Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

​’ವಿಕಸಿತ ಭಾರತ @2047′ ಗುರಿಯತ್ತ ಹೆಜ್ಜೆ: ನಾಳೆ ನೀತಿ ಆಯೋಗದ 11ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಪ್ರಧಾನಿ ಮೋದಿ!

12 ವರ್ಷಗಳ ಸಾರ್ಥಕ ಸೇವೆ: ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ ಹೆಚ್.ಡಿ. ಕುಮಾರಸ್ವಾಮಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ಕಸ್ತೂರಿರಂಗನ್ ವರದಿ’ ತಿರಸ್ಕರಿಸಿ : ಸಂಪುಟ ಉಪಸಮಿತಿ ನಿರ್ಧಾರ!
KARNATAKA

BIG NEWS : `ಕಸ್ತೂರಿರಂಗನ್ ವರದಿ’ ತಿರಸ್ಕರಿಸಿ : ಸಂಪುಟ ಉಪಸಮಿತಿ ನಿರ್ಧಾರ!

By kannadanewsnow57

ಬೆಂಗಳೂರು: ಕಸ್ತೂರಿ ರಂಗನ್ ವರದಿಯಿಂದ ಪಶ್ಚಿಮ ಘಟ್ಟ ವ್ಯಾಪ್ತಿಯ ಗ್ರಾಮಗಳ ಜನರಿಗೆ ಹಾನಿಯಾಗದಂತೆ ವರದಿಯನ್ನು ರಾಜ್ಯದ ಪರವಾಗಿ ತಿರಸ್ಕರಿಸಬೇಕು ಎಂಬುದು ಸೇರದಂತೆ ಮೂರು ರೀತಿಯ ಪ್ರಸ್ತಾವನೆಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲು ಶುಕ್ರವಾರ ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.

ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದೆ. ಕಸ್ತೂರಿರಂಗನ್ ವರದಿಯಿಂದ ಸ್ಥಳೀಯ ನಿವಾಸಿಗಳಿಗೆ ತೀವ್ರ ಅನ್ಯಾಯವಾಗುತ್ತದೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ.

ಹೀಗಾಗಿ ರಾಜ್ಯದಿಂದ ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣ ತಿರಸ್ಕರಿಸಬೇಕು. ಇಲ್ಲದಿದ್ದಲ್ಲಿ ರಾಜ್ಯ ವ್ಯಾಪ್ತಿಯ ಪಶ್ಚಿಮಘಟ್ಟ ಅರಣ್ಯ ಪ್ರದೇಶದಲ್ಲಿ 20,668 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸುವಂತೆ ಕೇಂದ್ರ ಸರ್ಕಾರ ಪ್ರಕಟಿಸಿರುವ ಅಧಿಸೂಚನೆ ಬದಲಿಗೆ ಈಗಾಗಲೇ ನಿಗದಿಪಡಿಸಿದ 16,114 ಚದರ ಕಿ. ಮೀ. ಭೂಮಿಯನ್ನು ಮಾತ್ರ ಪರಿಸರ ಸೂಕ್ಷ್ಮ ವಲಯ ಎಂದು ಪರಿಗಣಿಸಬೇಕು ಎಂದು ನಿರ್ಧರಿಸಲಾಗಿದೆ.

ಪರಿಸರ ಸೂಕ್ಷ್ಮ ವಲಯದಲ್ಲಿನ ಗ್ರಾಮಗಳಿಗೆ ವಿಶೇಷ ಪ್ಯಾಕೇಜ್ ಗಾಗಿ ಬೇಡಿಕೆ ಸಲ್ಲಿಸುವಂತೆ ಕೋರಲಾಗುವುದು. ಪರಿಸರ ಸೂಕ್ಷ್ಮ ವಲಯ ಗುರುತಿಸುವ ಸಂಬಂಧ ಈಗಾಗಲೇ ನಿಗದಿ ಮಾಡಲಾದ 16,114 ಚದರ ಕಿ.ಮೀ. ಪ್ರದೇಶವನ್ನು ಮರು ಸರ್ವೇ ನಡೆಸಿ ಆ ಮಿತಿಗೆ ಒಳಪಟ್ಟು ಕಸ್ತೂರಿ ರಂಗನ್ ವರದಿಯನ್ನು ಸಮ್ಮತಿಸಬಹುದು ಎಂದು ಚರ್ಚಿಸಲಾಗಿದೆ.

ಈಗಾಗಲೇ ಕರ್ನಾಟಕ ರಾಜ್ಯ ಸರ್ಕಾರ ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ತನ್ನ ನಿಲುವನ್ನು ಕೇಂದ್ರಕ್ಕೆ ಹಲವು ಬಾರಿ ಸ್ಪಷ್ಟಪಡಿಸಿದೆ. ಮತ್ತೊಮ್ಮೆ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಸಮಾಲೋಚನೆ ನಡೆಸಿ ಕೇಂದ್ರಕ್ಕೆ ಅಭಿಪ್ರಾಯ ತಿಳಿಸಲು ನಿರ್ಧರಿಸಲಾಗಿದೆ.
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಹಿರಿಯ ಸಂಪುಟ ಸಹೋದ್ಯೋಗಿಗಳು, ವಿಧಾನ ಪರಿಷತ್ ಉಪಸಭಾಪತಿ ಶ್ರೀ ಎಂಕೆ ಪ್ರಾಣೇಶ್, ಶಾಸಕರು, ಸಂಸದರು ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

BIG NEWS : `ಕಸ್ತೂರಿರಂಗನ್ ವರದಿ' ತಿರಸ್ಕರಿಸಿ : ಸಂಪುಟ ಉಪಸಮಿತಿ ನಿರ್ಧಾರ! BIG NEWS: Cabinet sub-committee decides to reject 'Kasturirangan report'
Share. Facebook Twitter LinkedIn WhatsApp Email

Related Posts

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

1 Min Read

12 ವರ್ಷಗಳ ಸಾರ್ಥಕ ಸೇವೆ: ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ ಹೆಚ್.ಡಿ. ಕುಮಾರಸ್ವಾಮಿ

1 Min Read

BREAKING : 200 ವೈದ್ಯರ ಖಾಯಂ ನೇರ ನೇಮಕಕ್ಕೆ ಅರೋಗ್ಯ ಇಲಾಖೆ ನಿರ್ಧಾರ : ಸಚಿವ ಯು.ಟಿ ಖಾದರ್

2 Mins Read
Recent News

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

​’ವಿಕಸಿತ ಭಾರತ @2047′ ಗುರಿಯತ್ತ ಹೆಜ್ಜೆ: ನಾಳೆ ನೀತಿ ಆಯೋಗದ 11ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಪ್ರಧಾನಿ ಮೋದಿ!

12 ವರ್ಷಗಳ ಸಾರ್ಥಕ ಸೇವೆ: ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ ಹೆಚ್.ಡಿ. ಕುಮಾರಸ್ವಾಮಿ

​ಏರ್ ಇಂಡಿಯಾ ವಿಮಾನ ದುರಂತ: ತಾಂತ್ರಿಕ ದೋಷವೇ ಕಾರಣ? ಅಂತಿಮ ವರದಿ ಸಲ್ಲಿಕೆಗೂ ಮುನ್ನ ವಕೀಲರಿಂದ ಗಂಭೀರ ಆರೋಪ

State News
KARNATAKA

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ನೀಡುವ ಉದ್ದೇಶದಿಂದ 2026…

12 ವರ್ಷಗಳ ಸಾರ್ಥಕ ಸೇವೆ: ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ ಹೆಚ್.ಡಿ. ಕುಮಾರಸ್ವಾಮಿ

BREAKING : 200 ವೈದ್ಯರ ಖಾಯಂ ನೇರ ನೇಮಕಕ್ಕೆ ಅರೋಗ್ಯ ಇಲಾಖೆ ನಿರ್ಧಾರ : ಸಚಿವ ಯು.ಟಿ ಖಾದರ್

ಜೂ.12ಕ್ಕೆ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಕರಾವಳಿಗೆ ಮೊದಲ ಬಾರಿ ಆಗಮನ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.