ಬೆಂಗಳೂರು: ರಾಜ್ಯದ ಒಂದು ವಿಧಾನಪರಿಷತ್ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆ ಮಾಡಲಾಗಿದೆ. ಪ್ರಕಟಿತ ವೇಳಾಪಟ್ಟಿಯಂತೆ ಅಕ್ಟೋಬರ್ 21ರಂದು ಮತದಾನ ನಡೆದು, ಅಂದೇ ಮತ ಏಣಿಕೆಯ ನಂತ್ರ ಫಲಿತಾಂಶ ಪ್ರಕಟವಾಗಲಿದೆ.
ಈ ಸಂಬಂಧ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಉಪ ಚುನಾವಣೆ ನಿಗದಿ ಪಡಿಸಲಾಗಿದೆ. ಕೋಟಾ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾದಂತ ಸ್ಥಾನಕ್ಕೆ ಉಪ ಚುನಾವಣೆ ನಡೆಸುವುದಾಗಿ ತಿಳಿಸಲಾಗಿದೆ.
ಕೋಟಾ ಶ್ರೀನಿವಾಸ ಪೂಜಾರಿಯವರು ಸಂಸದರಾಗಿ ಆಯ್ಕೆಯಾದ ನಂತ್ರ ಅವರು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಒಂದು ಸ್ಥಾನಕ್ಕೆ ಈಗ ಉಪ ಚುನಾವಣೆ ಘೋಷಣೆಯಾಗಿದೆ.
ವಿಧಾನ ಪರಿಷತ್ ಒಂದು ಸ್ಥಾನಕ್ಕೆ ಉಪ ಚುನಾವಣೆಗಾಗಿ ಸೆ.26ರಂದು ಅಧಿಸೂಚನೆ ಹೊರಡಿಸಲಾಗುತ್ತಿದೆ. ಅಕ್ಟೋಬರ್.3 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅಕ್ಟೋಬರ್.4ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್.7 ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನಾಂಕವಾಗಿದೆ.
ಇನ್ನೂ ಅಕ್ಟೋಬರ್.21ರಂದು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಈ ಬಳಿಕ ಅಕ್ಟೋಬರ್.24ರಂದು ಮತಏಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.
ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳಿಗೆ ಶಿಕ್ಷಣ-ಪೋಷಣೆ ಮೂಲಕ ದೇಶ ಕಟ್ಟುವ ಕೆಲಸದಲ್ಲಿ ತೊಡಗಿದ್ದಾರೆ: ನ್ಯಾ.ಸಂತೋಷ್