ಬೆಂಗಳೂರು : ಬೆಂಗಳೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆಯು ದೆಹಲಿಯ ಶ್ರದ್ಧಾ ಮಾದರಿಯಲ್ಲಿ ನಡೆದಿದ್ದು, ಮಹಿಳೆಯ ದೇಹವನ್ನು ಬರೋಬ್ಬರಿ 50 ತುಂಡುಗಳಾಗಿ ಹಂತಕ ಕತ್ತರಿಸಿ ಫ್ರೀಜ್ ನಲ್ಲಿಟ್ಟಿದ್ದಾನೆ.
ಬೆಂಗಳೂರು ನಗರದ ವೈಯ್ಯಾಲಿ ಕಾವಲ್ ನ ಪೈಪ್ ಲೈನ್ ನ ಮನೆಯೊಂದರಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಮಹಾಲಕ್ಷ್ಮೀ (26) ಎಂಬ ಯುವತಿಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಕಳೆದ 19 ದಿನಗಳ ಹಿಂದೆಯೇ ಆಕೆಯನ್ನು ಹತ್ಯೆ ಮಾಡಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಹಂತಕ ಮಹಿಳೆಯ ದೇಹವನ್ನು ಬರೋಬ್ಬರಿ 50 ಕ್ಕೂ ಹೆಚ್ಚು ತುಂಡುಗಳಾಗಿ ಕತ್ತರಿಸಿ, ಆ ತುಂಡುಗಳನ್ನು ಫ್ರಿಡ್ಜ್ ನಲ್ಲಿ ಇಟ್ಟು ಹೋಗಿದ್ದಾರೆ. ಆಕೆಯ ದೇಹದ ತುಂಡುಗಳಿಂದ ಬಂದ ರಕ್ತ ಫ್ರಿಡ್ಜ್ ನಿಂದ ಸೋರಿಕೆಯಾಗಿ ಮನೆಯ ತುಂಬೆಲ್ಲಾ ಹರಡಿತ್ತು. ಶುಕ್ರವಾರದಂದು ಆಕೆಯಿದ್ದ ಮನೆಯಿಂದ ಕೆಟ್ಟ ವಾಸನೆ ಬರುತ್ತಿತ್ತು. ಬಳಿಕ ಬಾಗಿಲು ತೆರೆದು ನೋಡಿದಾಗ ಮಹಿಳೆಯ ದೇಹ ಫ್ರಿಜ್ ನಲ್ಲಿಟ್ಟಿರುವುದು ಬೆಳಕಿಗೆ ಬಂದಿದೆ.
ತನಿಖೆ ಕೈಗೆತ್ತಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ 8 ತಂಡವನ್ನು ರಚಿಸಿದ್ದು, ವಿವಿಧ ಆಯಾಮಗಳಿಂದ ತನಿಖೆಗೆ ಮುಂದಾಗಿದ್ದಾರೆ.