ಬೆಂಗಳೂರು : ರಾಜ್ಯದ ವೈದ್ಯ ವಿದ್ಯಾರ್ಥಿಗಳು ಕಡ್ಡಾಯವಾಗಿ ಗ್ರಾಮೀಣ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಬೇಕೆಂಬ ನಿಯಮಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಾತ್ಕಾಲಿಕವಾಗಿ ತಡೆ ನೀಡಿದೆ.
ಗ್ರಾಮೀಣ ಭಾಗದಲ್ಲಿರುವ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಹಿನ್ನೆಲೆಯಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳು ಒಮದು ವರ್ಷ ಗ್ರಾಮೀಣ ಸೇವೆ ಸಲ್ಲಿಸಿದರೆ, ವೈದ್ಯರ ಕೊರತೆ ಸ್ವಲ್ಪ ಮಟ್ಟಿಗೆ ನೀಗುತ್ತದೆ ಎಂಬ ಉದ್ದೇಶದಿಂದ ರಾಜ್ಯ ಸರ್ಕಾರವು ಗ್ರಾಮೀಣ ಸೇವೆಯನ್ನು ಕಡ್ಡಾಯಗೊಳಿಸಿತ್ತು. ಆದರೆ ಗ್ರಾಮೀಣ ಭಾಗದಲ್ಲಿ ಕೆಲಸ ನಿರ್ವಹಿಸಲು ವೈದ್ಯರೇ ಆಸಕ್ತಿ ತೋರದ ಕಾರಣ ವಿದ್ಯಾರ್ಥಿಗಳ ಕೂಡ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಸೇವೆಗೆ ತಾತ್ಕಾಲಿಕವಾಗಿ ತಡೆ ನೀಡಲಾಗಿದೆ.
ಸೆಪ್ಟೆಂಬರ್ ನಲ್ಲಿ ಪಿಜಿ ನೀಟ್ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಯಬೇಕಿದೆ. ಇದರಿಂದ ಬಹುತೇಕ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದಲ್ಲಿರುವ ಆಸ್ಪತ್ರೆಗಳಲ್ಲಿ ಪ್ರವೇಶ ಪಡೆಯುತ್ತಾರೆ. ಇದರಿಂದ ಅಲ್ಪಮಟ್ಟಿಗೆ ವೈದ್ಯರ ಕೊರತೆ ನೀಗಲಿದೆ. ಹೀಗಾಗಿ ಇಲಾಖೆಯು ಗ್ರಾಮೀಣ ಸೇವೆಗೆ ತಡೆ ನೀಡಿದೆ.