ಮಂಡ್ಯ : ಮಂಡ್ಯದಲ್ಲಿ ಕಿಡಿಗೇಡಿಗಳು ತಡರಾತ್ರಿ ಗಣೇಶ ಮೂರ್ತಿಯನ್ನು ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಸೋಂಪುರದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಇಂದು ಅನ್ನಸಂತಪರ್ಣೆ ಬಳಿಕ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡುವ ಪ್ಲಾನ್ ಮಾಡಿಕೊಳ್ಲಲಾಗಿತ್ತು. ಆದರೆ ತಡರಾತ್ರಿ ಕಿಡಿಗೇಡಿಗಳ ಗಣೇಶನ ಮೂರ್ತಿಯನ್ನು ಕದ್ದು ಪರಾರಿಯಾಗಿದ್ದಾರೆ.
ಗಣೇಶ ಮೂರ್ತಿಯನ್ನು ಕದ್ದು ಪರಾರಿಯಾಗಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಗ್ರಾಮಾಸ್ಥರು ಆಗ್ರಹಿಸಿದ್ದಾರೆ. ಮದ್ದೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.