Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : `ಮೂತ್ರ’ ವಿಸರ್ಜಿಸುವಾಗ ತಪ್ಪದೇ ಈ ಕೆಲಸ ಮಾಡಿ : ಎಂದಿಗೂ `ಕಿಡ್ನಿ ಕಾಯಿಲೆ’ ಬರಲ್ಲ.!

17/01/2026 9:19 AM

BIG NEWS : ಗ್ರಾಹಕರಿಗೆ ಬಿಗ್ ಶಾಕ್ : `TV, ಲ್ಯಾಪ್ ಟಾಪ್, ಮೊಬೈಲ್’ ಬೆಲೆಯಲ್ಲಿ ಭಾರೀ ಏರಿಕೆ | Electronics prices Hike

17/01/2026 9:15 AM

ALERT : ಪೋಷಕರೇ ಎಚ್ಚರ : `ಮೊಬೈಲ್ ರೀಲ್ಸ್’ ನೋಡುವ ಮಕ್ಕಳಲ್ಲಿ ಹೆಚ್ಚುತ್ತಿದೆ ಈ ಗಂಭೀರ ಸಮಸ್ಯೆ.!

17/01/2026 9:07 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ: ಸಿಎಂ ಸಿದ್ದರಾಮಯ್ಯ
KARNATAKA

ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ: ಸಿಎಂ ಸಿದ್ದರಾಮಯ್ಯ

By kannadanewsnow0712/09/2024 12:02 PM

ಬೆಂಗಳೂರು: ಇಂದು ಬೆಂಗಳೂರು ನಗರದ ಜನತೆಯ ಅನುಕೂಲಕ್ಕೆ ಮೊದಲ ಹಂತದ 100 ನೂತನ BMTC ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಒಟ್ಟು 840 ನೂತನ‌ಬಸ್ ಗಳು BMTC ಸೇರಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಬಳಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ನೂತನ BMTC ಬಸ್ ಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.

ಬೆಂಗಳೂರು ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಇಲ್ಲಿನ ಹೆಚ್ಚುತ್ತಿರುವ ಶ್ರಮಿಕ ವರ್ಗಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ನೂತನ‌ಬಸ್ ಗಳನ್ನು BMTC ಗೆ ಸೇರ್ಪಡೆಗೊಳಿಸುವ ಜೊತೆಗೆ ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಿದ್ದಲ್ಲದೆ ನೂತನವಾಗಿ ಇನ್ನಷ್ಟು ಕ್ಯಾಂಟೀನ್ ಗಳನ್ನು ಆರಂಭಿಸುತ್ತಿದ್ದೇವೆ.

ಇದೇ ಶ್ರಮಿಕ ವರ್ಗದ ಅನುಕೂಲಕ್ಕಾಗಿ ಶಕ್ತಿ ಯೋಜನೆ ಸೇರಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಯಶಸ್ವಿಯಾಗಿ ಮುಂದುವರೆಸುತ್ತಿದ್ದೇವೆ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದರು.

ಬಡವರ ಮತ್ತು ಮಧ್ಯಮ ವರ್ಗದ ವಿರೋಧಿಯಾಗಿರುವ ಬಿಜೆಪಿ ಈ ಗ್ಯಾರಂಟಿ ಯೋಜನೆಗಳ ವಿರುದ್ಧ ಅಪಪ್ರಚಾರ ಮಾಡುತ್ತಿವೆ. ಈ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಈ ಗ್ಯಾರಂಟಿಗಳು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿ ಆಗಲಿವೆ ಎಂದರು.

ಗೃಹಲಕ್ಷ್ಮಿ ಹಣದಿಂದ ಸಾವಿರಾರು ಕುಟುಂಬಗಳು ನಾನಾ ರೀತಿಯ ಅನುಕೂಲಗಳನ್ನು ಒದಗಿಸಿಕೊಳ್ಳುತ್ತಿರುವ ಬಗ್ಗೆ ಪ್ರತಿದಿನ ಮಾಧ್ಯಮಗಳು ತೋರಿಸುತ್ತಿವೆ ಎಂದರು.

ನಾವು ಬಡವರಿಗೆ ಅಕ್ಕಿ ಕೊಡುವ ಯೋಜನೆಗೆ ಮುಂದಾದರೆ ಕೇಂದ್ರ ಸರ್ಕಾರ ನಮಗೆ ಅಕ್ಕಿ ಕೊಡದೆ ತೊಂದರೆ ನೀಡಿತು. ಆದರೆ ನಾವು ಅಕ್ಕಿಯ ಬದಲಿಗೆ, ಅಕ್ಕಿಯ ಹಣವನ್ನು ಜನರಿಗೆ ನೀಡಿ ನುಡಿದಂತೆ ನಡೆದಿದ್ದೇವೆ ಎಂದರು.‌

ರಾಜ್ಯದ ಪ್ರತೀ ಕುಟುಂಬಗಳಿಗೆ ಪ್ರತೀ ತಿಂಗಳಿಗೆ 4-5 ಸಾವಿರ ರೂಪಾಯಿ ಅನುಕೂಲ ಆಗುತ್ತಿದೆ. ಇದರಿಂದ ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕ ಶಕ್ತಿ ನೀಡಿದ್ದೇವೆ ಎಂದರು.

ನಮ್ಮ ಸರ್ಕಾರ ಬಂದ ಮೇಲೆ ನಾಲ್ಕು ಬಾರಿ ಹೊಸ ಬಸ್ ಗಳನ್ನು‌ ಖರೀದಿಸಿ ಸವಲತ್ತು ಒದಗಿಸಿದ್ದೇವೆ ಎಂದರು.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ವಸತಿ ಸಚಿವ ಜಮೀರ್ ಅಹಮದ್, ಇಂಧನ ಸಚಿನ ಕೆ.ಜೆ.ಜಾರ್ಜ್, ಕೆಕೆಆರ್ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್ ಅವರು ಸೇರಿದಂತೆ ಹಲವರು ಉಪಸ್ಥಿತರಿದ್ದರು

Guarantee schemes will continue: CM Siddaramaiah ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ: ಸಿಎಂ ಸಿದ್ದರಾಮಯ್ಯ
Share. Facebook Twitter LinkedIn WhatsApp Email

Related Posts

ALERT : `ಮೂತ್ರ’ ವಿಸರ್ಜಿಸುವಾಗ ತಪ್ಪದೇ ಈ ಕೆಲಸ ಮಾಡಿ : ಎಂದಿಗೂ `ಕಿಡ್ನಿ ಕಾಯಿಲೆ’ ಬರಲ್ಲ.!

17/01/2026 9:19 AM2 Mins Read

ALERT : ಪೋಷಕರೇ ಎಚ್ಚರ : `ಮೊಬೈಲ್ ರೀಲ್ಸ್’ ನೋಡುವ ಮಕ್ಕಳಲ್ಲಿ ಹೆಚ್ಚುತ್ತಿದೆ ಈ ಗಂಭೀರ ಸಮಸ್ಯೆ.!

17/01/2026 9:07 AM2 Mins Read

ALERT : `Whats App’ ಬಳಕೆದಾರರೇ ಗಮನಿಸಿ : ಫೆ.1ರಿಂದ ಬದಲಾಗಲಿವೆ ಈ ಎಲ್ಲಾ ನಿಯಮಗಳು.!

17/01/2026 8:46 AM2 Mins Read
Recent News

ALERT : `ಮೂತ್ರ’ ವಿಸರ್ಜಿಸುವಾಗ ತಪ್ಪದೇ ಈ ಕೆಲಸ ಮಾಡಿ : ಎಂದಿಗೂ `ಕಿಡ್ನಿ ಕಾಯಿಲೆ’ ಬರಲ್ಲ.!

17/01/2026 9:19 AM

BIG NEWS : ಗ್ರಾಹಕರಿಗೆ ಬಿಗ್ ಶಾಕ್ : `TV, ಲ್ಯಾಪ್ ಟಾಪ್, ಮೊಬೈಲ್’ ಬೆಲೆಯಲ್ಲಿ ಭಾರೀ ಏರಿಕೆ | Electronics prices Hike

17/01/2026 9:15 AM

ALERT : ಪೋಷಕರೇ ಎಚ್ಚರ : `ಮೊಬೈಲ್ ರೀಲ್ಸ್’ ನೋಡುವ ಮಕ್ಕಳಲ್ಲಿ ಹೆಚ್ಚುತ್ತಿದೆ ಈ ಗಂಭೀರ ಸಮಸ್ಯೆ.!

17/01/2026 9:07 AM

‘ಮೋದಿ ಇದ್ದರೆ ಎಲ್ಲವೂ ಸಾಧ್ಯ’: ಇರಾನ್‌ನಿಂದ ತಾಯ್ನಾಡಿಗೆ ಸುರಕ್ಷಿತವಾಗಿ ಮರಳಿದ ಭಾರತೀಯರು

17/01/2026 9:02 AM
State News
KARNATAKA

ALERT : `ಮೂತ್ರ’ ವಿಸರ್ಜಿಸುವಾಗ ತಪ್ಪದೇ ಈ ಕೆಲಸ ಮಾಡಿ : ಎಂದಿಗೂ `ಕಿಡ್ನಿ ಕಾಯಿಲೆ’ ಬರಲ್ಲ.!

By kannadanewsnow5717/01/2026 9:19 AM KARNATAKA 2 Mins Read

ಮೂತ್ರಪಿಂಡದ ಕಾಯಿಲೆಯು ಹೆಚ್ಚು ಸಾಮಾನ್ಯವಾಗಿದೆ. ಇದು ನಮ್ಮ ದೇಹದ ಪ್ರಮುಖ ಭಾಗವಾಗಿದ್ದರೂ, ರಕ್ತವನ್ನು ಶುದ್ಧೀಕರಿಸಲು, ವಿಷವನ್ನು ತೆಗೆದುಹಾಕಲು ಮತ್ತು ನೀರಿನ…

ALERT : ಪೋಷಕರೇ ಎಚ್ಚರ : `ಮೊಬೈಲ್ ರೀಲ್ಸ್’ ನೋಡುವ ಮಕ್ಕಳಲ್ಲಿ ಹೆಚ್ಚುತ್ತಿದೆ ಈ ಗಂಭೀರ ಸಮಸ್ಯೆ.!

17/01/2026 9:07 AM

ALERT : `Whats App’ ಬಳಕೆದಾರರೇ ಗಮನಿಸಿ : ಫೆ.1ರಿಂದ ಬದಲಾಗಲಿವೆ ಈ ಎಲ್ಲಾ ನಿಯಮಗಳು.!

17/01/2026 8:46 AM

50 ವರ್ಷ ಮೇಲ್ಪಟ್ಟ ಪುರುಷರೇ ಗಮನಿಸಿ : ಈ 5 ಜೀವಸತ್ವಗಳು ಅಮೃತವಿದ್ದಂತೆ, ಪ್ರತಿದಿನ ತಪ್ಪದೇ ಸೇವಿಸಿ.!

17/01/2026 7:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.