ಮಂಡ್ಯ : ನಾಗಮಂಗಲ ಗಲಭೆ ಪ್ರಕರಣ ಸಂಬಂಧ ಬಂಧನ ಭೀತಿಯಿಂದ ಊರು ತೊರೆದಿದ್ದ ಯುವಕನೊಬ್ಬ ಬ್ರೈನ್ ಸ್ಟ್ರೋಕ್ ನಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬದ್ರಿಕೊಪ್ಪಲಿನ ಗ್ರಾಮದ ಕಿರಣ್ ಬ್ರೈನ್ ಸ್ಟ್ರೋಕ್ ನಿಂದ ಸಾವನ್ನಪ್ಪಿದ್ದ ಯುವಕನಾಗಿದ್ದು, ನಾಗಮಂಗಲ ಗಲಭೆನಂತರ ಬದ್ರಿಕೊಪ್ಪಲು ಗ್ರಾಮ ತೊರೆದಿದ್ದ ಕಿರಣ್ ಗೆ ನಿನ್ನೆ ರಾತ್ರಿ ಬ್ರೈನ್ ಸ್ಟ್ರೋಕ್ ಆಗಿದೆ. ಹೀಗಾಗಿ ಕೂಡಲೇ ಅವರನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ಇನ್ನು ನಾಗಮಂಗಲ ಗಲಭೆ ಪ್ರಕರಣ ಸಂಬಂಧ ಕಿರಣ್ ತಂದೆ ಕುಮಾರ್ ಜೈಲಿನಲ್ಲಿದ್ದು, ನಾಗಮಂಗಲ ಗಲಭೆ ಪ್ರಕರಣದಲ್ಲಿ ಎ17 ಆರೋಪಿಯಾಗಿದ್ದು, ಸದ್ಯ ಮಂಡ್ಯದ ಜಿಲ್ಲಾ ಕಾರಾಗೃಹದಲ್ಲಿದ್ದಾರೆ.