Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಜೆಟ್ ದಿನವೇ ಬೆಲೆ ಏರಿಕೆ ಬಿಸಿ: ಗ್ಯಾಸ್ ಸಿಲಿಂಡರ್ ಬೆಲೆ ಮತ್ತು ತಂಬಾಕು ಉತ್ಪನ್ನಗಳ ದರದಲ್ಲಿ ಬದಲಾವಣೆ!

30/01/2026 8:29 AM

ರೈತರಿಗೆ ಭರ್ಜರಿ ಗುಡ್ ನ್ಯೂಸ್: 30 ಸಾವಿರ ರೂ. ಗಡಿ ದಾಟಿದ ಕೊಬ್ಬರಿ ದರ

30/01/2026 8:24 AM

ಚಾಕೊಲೇಟ್, ಚಿಪ್ಸ್, ತಂಪು ಪಾನೀಯ ಈಗ ಹೆಚ್ಚು ದುಬಾರಿ! ಅತ್ಯಧಿಕ ‘GST ಸ್ಲ್ಯಾಬ್’ನಲ್ಲಿ ‘ಜಂಕ್ ಫುಡ್ಸ್’ ಶಿಫಾರಸು!

30/01/2026 8:16 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದಲ್ಲಿ `ಡ್ರಗ್ಸ್’ ಹಾವಳಿ ತಡೆಗೆ ಮಹತ್ವದ ಕ್ರಮ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ
KARNATAKA

BIG NEWS: ರಾಜ್ಯದಲ್ಲಿ `ಡ್ರಗ್ಸ್’ ಹಾವಳಿ ತಡೆಗೆ ಮಹತ್ವದ ಕ್ರಮ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ

By kannadanewsnow5719/09/2024 5:54 AM

ಬೆಂಗಳೂರು : ರಾಜ್ಯದಲ್ಲಿ ಡ್ರಗ್ಸ್ ಜಾಲದ ಬೇರುಗಳನ್ನೇ ಕತ್ತರಿಸಲು ತೀರ್ಮಾನ ಮಾಡಿದ್ದೇವೆ. ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ. ಇದಕ್ಕಾಗಿ ಇನ್ನಷ್ಟು ಕಠಿಣ, ನಿರ್ದಾಕ್ಷಿಣ್ಯವಾದ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ಗೃಹ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದ್ದು, ಮೇಲಿಂದ ಮೇಲೆ ಸಭೆಗಳನ್ನು ನಡೆಸಿ, ಅಗತ್ಯ ಕಾರ್ಯತಂತ್ರ ರೂಪಿಸಲು ಸೂಚನೆ ನೀಡಲಾಗಿದೆ. ಟಾಸ್ಕ್ ಫೋರ್ಸ್‌ನಲ್ಲಿ ಆರೋಗ್ಯ ಸಚಿವರು, ಶಿಕ್ಷಣ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಇರುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿನ ಡ್ರಗ್ಸ್ ಪಿಡುಗನ್ನು ಸಮರ್ಪಕವಾಗಿ ತಡೆಗಟ್ಟುವ ಉದ್ದೇಶದಿಂದ ಈ ಕೆಳಕಂಡಂತೆ ಮಾನ್ಯ ಸಚಿವರುಗಳನ್ನೊಳಗೊಂಡ ಕಾರ್ಯಪಡೆಯನ್ನು ರಚಿಸಲಾಗಿದೆ. ಸದರಿ ಕಾರ್ಯಪಡೆಯು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ತಿಂಗಳಿಗೊಮ್ಮೆ ಸಭೆ ನಡೆಸಿ, ರಾಜ್ಯದಲ್ಲಿ ಡ್ರಗ್ಸ್ ಪಿಡುಗನ್ನು ಸಂಪೂರ್ಣವಾಗಿ ತಡೆಗಟ್ಟುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಕೋರಿದೆ.

ರಾಜ್ಯದಲ್ಲಿ ಡ್ರಗ್ಸ್ ಜಾಲದ ಬೇರುಗಳನ್ನೇ ಕತ್ತರಿಸಲು ತೀರ್ಮಾನ ಮಾಡಿದ್ದೇವೆ. ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ, ಇದಕ್ಕಾಗಿ ಇನ್ನಷ್ಟು ಕಠಿಣ, ನಿರ್ದಾಕ್ಷಿಣ್ಯವಾದ ಕ್ರಮಗಳನ್ನು ಕೈಗೊಳ್ಳಲು ಇಂದು ನಿರ್ಧರಿಸಲಾಗಿದೆ.ಗೃಹ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದ್ದು, ಮೇಲಿಂದ ಮೇಲೆ ಸಭೆಗಳನ್ನು ನಡೆಸಿ, ಅಗತ್ಯ ಕಾರ್ಯತಂತ್ರ ರೂಪಿಸಲು ಸೂಚನೆ ನೀಡಲಾಗಿದೆ. ಟಾಸ್ಕ್ ಫೋರ್ಸ್ ನಲ್ಲಿ ಆರೋಗ್ಯ ಸಚಿವರು, ಶಿಕ್ಷಣ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಇರುತ್ತಾರೆ. ಠಾಣಾಧಿಕಾರಿಗಳಿಗೆ ಗೊತ್ತಿಲ್ಲದೆ ಡ್ರಗ್ಸ್ ದಂಧೆ ನಡೆಯಲು ಸಾಧ್ಯವಿಲ್ಲ. ಹೀಗಾಗಿ ಠಾಣಾಧಿಕಾರಿ ಡಿವೈಎಸ್‌ಪಿ, ಎಸಿಪಿ ಮತ್ತು ಎಸ್.ಪಿ ಗಳನ್ನು ಹೊಣೆ ಮಾಡಲು ತೀರ್ಮಾನಿಸಿದ್ದೇವೆ. ಕರ್ತವ್ಯಲೋಪವಾದಲ್ಲಿ ಇವರ ವಿರುದ್ಧ ಕ್ರಮ ಖಚಿತ ಎಂದು ತಿಳಿಸಿದ್ದಾರೆ.

ಪೆಡ್ಲರ್ ಗಳಿಗೆ ಜೀವಾವಧಿ ಶಿಕ್ಷೆಯವರೆಗೂ ಕಠಿಣ ಶಿಕ್ಷೆ ವಿಧಿಸಲು ಕಾನೂನು ತಿದ್ದುಪಡಿಗೆ ಕ್ರಮ ವಹಿಸಲಾಗುವುದು. ಈಗ ಜಾರಿ ಇರುವ ಕಾನೂನನ್ನು ಇನ್ನಷ್ಟು ಪರಿಣಾಮಕಾರಿಯಾಗಿಸುವ ನಿಟ್ಟಿನಲ್ಲಿ ಮೊದಲು ಪ್ರಯತ್ನ ಮಾಡುತ್ತೇವೆ. ಇದರ ಬಳಿಕವೂ ಅಗತ್ಯಬಿದ್ದರೆ ಹೊಸ ಕಾನೂನು ಮಾಡುತ್ತೇವೆ ಎಂದು ಹೇಳಿದ್ದಾರೆ.

ಎನ್.ಸಿ.ಸಿ, ಎನ್.ಜಿ.ಒ ಗಳನ್ನು ಬಲಗೊಳಿಸುವುದನ್ನು ಗುರಿಯಾಗಿಸಿಕೊಂಡಿದ್ದೇವೆ. ಪುನರ್ವಸತಿ ಕೇಂದ್ರಗಳನ್ನು ಹೆಚ್ಚಿಸಲು, ಸಮರ್ಪಕಗೊಳಿಸಲು ಕ್ರಮ ತೆಗೆದುಕೊಳ್ಳುತ್ತೇವೆ. ಡ್ರಗ್ಸ್ ಹಾವಳಿ ತೊಡೆದು ಹಾಕಲು ಕ್ಷಿಪ್ರ ಮತ್ತು ತೀಕ್ಷ್ಣ ಕ್ರಮ ಕೈಗೊಳ್ಳುತ್ತೇವೆ. ವಿದ್ಯಾರ್ಥಿ, ಯುವ ಜನರ ಮೇಲೆ, ಕುಟುಂಬಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತಿರುವುದನ್ನು ತಡೆಯಲು ಕ್ರಮ ವಹಿಸಲಾಗುವುದು. ಡ್ರಗ್ಸ್ ಸೇವಿಸಿ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವ ಪ್ರಕರಣಗಳಿಗೆ ಬ್ರೇಕ್ ಹಾಕುತ್ತೇವೆ. ಪೊಲೀಸರಿಗೆ ಪೂರ್ಣ ಸ್ವಾತಂತ್ರ್ಯ ಕೊಡುವ ಜೊತೆಗೆ ಅವರನ್ನೇ ಹೊಣೆ ಮಾಡಿ ಕ್ರಮ ಕೂಡ ತೆಗೆದುಕೊಳ್ಳುತ್ತೇವೆ ಎಂದರು.

BIG NEWS: Home Minister Dr G Parameshwara to set up task force to curb drug menace in the state BIG NEWS: ರಾಜ್ಯದಲ್ಲಿ `ಡ್ರಗ್ಸ್' ಹಾವಳಿ ತಡೆಗೆ ಮಹತ್ವದ ಕ್ರಮ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ
Share. Facebook Twitter LinkedIn WhatsApp Email

Related Posts

ರೈತರಿಗೆ ಭರ್ಜರಿ ಗುಡ್ ನ್ಯೂಸ್: 30 ಸಾವಿರ ರೂ. ಗಡಿ ದಾಟಿದ ಕೊಬ್ಬರಿ ದರ

30/01/2026 8:24 AM1 Min Read

BREAKING : ಐತಿಹಾಸಿಕ ಲಕ್ಕುಂಡಿಯಲ್ಲಿ ಮುಂದುವರೆದ ಉತ್ಖನನ : ಮೂರು ಹೆಡೆಯ ಘಟಸರ್ಪ ಶಿಲೆ ಪತ್ತೆ.!

30/01/2026 8:07 AM1 Min Read

ರಾಜ್ಯ ಸರ್ಕಾರದಿಂದ `CET’ಟಾಪರ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿಶೇಷ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ

30/01/2026 7:41 AM2 Mins Read
Recent News

ಬಜೆಟ್ ದಿನವೇ ಬೆಲೆ ಏರಿಕೆ ಬಿಸಿ: ಗ್ಯಾಸ್ ಸಿಲಿಂಡರ್ ಬೆಲೆ ಮತ್ತು ತಂಬಾಕು ಉತ್ಪನ್ನಗಳ ದರದಲ್ಲಿ ಬದಲಾವಣೆ!

30/01/2026 8:29 AM

ರೈತರಿಗೆ ಭರ್ಜರಿ ಗುಡ್ ನ್ಯೂಸ್: 30 ಸಾವಿರ ರೂ. ಗಡಿ ದಾಟಿದ ಕೊಬ್ಬರಿ ದರ

30/01/2026 8:24 AM

ಚಾಕೊಲೇಟ್, ಚಿಪ್ಸ್, ತಂಪು ಪಾನೀಯ ಈಗ ಹೆಚ್ಚು ದುಬಾರಿ! ಅತ್ಯಧಿಕ ‘GST ಸ್ಲ್ಯಾಬ್’ನಲ್ಲಿ ‘ಜಂಕ್ ಫುಡ್ಸ್’ ಶಿಫಾರಸು!

30/01/2026 8:16 AM

ವಿಜ್ಞಾನಿಗಳ ಅದ್ಭುತ ಸಾಧನೆ ; ಸೈನಿಕರಿಗೆ ಹೃದಯಾಘಾತದ ಎಚ್ಚರಿಕೆ ನೀಡುವ ಮೇಡ್-ಇನ್-ಇಂಡಿಯಾ ‘ಚಿಪ್’ ಅಭಿವೃದ್ಧಿ!

30/01/2026 8:14 AM
State News
KARNATAKA

ರೈತರಿಗೆ ಭರ್ಜರಿ ಗುಡ್ ನ್ಯೂಸ್: 30 ಸಾವಿರ ರೂ. ಗಡಿ ದಾಟಿದ ಕೊಬ್ಬರಿ ದರ

By kannadanewsnow5730/01/2026 8:24 AM KARNATAKA 1 Min Read

ತುಮಕೂರು: ತುಮಕೂರು ಜಿಲ್ಲೆಯ ತಿಪಟೂರು ಕೊಬ್ಬರಿ ಮಾರುಕಟ್ಟೆಯಲ್ಲಿ ಉಂಡೆ ಕೊಬ್ಬರಿ ದರ 30 ಸಾವಿರ ರೂ.ಗೆ ಮಾರಾಟವಾಗಿದೆ. ಉಂಡೆ ಕೊಬ್ಬರಿ…

BREAKING : ಐತಿಹಾಸಿಕ ಲಕ್ಕುಂಡಿಯಲ್ಲಿ ಮುಂದುವರೆದ ಉತ್ಖನನ : ಮೂರು ಹೆಡೆಯ ಘಟಸರ್ಪ ಶಿಲೆ ಪತ್ತೆ.!

30/01/2026 8:07 AM

ರಾಜ್ಯ ಸರ್ಕಾರದಿಂದ `CET’ಟಾಪರ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿಶೇಷ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ

30/01/2026 7:41 AM

BIG NEWS : ರಾಜ್ಯ ಸರ್ಕಾರಿ ನೌಕರರು ತಿಂಗಳ ಮೊದಲ ಶನಿವಾರ `ಖಾದಿ ಬಟ್ಟೆ’ ಧರಿಸೋದು ಕಡ್ಡಾಯ : ಸರ್ಕಾರ ಮಹತ್ವದ ಆದೇಶ

30/01/2026 7:03 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.