Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GST 2.0 ಕ್ರಾಂತಿ: ಗೃಹೋಪಯೋಗಿ ವಸ್ತುಗಳು ಅಗ್ಗ, ಮಧ್ಯಮ ವರ್ಗದ ಜನರಿಗೆ ಬಿಗ್ ರಿಲೀಫ್

04/09/2025 9:44 AM

BREAKING: ಷೇರುಪೇಟೆಯಲ್ಲಿ GST ಮಾಂತ್ರಿಕತೆ: ನಿಫ್ಟಿ ಮತ್ತು ಸೆನ್ಸೆಕ್ಸ್ ಶೇ.1ರಷ್ಟು ಏರಿಕೆ | Share market

04/09/2025 9:35 AM

‘ಅಸಾಧಾರಣ ಮೈಲಿಗಲ್ಲು’: ಮುಂದಿನ ತಲೆಮಾರಿನ GST ಸುಧಾರಣೆಗಳನ್ನು ಸ್ವಾಗತಿಸಿದ ಉದ್ಯಮ ಸಂಘಗಳು

04/09/2025 9:29 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದು ‘ಈದ್ ಮಿಲಾದ್’ ಹಬ್ಬ: ಬೆಂಗಳೂರಲ್ಲಿ ‘ಪೊಲೀಸ್ ಇಲಾಖೆ’ಯ ಈ ಮಾರ್ಗಸೂಚಿ ಕ್ರಮ ಪಾಲನೆ ಕಡ್ಡಾಯ
KARNATAKA

ಇಂದು ‘ಈದ್ ಮಿಲಾದ್’ ಹಬ್ಬ: ಬೆಂಗಳೂರಲ್ಲಿ ‘ಪೊಲೀಸ್ ಇಲಾಖೆ’ಯ ಈ ಮಾರ್ಗಸೂಚಿ ಕ್ರಮ ಪಾಲನೆ ಕಡ್ಡಾಯ

By kannadanewsnow0916/09/2024 7:33 AM

ಬೆಂಗಳೂರು: ನಾಗಮಂಗಲ ಗಲಭೆಯ ನಂತ್ರ ಪೊಲೀಸ್ ಇಲಾಖೆ ಬೆಂಗಳೂರಲ್ಲಿ ಅಂತಹ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಿದೆ. ಈ ಹಿನ್ನಲೆಯಲ್ಲೇ ಬೆಂಗಳೂರಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸಾರ್ವಜನಿಕರು ಅನುಸರಿಸಬೇಕಾದಂತ ಮಾರ್ಗಸೂಚಿ ಕ್ರಮಗಳನ್ನು ಬಿಡುಗಡೆ ಮಾಡಿದೆ. ಇಂದು ಈದ್ ಮಿಲಾದ್ ವೇಳೆಯಲ್ಲಿ ಈ ಮಾರ್ಗಸೂಚಿ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ನಗರ ಪೊಲೀಸ್ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ದಿನಾಂಕ:16/09/2024 ರಂದು ಬೆಂಗಳೂರು ನಗರಾದ್ಯಂತ ಮುಸ್ಲಿಮರು ಈದ್‌ಮಿಲಾದ್ ಹಬ್ಬವನ್ನು ಆಚರಿಸುವ ಪ್ರಯುಕ್ತ, ಮಸೀದಿಗಳಲ್ಲಿ ಪ್ರಾರ್ಥನೆ ಮುಗಿಸಿ ನಂತರ, ಮೆರವಣಿಗೆಯಲ್ಲಿ ಸ್ಥಬ್ಧ ಚಿತ್ರಗಳು, ಧ್ವನಿವರ್ಧಕಗಳನ್ನು ಉಪಯೋಗಿಸಿಕೊಂಡು, ನಡಿಗೆಯಲ್ಲಿ ವೈ.ಎಂ.ಸಿ.ಎ. ಮೈದಾನ, ಮಿಲ್ಲರ್‌ರಸ್ತೆ ಖುದ್ದು ಸಾಬ್ ಇದ್ದಾ ಮೈದಾನ, ಶಿವಾಜಿನಗರ ಛೋಟಾ ಮೈದಾನ, ಭಾರತೀನಗರದ ಸುಲ್ತಾನ್‌ಜೀ ಗುಂಟಾ ಮೈದಾನಗಳಲ್ಲಿ ಹಾಗೂ ಇತರೆಡೆಗಳಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಈ ಸಂಬಂಧ ಹಬ್ಬದ ದಿನದಂದು ಈ ಕೆಳಕಂಡ ಸೂಚನೆಗಳನ್ನು ಅನುಸರಿಸಲು ಸೂಚಿಸಲಾಗಿದೆ.

1. ಮೆರವಣಿಗೆ ಸಾಗುವ ಹಾದಿಯಲ್ಲಿ ಸಾರ್ವಜನಿಕರಿಗೆ ಆಡಚಣೆ ಉಂಟಾಗದಂತೆ ಸ್ವಯಂಸೇವಕರು ಹಾಗೂ ಅಯೋಜಕರು ರಸ್ತೆಯ ಎರಡು ಬದಿಯಲ್ಲಿ ನಿಂತು ಮೆರವಣಿಗೆಗಾರರಿಗೆ ಸೂಕ್ತ ನಿರ್ದೇಶನವನ್ನು ನೀಡಿ ಮೆರವಣಿಗೆಯನ್ನು ಶಾಂತ ರೀತಿಯಲ್ಲಿ ಸಾಗುವಂತೆ ಸಹಕರಿಸುವುದು ಹಾಗೂ ಸಾರ್ವಜನಿಕ ಸಂಚಾರ ಸುಗಮವಾಗಿ ಸಾಗಲು ಅನುವು ಮಾಡುವುದು.

2. ಮೆರವಣಿಗೆಯಲ್ಲಿ ಪಾಲ್ಗೊಳ್ಳುವವರು ಯಾವುದೆ ಹರಿತವಾದ ವಸ್ತುಗಳನ್ನು ಹೊಂದಿರಬಾರದು.

3. ಈದ್ ಹಬ್ಬದ ದಿನದಂದು ಮೆರವಣಿಗೆಯ ಸಮಯದಲ್ಲಿ ಯಾವುದೆ ಕಾರಣಕ್ಕೂ ಡಿಜೆ ಗಳನ್ನು ಬಳಸಬಾರದು. 4. ಈದ್ ಹಬ್ಬದ ಪ್ರಯುಕ್ತ ಸ್ತಬ್ದ ಚಿತ್ರಗಳು ಯಾವುದೇ ಪ್ರಚೋದನಾತ್ಮಕ ಅಂಶಗಳನ್ನು ಒಳಗೊಂಡಿರಬಾರದು. 5. ಯಾವುದೇ ಪೂಜಾ ಸ್ಥಳಗಳ (ದೇವಸ್ಥಾನ/ಚರ್ಚಗಳ) ಮುಂಭಾಗದಲ್ಲಿ ಘೋಷಣೆಗಳನ್ನು ಕೂಗಬಾರದು.

6. ಮೆರವಣಿಗೆಯ ಸಮಯದಲ್ಲಿ ಅಯೋಜಕರು ವಿದ್ಯುತ್ (ಕೆ.ಇ.ಬಿ) ಇಲಾಖೆಯಿಂದ ಸಿಬ್ಬಂದಿಯವರನ್ನು ನೇಮಿಸಿಕೊಂಡು ಯಾವುದೇ ವಿದ್ಯುತ್ ಸಂಪರ್ಕಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳತಕ್ಕದ್ದು.

7. ಈದ್ ಹಬ್ಬದ ಮೆರವಣಿಗೆಯ ಸಂದರ್ಭದಲ್ಲಿ ಅಯೋಜಕರು ಬೆಂಕಿನಿಂದಿಸುವ ಸಾಮಗ್ರಿಯನ್ನು ಇಟ್ಟುಕೊಳ್ಳುವುದು.

8. ರಾತ್ರಿ ಮೆರವಣಿಗೆ ಮುಗಿದ ನಂತರ ಬೈಕ್‌ನಲ್ಲಿ ಇಬ್ಬರಿಗಿಂತ ಹೆಚ್ಚಾಗಿ ದ್ವಿ-ಚಕ್ರ ವಾಹನವನ್ನು ಚಲಿಸಬಾರದು.

9. ಹಿರಿಯ ನಾಗಕರಿಕರಿಗೆ ಶಾಲಾ ಮಕ್ಕಳಿಗೆ ಹಾಗೂ ಇತರರಿಗೆ ತೊಂದರೆಯಾಗದಂತೆ ಧ್ವನಿವರ್ಧಕಗಳನ್ನು ಬೆಳಿಗ್ಗೆ 06-00 ಗಂಟೆಯಿಂದ ರಾತ್ರಿ 10-00 ಗಂಟೆಯವರೆಗೆ ಮಾತ್ರ ಬಳಸಿಕೊಳ್ಳಲು ಸ್ಥಳೀಯ ಪೊಲೀಸರ ಅನುಮತಿ/ಪರವಾನಗೆ ಪಡೆದುಕೊಳ್ಳತಕ್ಕದ್ದು ಎಂದಿದೆ.

ಈ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಧ್ವನಿವರ್ಧಕಗಳಿಂದ ಹೊರಡುವ ಶಬ್ದದ ಪ್ರಮಾಣವನ್ನು ಕಡಿಮೆ ಮಟ್ಟದಲ್ಲಿ ಇಟ್ಟುಕೊಳ್ಳುವುದು ಹಾಗೂ ಯಾವುದೇ ಕಾರಣಕ್ಕೂ ಡಿ.ಜೆ. ಸೌಂಡ್ ಸಿಸ್ಟಂ ಅಳವಡಿಸಲು ಅವಕಾಶ ಇರುವುದಿಲ್ಲ ಎಂಬುದಾಗಿ ಮಾರ್ಗಸೂಚಿಯಲ್ಲಿ ಪೊಲೀಸ್ ಇಲಾಖೆ ತಿಳಿಸಿದೆ.

ಬೆಂಗಳೂರು ಜನತೆ ಗಮನಕ್ಕೆ: ಇಂದು ‘ಈದ್ ಮಿಲಾದ್’ ಹಿನ್ನಲೆಯಲ್ಲಿ ಈ ರಸ್ತೆಗಳಲ್ಲಿ ‘ಸಂಚಾರ ನಿರ್ಬಂಧ’ | Bengaluru Traffic Update

ಮದುವೆಯಾದ ’40 ದಿನ’ಗಳಲ್ಲೇ ವಿಚ್ಛೇದನ ಕೋರಿದ ಮಹಿಳೆ: ಕಾರಣ ಏನು ಗೊತ್ತಾ?

Share. Facebook Twitter LinkedIn WhatsApp Email

Related Posts

BREAKING : ದಾವಣಗೆರೆ ಎಸ್ಪಿಯನ್ನ ನಾಯಿಗೆ ಹೋಲಿಸಿದ ಬಿಜೆಪಿ ಶಾಸಕ ಬಿಪಿ ಹರೀಶ್​​ ವಿರುದ್ಧ ‘FIR’ ದಾಖಲು

04/09/2025 9:29 AM1 Min Read

ಸಿಎಂ ಸಿದ್ದರಾಮಯ್ಯ ಸರ್ಕಾರಿ ಕಚೇರಿ ಬಳಿ ಅಪಘಾತ : ನಿಯಂತ್ರಣ ತಪ್ಪಿ ಡಿವೈಡರ್ ಏರಿದ ಗೂಡ್ಸ್ ವಾಹನ

04/09/2025 9:19 AM1 Min Read

ಬಾಬರ್ ಇಲ್ಲದೆ ಇದ್ದರೂ ಮುಷ್ತಾಕ್ ಅಂತವರು ನಮ್ಮ ಮಧ್ಯೆ ಇದ್ದಾರೆ ಎಚ್ಚರದಿಂದಿರಿ : ಮಾಜಿ ಸಂಸದ ಪ್ರತಾಪ್ ಸಿಂಹ

04/09/2025 9:16 AM1 Min Read
Recent News

GST 2.0 ಕ್ರಾಂತಿ: ಗೃಹೋಪಯೋಗಿ ವಸ್ತುಗಳು ಅಗ್ಗ, ಮಧ್ಯಮ ವರ್ಗದ ಜನರಿಗೆ ಬಿಗ್ ರಿಲೀಫ್

04/09/2025 9:44 AM

BREAKING: ಷೇರುಪೇಟೆಯಲ್ಲಿ GST ಮಾಂತ್ರಿಕತೆ: ನಿಫ್ಟಿ ಮತ್ತು ಸೆನ್ಸೆಕ್ಸ್ ಶೇ.1ರಷ್ಟು ಏರಿಕೆ | Share market

04/09/2025 9:35 AM

‘ಅಸಾಧಾರಣ ಮೈಲಿಗಲ್ಲು’: ಮುಂದಿನ ತಲೆಮಾರಿನ GST ಸುಧಾರಣೆಗಳನ್ನು ಸ್ವಾಗತಿಸಿದ ಉದ್ಯಮ ಸಂಘಗಳು

04/09/2025 9:29 AM

BREAKING : ದಾವಣಗೆರೆ ಎಸ್ಪಿಯನ್ನ ನಾಯಿಗೆ ಹೋಲಿಸಿದ ಬಿಜೆಪಿ ಶಾಸಕ ಬಿಪಿ ಹರೀಶ್​​ ವಿರುದ್ಧ ‘FIR’ ದಾಖಲು

04/09/2025 9:29 AM
State News
KARNATAKA

BREAKING : ದಾವಣಗೆರೆ ಎಸ್ಪಿಯನ್ನ ನಾಯಿಗೆ ಹೋಲಿಸಿದ ಬಿಜೆಪಿ ಶಾಸಕ ಬಿಪಿ ಹರೀಶ್​​ ವಿರುದ್ಧ ‘FIR’ ದಾಖಲು

By kannadanewsnow0504/09/2025 9:29 AM KARNATAKA 1 Min Read

ದಾವಣಗೆರೆ : ದಾವಣಗೆರೆ ಶಾಸಕ ಬಿಪಿ ಹರೀಶ್​ ಎಸ್​​ಪಿ ಉಮಾ ಪ್ರಶಾಂತ್​ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಆರೋಪ ಹಿನ್ನಲೆಯಲ್ಲಿ…

ಸಿಎಂ ಸಿದ್ದರಾಮಯ್ಯ ಸರ್ಕಾರಿ ಕಚೇರಿ ಬಳಿ ಅಪಘಾತ : ನಿಯಂತ್ರಣ ತಪ್ಪಿ ಡಿವೈಡರ್ ಏರಿದ ಗೂಡ್ಸ್ ವಾಹನ

04/09/2025 9:19 AM

ಬಾಬರ್ ಇಲ್ಲದೆ ಇದ್ದರೂ ಮುಷ್ತಾಕ್ ಅಂತವರು ನಮ್ಮ ಮಧ್ಯೆ ಇದ್ದಾರೆ ಎಚ್ಚರದಿಂದಿರಿ : ಮಾಜಿ ಸಂಸದ ಪ್ರತಾಪ್ ಸಿಂಹ

04/09/2025 9:16 AM
Dharmasthala

ದಕ್ಷಿಣಕನ್ನಡ : ಧರ್ಮಸ್ಥಳ ಬಗ್ಗೆ ಅಪಪ್ರಚಾರ ಖಂಡಿಸಿ, ನಾಳೆ ಬೃಹತ್ ‘ಧರ್ಮ ಜಾಗೃತಿ’ ಸಮಾವೇಶ

04/09/2025 9:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.