ಬೆಂಗಳೂರು : ರಾಜ್ಯ ಸರ್ಕಾರವು 1 ರಿಂದ 10 ನೇ ತರಗತಿ ಮಕ್ಕಳಿಗೆ ವಾರದ 6 ದಿನವೂ ಮೊಟ್ಟೆ ವಿತರಿಸಲು ಸಿದ್ಧತೆ ನಡೆಸಿದ್ದು, ಇದೀಗ ಮಠಗಳು ನಡೆಸು ಶಾಲೆಗಳಿಗೆ ಮೊಟ್ಟೆ ವಿತರಿಸದಂತೆ ಸ್ವಾಮೀಜಿಗಳು ಒತ್ತಾಯಿಸಿದ್ದಾಎ.
ಶಾಲಾ ಮಕ್ಕಳಿಗೆ 6 ದಿನವೂ ಮೊಟ್ಟೆ ವಿತರಣೆಗೆ ಸಿದ್ಧತೆ ನಡೆಸಲಾಗಿದ್ದು, ಮೊಟ್ಟೆ ತಿನ್ನದ ಮಕ್ಕಳಿಗೆ ಶೇಂಗಾ ಚಿಕ್ಕಿ, ಬಾಳೆಹಣ್ಣು ವಿತರಿಸಲಾಗುತ್ತಿದೆ. ಆದರೆ ಇದೀಗ ಮಠಗಳು ನಡೆಸುವ ಶಾಲೆಗಳಿಗೆ ಮೊಟ್ಟೆ ವಿತರಣೆ ಬೇಡವೆಂದು ಸ್ವಾಮೀಜಿಗಳು ಒತ್ತಾಯಿಸಿದ್ದಾರೆ.
ಕಾಶಿ ಪೀಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಶ್ರೀಶೈಲ ಪೀಠದ ಚೆನ್ನಸಿದ್ದರಾಮ ಪಂಡಿತಾರಾಧ್ಯ ಸ್ವಾಮೀಜಿ ಸೇರಿದಂತೆ ವಿವಿಧ ಧರ್ಮಪೀಠಗಳು, ಮಠಗಳು ನಡೆಸುವ ಅನುದಾನಿತ ವಿದ್ಯಾಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಿಸುವುದು ಧಾರ್ಮಿಕ ತತ್ವ ಸಿದ್ಧಾಂತಗಳಿಗೆ ವಿರುದ್ಧವಾಗಿದೆ ಹೀಗಾಗಿ ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡಬಾರದು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಮೊಟ್ಟೆ ನಿರಾಕರಿಸುವ ಮಕ್ಕಳಿಗೆ ವಿತರಿಸುವಂತೆ ಮಠ ಮಂದಿರಗಳು ನಡೆಸುವ ಶಾಲೆಗಳು, ವಿದ್ಯಾಸಂಸ್ಥೆಯ ಮಕ್ಕಳಿಗೆ ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಿಸಲು ಪರಿಸ್ಕೃತ ಆದೇಶ ಹೊರಡಿಸಬೇಕೆಂದು ಸ್ವಾಮೀಜಿಗಳು ಆಗ್ರಹಿಸಿದ್ದಾರೆ