Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶರನ್ನವರಾತ್ರಿಯ ಸಮಯದಲ್ಲಿ ಈ ಈ ರೀತಿಯಾದ ಒಂದು ಸಣ್ಣ ಹರಕೆ ಹೇಳಿ ನಿಮ್ಮ ಎಲ್ಲ ಕಷ್ಟಗಳು ದೂರವಾಗುತ್ತವಂತೆ..!

22/08/2025 11:06 AM

ದೆಹಲಿಯಲ್ಲಿ ಬೀದಿ ನಾಯಿಗಳ ಸ್ಥಳಾಂತರ: ಇಂದು ಸುಪ್ರೀಂ ಕೋರ್ಟ್ ತೀರ್ಪು

22/08/2025 11:06 AM

ಹೊರರಾಜ್ಯದ ಜಾನುವಾರನ್ನು ರಾಜ್ಯದ ಕಾಡಲ್ಲಿ ಮೇಯಿಸಲು ನಿರ್ಬಂಧ : ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ

22/08/2025 11:01 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಬ್ರಹತ್ ಮಾನವ ಸರಪಳಿ ರಚನೆ ಯಶಸ್ವಿ
KARNATAKA

ಶಿವಮೊಗ್ಗ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಬ್ರಹತ್ ಮಾನವ ಸರಪಳಿ ರಚನೆ ಯಶಸ್ವಿ

By kannadanewsnow0915/09/2024 4:42 PM

ಶಿವಮೊಗ್ಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಇಂದು ಬೆಳಿಗ್ಗೆ 9ರಿಂದ 10 ಗಂಟೆಯವರೆಗೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಬಾರಂದೂರಿನಿಂದ ಶಿವಮೊಗ್ಗ ತಾಲ್ಲೂಕಿನ ಗಡಿ ಗ್ರಾಮ ಮಡಿಕೆಚಿಲೂರುವರೆಗೆ ಮಾನವ ಸರಪಳಿ ರಚನೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.

ಈ ಬೃಹತ್ ಮಾನವ ಸರಪಳಿ ನಿರ್ಮಾಣದಲ್ಲಿ ಜಿಲ್ಲೆಯ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸ್ಥಳೀಯ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸ್ವಸಹಾಯ ಗುಂಪುಗಳ ಮಹಿಳಾ ಸದಸ್ಯರು, ನೌಕರರು ಹಾಗೂ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿದರು.

ಜಿಲ್ಲಾಧಿಕಾರಿ ಗಳ ಕಚೇರಿ ಅವರಣದಲ್ಲಿ ಆಯೋಜಿಸಲಾಗಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಂವಿಧಾನ ಪೀಠಿಕೆಯನ್ನು ವಾಚಿಸಿದರು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅವರು ಮಾತನಾಡಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೀದರ್ ನಿಂದ ಚಾಮರಾಜನಗರದವರೆಗೆ ಒಟ್ಟು 2500 ಕಿ.ಮೀ ಗಳ ಹಾಗೂ ಜಿಲ್ಲೆಯಲ್ಲಿ 60ಕಿ. ಮೀ. ಮಾನವ ಸರಪಳಿ ರಚನೆ ಮಾಡುತ್ತಿರುವುದು ಐತಿಹಾಸಿಕ ದಾಖಲೆಯಯಾಗಿದೆ.ಈ ಘಟನೆ ಇತಿಹಾಸದ ಪುಟಗಳಲ್ಲಿ ಸೇರಲಿದೆ ಎಂದರು.

ಸಮಬಾಳು, ಸಮಾನತೆ, ಭ್ರಾತೃತ್ವದ ಸಂಕೇತವಾಗಿರುವ ಈ ಕಾರ್ಯಕ್ರಮ ಭಾರತದ ಪ್ರಜೆಯಾಗಿರುವ ಎಲ್ಲರಿಗೂ ಹೆಮ್ಮೆ ಎನಿಸಲಿದೆ. ಮತ ಜಾತಿ, ಭಾಷೆಗಳ ಭೇದವಿಲ್ಲದೆ, ಜಾತ್ಯತೀತವಾಗಿ ಎಲ್ಲರೂ ಕೈ ಕೈ ಹಿಡಿದು ಮಾನವ ಸರಪಳಿ ರಚನೆ ಮಾಡುವ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಅತ್ಯಂತ ಹರ್ಷದ ಸಂಗತಿ ಎಂದರು.

ವಿಶ್ವದಲ್ಲಿಯೇ ಅತ್ಯಂತ ದೊಡ್ಡ ಸಂವಿಧಾನ ಹೊಂದಿರುವ ದೇಶ ನಮ್ಮದು ಸಂವಿಧಾನದ ಮೌಲ್ಯ ಗಳನ್ನು ಎತ್ತಿಹಿಡಿದು ಸಾಕಾರಗೊಳಿಸಬೇಕಾದುದು ಹಾಗೂ ಸಂವಿಧಾನ ದತ್ತವಾಗಿರುವ ಹಕ್ಕುಗಳನ್ನು ಬಳಸಿಕೊಳ್ಳುವಂತೆ ಯೇ ಕರ್ತವ್ಯಗಳನ್ನು ಮರೆಯಬಾರದು ಎಂದರು.

ರಸಋಷಿ ಕುವೆಂಪು ಅವರು ನಾಡಿಗೆ ನೀಡಿದ ಸಂದೇಶದಂತೆ ಈ ದೇಶದಲ್ಲೂ ವಾಸಿಸುವ ಎಲ್ಲರಿಗೂ ಈ ದೇಶ ಸರ್ವ ಜನಾಂಗದ ಶಾಂತಿಯ ತೋಟವಾಗಿರಲಿ ಎಂದು ಆಶಿಸುತ್ತೇನೆ ಎಂದ ಅವರು ಭಾಗವಹಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.

ಕಾರ್ಯಕ್ರಮದ ಅಂಗವಾಗಿ ಮಾರ್ಗ ಮಧ್ಯದ ಸುಮಾರು 20ಕ್ಕೂ ಹೆಚ್ಚಿನ ಸ್ಥಳಗಳಲ್ಲಿ ಸಭಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಹಲವಾರು ಕಲಾತಂಡಗಳು ಹಾಗೂ ವಿವಿಧತೆಯಲ್ಲಿ ಏಕತೆಯನ್ನು ಸಾರುವ ವೇಷ ಭೂಷಣಗಳೊಂದಿಗೆ ಸಾರ್ವಜನಿಕರು ಭಾಗವಹಿಸಿದ್ದರು. ನೆರೆದಿದ್ದವರು ಘೋಷಣೆ ಕೂಗಿ ಸಂಭ್ರಮಿಸಿದರು. ನಂತರ ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾಗಿಯಾದರು.

ಜಿಲ್ಲಾಧಿಕಾರಿಗಳ ಕಚೇರಿ ಆಭರಣದಲ್ಲಿ ನಡೆದಾದ ಈ ಕಾರ್ಯಕ್ರಮದಲ್ಲಿ ಶಾಸಕ ಎಸ್ ಎನ್ ಚನ್ನಬಸಪ್ಪ ವಿಧಾನಪರಿಷತ್ ಸದಸ್ಯ ಬಲ್ಕಿಶ್ ಬಾನು, ಜಿಲ್ಲಾಧಿಕಾರಿ ಗುರುದತ್ ಹೆಗಡೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿಕೆ ಮಿಥುನ್ ಕುಮಾರ್ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್ ಹೇಮಂತ್ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಸರ್ಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸ್ಥಳೀಯ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಜೋಶಿಯವರೇ, ಮುನಿರತ್ನರನ್ನು ಬಂಧಿಸದೆ ಕೈಗೆ ಲಾಲಿಪಾಪ್ ಕೊಟ್ಟು ಮುದ್ದಾಡಬೇಕಿತ್ತೇ?- ಕಾಂಗ್ರೆಸ್ ಪ್ರಶ್ನೆ

BIG UPDATE: ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗ ಮುಟ್ಟಿ ದೌರ್ಜನ್ಯವೆಸಗಿದ್ದ ಶಿಕ್ಷಕ ಅರೆಸ್ಟ್: ಸೇವೆಯಿಂದ ಅಮಾನತು

Share. Facebook Twitter LinkedIn WhatsApp Email

Related Posts

ಶರನ್ನವರಾತ್ರಿಯ ಸಮಯದಲ್ಲಿ ಈ ಈ ರೀತಿಯಾದ ಒಂದು ಸಣ್ಣ ಹರಕೆ ಹೇಳಿ ನಿಮ್ಮ ಎಲ್ಲ ಕಷ್ಟಗಳು ದೂರವಾಗುತ್ತವಂತೆ..!

22/08/2025 11:06 AM2 Mins Read

ಹೊರರಾಜ್ಯದ ಜಾನುವಾರನ್ನು ರಾಜ್ಯದ ಕಾಡಲ್ಲಿ ಮೇಯಿಸಲು ನಿರ್ಬಂಧ : ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ

22/08/2025 11:01 AM1 Min Read

Pitru Paksha 2025 : ಪಿತೃಪಕ್ಷ ಯಾವಾಗ ಪ್ರಾರಂಭವಾಗಲಿದೆ? ದಿನಾಂಕ, ಮುಹೂರ್ತ, ವಿಶೇಷತೆ ತಿಳಿಯಿರಿ

22/08/2025 9:42 AM2 Mins Read
Recent News

ಶರನ್ನವರಾತ್ರಿಯ ಸಮಯದಲ್ಲಿ ಈ ಈ ರೀತಿಯಾದ ಒಂದು ಸಣ್ಣ ಹರಕೆ ಹೇಳಿ ನಿಮ್ಮ ಎಲ್ಲ ಕಷ್ಟಗಳು ದೂರವಾಗುತ್ತವಂತೆ..!

22/08/2025 11:06 AM

ದೆಹಲಿಯಲ್ಲಿ ಬೀದಿ ನಾಯಿಗಳ ಸ್ಥಳಾಂತರ: ಇಂದು ಸುಪ್ರೀಂ ಕೋರ್ಟ್ ತೀರ್ಪು

22/08/2025 11:06 AM

ಹೊರರಾಜ್ಯದ ಜಾನುವಾರನ್ನು ರಾಜ್ಯದ ಕಾಡಲ್ಲಿ ಮೇಯಿಸಲು ನಿರ್ಬಂಧ : ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ

22/08/2025 11:01 AM

BREAKING: ಸಂಸತ್ತಿನಲ್ಲಿ ಭದ್ರತಾ ಉಲ್ಲಂಘನೆ: ಗೋಡೆ ಏರಿ ಹೊಸ ಕಟ್ಟಡಕ್ಕೆ ನುಗ್ಗಲು ಯತ್ನಿಸಿದ ವ್ಯಕ್ತಿ | Security breach at Parliament

22/08/2025 10:55 AM
State News
KARNATAKA

ಶರನ್ನವರಾತ್ರಿಯ ಸಮಯದಲ್ಲಿ ಈ ಈ ರೀತಿಯಾದ ಒಂದು ಸಣ್ಣ ಹರಕೆ ಹೇಳಿ ನಿಮ್ಮ ಎಲ್ಲ ಕಷ್ಟಗಳು ದೂರವಾಗುತ್ತವಂತೆ..!

By kannadanewsnow5722/08/2025 11:06 AM KARNATAKA 2 Mins Read

ಹಲವು ಕಷ್ಟಗಳ ನಿವಾರಣೆಗೆ ಈ ಇಡುಗುಂಜಿ ಗಣಪತಿಯ ಮೂಲ ಸಂಕಲ್ಪ ವಿಧಾನ ಹೊನ್ನಾವರದಿಂದ ಕೇವಲ 15 ಕಿಲೋ ಮೀಟರ್ ಹಾಗೂ…

ಹೊರರಾಜ್ಯದ ಜಾನುವಾರನ್ನು ರಾಜ್ಯದ ಕಾಡಲ್ಲಿ ಮೇಯಿಸಲು ನಿರ್ಬಂಧ : ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ

22/08/2025 11:01 AM

Pitru Paksha 2025 : ಪಿತೃಪಕ್ಷ ಯಾವಾಗ ಪ್ರಾರಂಭವಾಗಲಿದೆ? ದಿನಾಂಕ, ಮುಹೂರ್ತ, ವಿಶೇಷತೆ ತಿಳಿಯಿರಿ

22/08/2025 9:42 AM

BREAKING : ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಇಂದು `ಮದ್ಧೂರು ಬಂದ್’ ಗೆ ಕರೆ.!

22/08/2025 9:23 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.