸಿದರು. ಇದೇನಾ ನೀವು ಸಂವಿಧಾನಕ್ಕೆ ಕೊಡುವ ಮರ್ಯಾದೆ ಎಂದು ಕೇಳಿದರು.

ಮೀಸಲಾತಿ ಎಂಬುದು ಕಾಂಗ್ರೆಸ್ ಪಾರ್ಟಿಯ ಭಿಕ್ಷೆಯಲ್ಲ..

ನಮ್ಮ ದೇಶದಲ್ಲಿ ಮೀಸಲಾತಿ ಎಂಬುದು ಎಸ್‍ಸಿ, ಎಸ್‍ಟಿಗಳ ಬರ್ತ್ ರೈಟ್. ಮೀಸಲಾತಿ ಪಡೆಯುವುದು ಅವರ ಹಕ್ಕು. ಅದು ಕಾಂಗ್ರೆಸ್ ಪಾರ್ಟಿಯ ಭಿಕ್ಷೆಯಲ್ಲ. ದಲಿತರ ಕಲ್ಯಾಣಕ್ಕಾಗಿ, ಬದುಕಿಗೆ ರಕ್ಷಣೆ, ಜೀವನಕ್ಕೆ ಭದ್ರತೆ ನೀಡಲು ಮತ್ತು ಅವರು ಮನುಷ್ಯರ ರೀತಿ ಅವರು ಬದುಕಬೇಕೆಂಬ ಹಿನ್ನೆಲೆಯಲ್ಲಿ ಡಾ. ಅಂಬೇಡ್ಕರ್ ಅವರು ಮೀಸಲಾತಿಯನ್ನು ಸಂವಿಧಾನದಲ್ಲೇ ಬರೆದರು ಎಂದು ಎನ್.ರವಿಕುಮಾರ್ ಅವರು ವಿಶ್ಲೇಷಿಸಿದರು.

1955ರಲ್ಲಿ ಕಾಕಾ ಕಾಲೇಕರ್ ಸಮಿತಿ ವರದಿ ನೀಡುವ ಸಂದರ್ಭದಲ್ಲಿ ನೆಹರೂ ಅವರು ಮೀಸಲಾತಿಯನ್ನು ವಿರೋಧಿಸಿದ್ದರು. ಅಂದರೆ ನೆಹರೂ ಅವರು ಕೂಡ ಸಂವಿಧಾನದಲ್ಲಿದ್ದ ಮೀಸಲಾತಿಯನ್ನು ವಿರೋಧಿಸಿದ್ದರು ಎಂದು ಆಕ್ಷೇಪಿಸಿದರು.

ಕರ್ನಾಟಕದಲ್ಲಿ ಸಿದ್ದರಾಮಯ್ಯನವರು ಎಸ್‍ಸಿ, ಎಸ್‍ಟಿಗಳ 25 ಸಾವಿರ ಕೋಟಿ ಹಣವನ್ನು ಬೇರೆಬೇರೆ ಇಲಾಖೆಗಳಿಗೆ ವರ್ಗಾವಣೆ ಮಾಡಿದ್ದಾರೆ. ಇದು ಕೂಡ ಎಸ್‍ಸಿ, ಎಸ್‍ಟಿಗಳಿಗೆ ಮಾಡಿದ ಘೋರ ಅಪಮಾನ ಎಂದು ಖಂಡಿಸಿದರು. ಎಸ್‍ಟಿಗಳ ಅಭಿವೃದ್ಧಿಗಾಗಿ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಇದ್ದ ಹಣವನ್ನು ಬಳ್ಳಾರಿ ಚುನಾವಣೆಗೆ ಬಳಸಿದ್ದಾರೆ. 187 ಕೋಟಿ ಹಣವನ್ನು ಲೂಟಿ ಮಾಡಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಮೀಸಲಾತಿ ಕೊಡಬಾರದು ಎಂಬ ಚಿಂತನೆ ಕಾಂಗ್ರೆಸ್ಸಿಗರ ರಕ್ತದಲ್ಲೇ ಇದೆ ಎಂದು ಅವರು ಟೀಕಿಸಿದರು.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ, ಮೀಸಲಾತಿ ಖತಂ ಮಾಡುತ್ತೇವೆ; ನಿಲ್ಲಿಸುತ್ತೇವೆ ಎಂದು ರಾಹುಲ್ ಗಾಂಧಿಯವರು ತಮ್ಮ ಮನದಾಳದ ಇಂಗಿತವನ್ನು ಹೇಳಿದ್ದಾರೆ. ಮೀಸಲಾತಿ ಬಗ್ಗೆ ರಾಹುಲ್ ಗಾಂಧಿಯವರಿಗೆ ಇರುವ ಆಕ್ರೋಶ, ಅಭಿಪ್ರಾಯವು ಅವರ ಅಮೆರಿಕದ ಭಾಷಣದಲ್ಲಿ ವ್ಯಕ್ತವಾಗಿದೆ ಎಂದು ವಿವರಿಸಿದರು.

ಸಂವಿಧಾನಕ್ಕೆ 106 ತಿದ್ದುಪಡಿ ಮೂಲಕ ಡಾ.ಅಂಬೇಡ್ಕರರಿಗೆ ಅವಮಾನ

1990ರ ಸೆಪ್ಟೆಂಬರ್ 6ರಂದು ರಾಜೀವ್ ಗಾಂಧಿಯವರು ಮಂಡಲ್ ಕಮಿಷನ್ ವರದಿಯನ್ನು ಮತ್ತು ಮೀಸಲಾತಿಯನ್ನು ವಿರೋಧಿಸಿದ್ದರು. ಮೀಸಲಾತಿಯನ್ನು ನೆಹರೂ, ರಾಜೀವ್ ಗಾಂಧಿಯವರು ವಿರೋಧಿಸಿದ್ದರು ಎಂದು ಗಮನ ಸೆಳೆದರು. ಸಂವಿಧಾನದಲ್ಲಿ ಮೀಸಲಾತಿ ನೀಡಿದ್ದು ಕಾಂಗ್ರೆಸ್ಸಿಗರಿಗೆ ಇಷ್ಟ ಇಲ್ಲ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇದ್ದ ಸಂದರ್ಭದಲ್ಲಿ ಸಂವಿಧಾನಕ್ಕೆ ಒಂದಲ್ಲ; ಎರಡಲ್ಲ, 106 ತಿದ್ದುಪಡಿಗಳನ್ನು ತಂದಿತ್ತು ಎಂದು ಟೀಕಿಸಿದರು. ಕಾಂಗ್ರೆಸ್ಸಿಗರು ನಿರಂತರವಾಗಿ ಸಂವಿಧಾನಕ್ಕೆ ಅವಮಾನ ಮಾಡಿದವರು, ಅಗೌರವ ತೋರಿದವರು ಎಂದು ರವಿಕುಮಾರ್ ಅವರು ದೂರಿದರು.

ಒಂದು ಸಮಯ ಬಂದರೆ, ಭಾರತದಲ್ಲಿ ಎಲ್ಲರಿಗೂ ಸಮಾನತೆ ಬರಲು ಮೀಸಲಾತಿ ನಿಲ್ಲಿಸಬೇಕಾಗುತ್ತದೆ ಎಂದು ರಾಹುಲ್ ಗಾಂಧಿಯವರು ಹೇಳಿದ್ದಾಗಿ ಆಕ್ರೋಶ ಹೊರಹಾಕಿದರು. ಸಂಸತ್ತಿನ ಅಧಿವೇಶನ ನಡೆಯುವ ಸಂದರ್ಭದಲ್ಲಿ ಸಂವಿಧಾನವನ್ನು ಕೈಯಲ್ಲಿ ಹಿಡಿದು ಎಲ್ಲರಿಗೂ ತೋರಿಸುತ್ತ ನಾವು ಸಂವಿಧಾನವನ್ನು ರಕ್ಷಿಸುತ್ತೇವೆ, ಸಂವಿಧಾನವನ್ನು ಉಳಿಸುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದರು. ಅದೇ ಸಂವಿಧಾನದಲ್ಲಿ ಮೀಸಲಾತಿ ಕುರಿತು ತಿಳಿಸಿದೆ. ಅಂಥ ಸಂವಿಧಾನಕ್ಕೆ ರಾಹುಲ್ ಗಾಂಧಿ ಅಪಮಾನ ಮಾಡಿದ್ದಾರೆ ಎಂದರು.

ಇದೇನಾ ನಿಮ್ಮ ಸಂವಿಧಾನ ರಕ್ಷಣೆ ಎಂಬ ಪ್ರಶ್ನೆಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯನವರು ಉತ್ತರ ಕೊಡಲಿ ಎಂದು ಆಗ್ರಹಿಸಿದರು.

‘ಬಿಜೆಪಿ ಸರ್ಕಾರ’ದ ಹಗರಣಗಳ ತನಿಖೆ ಚುರುಕುಗೊಳಿಸಲು ‘ಸಚಿವ ಸಂಪುಟ ಉಪ ಸಮಿತಿ’ ರಚನೆ: ಸಿಎಂ ಸಿದ್ದರಾಮಯ್ಯ

‘ಭಾರತ ಸೇನೆ’ಗೆ ಭೀಮ ಬಲ: 1.44 ಲಕ್ಷ ಕೋಟಿ ಮೌಲ್ಯದ ‘ಯುದ್ಧ ಸಾಮಾಗ್ರಿ ಖರೀದಿ’ಗೆ ಕೇಂದ್ರದ ಒಪ್ಪಿಗೆ

ಕೇಂದ್ರ ಸರ್ಕಾರದಿಂದ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ ಸೌಲಭ್ಯ : ಈ ದಾಖಲೆಗಳಿದ್ರೆ ಕೂಡಲೇ ಅರ್ಜಿ ಸಲ್ಲಿಸಿ!

Share. Facebook Twitter LinkedIn WhatsApp Email

Related Posts

BREAKING : 200 ವೈದ್ಯರ ಖಾಯಂ ನೇರ ನೇಮಕಕ್ಕೆ ಅರೋಗ್ಯ ಇಲಾಖೆ ನಿರ್ಧಾರ : ಸಚಿವ ಯು.ಟಿ ಖಾದರ್

2 Mins Read

ಜೂ.12ಕ್ಕೆ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಕರಾವಳಿಗೆ ಮೊದಲ ಬಾರಿ ಆಗಮನ!

2 Mins Read

ಒಂಟಿ ಮನೆಯಲ್ಲಿರುವವರೆ ಹುಷಾರ್ : ಬೆಂಗಳೂರಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಕದ್ದು ಕಳ್ಳರು ಪರಾರಿ!

1 Min Read
Recent News

BREAKING: ಕ್ಯಾನ್ಸರ್ ರೋಗಿಗಳಿಗೆ ಬಿಗ್ ಶಾಕ್: ದೇಶದಲ್ಲಿ ಕೀಮೋಥೆರಪಿ ಔಷಧಿ ದರ ಏರಿಕೆಗೆ ಕೇಂದ್ರ ಸರ್ಕಾರದ ಒಪ್ಪಿಗೆ

BREAKING : 200 ವೈದ್ಯರ ಖಾಯಂ ನೇರ ನೇಮಕಕ್ಕೆ ಅರೋಗ್ಯ ಇಲಾಖೆ ನಿರ್ಧಾರ : ಸಚಿವ ಯು.ಟಿ ಖಾದರ್

ಜೂ.12ಕ್ಕೆ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಕರಾವಳಿಗೆ ಮೊದಲ ಬಾರಿ ಆಗಮನ!

ಒಂಟಿ ಮನೆಯಲ್ಲಿರುವವರೆ ಹುಷಾರ್ : ಬೆಂಗಳೂರಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಕದ್ದು ಕಳ್ಳರು ಪರಾರಿ!

State News
KARNATAKA

BREAKING : 200 ವೈದ್ಯರ ಖಾಯಂ ನೇರ ನೇಮಕಕ್ಕೆ ಅರೋಗ್ಯ ಇಲಾಖೆ ನಿರ್ಧಾರ : ಸಚಿವ ಯು.ಟಿ ಖಾದರ್

By ಸುರೇಶ್‌ KARNATAKA 2 Mins Read

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ದೀರ್ಘಕಾಲದಿಂದ ಕಾಡುತ್ತಿರುವ ವೈದ್ಯರು ಮತ್ತು ಸಿಬ್ಬಂದಿಯ ಕೊರತೆಯನ್ನು ನೀಗಿಸಲು ಆರೋಗ್ಯ ಇಲಾಖೆ ಅತ್ಯಂತ ಮಹತ್ವದ…

ಜೂ.12ಕ್ಕೆ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಕರಾವಳಿಗೆ ಮೊದಲ ಬಾರಿ ಆಗಮನ!

ಒಂಟಿ ಮನೆಯಲ್ಲಿರುವವರೆ ಹುಷಾರ್ : ಬೆಂಗಳೂರಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಕದ್ದು ಕಳ್ಳರು ಪರಾರಿ!

BIG NEWS : ಬೆಂಗಳೂರಿನ ಕಸದ ಟೆಂಡರ್ ನಲ್ಲಿ ಸಾವಿರಾರು ಕೋಟಿ ಅಕ್ರಮ : ಲೋಕಾಯುಕ್ತಕ್ಕೆ ಬಿಜೆಪಿ ದೂರು ಸಲ್ಲಿಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.