Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೀದರ್ ನಲ್ಲಿ ಘೋರ ದುರಂತ : ಶಾಲಾ ಬಸ್ ಹರಿದು 6 ವರ್ಷದ ಬಾಲಕಿ ದುರ್ಮರಣ!

06/09/2025 12:15 PM

BREAKING : ಧರ್ಮಸ್ಥಳ ಬುರುಡೆ ಕೇಸ್ : ಶಾಸಕ ಜನಾರ್ಧನ್ ರೆಡ್ಡಿ ವಿರುದ್ಧ ಮಾನನಷ್ಟ ಕೇಸ್ ದಾಖಲಿಸಿದ ಸಂಸದ ಸೆಂಥಿಲ್

06/09/2025 12:13 PM
National flags at Red Fort and Rashtrapati Bhavan fly at half-mast as one-day state mourning is being observed in the country following the demise of Queen Elizabeth II.

BREAKING: ಕೆಂಪು ಕೋಟೆಯಿಂದ 1 ಕೋಟಿ ಮೌಲ್ಯದ ವಜ್ರ ಖಚಿತ ಕಲಶ ಕಳ್ಳತನ

06/09/2025 12:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 1 ವರ್ಷದೊಳಗೆ ತುಂಗಭದ್ರಾ ಜಲಾಶಯಕ್ಕೆ ನೂತನ ‘ಕ್ರಸ್ಟ್ ಗೇಟ್’ಗಳ ಅಳವಡಿಕೆಗೆ ಕ್ರಮ: ಡಿಸಿಎಂ ಡಿಕೆಶಿ
KARNATAKA

1 ವರ್ಷದೊಳಗೆ ತುಂಗಭದ್ರಾ ಜಲಾಶಯಕ್ಕೆ ನೂತನ ‘ಕ್ರಸ್ಟ್ ಗೇಟ್’ಗಳ ಅಳವಡಿಕೆಗೆ ಕ್ರಮ: ಡಿಸಿಎಂ ಡಿಕೆಶಿ

By kannadanewsnow0922/09/2024 6:36 PM

ಹೊಸಪೇಟೆ/ ಮುನಿರಾಬಾದ್ : “ತುಂಗಭದ್ರಾ ಜಲಾಶಯಕ್ಕೆ ನೂತನ ಕ್ರೆಸ್ಟ್ ಗೇಟ್ ಗಳನ್ನು ಒಂದು ವರ್ಷದೊಳಗೆ ಅಳವಡಿಸಲಾಗುವುದು” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.

ತುಂಗಭದ್ರಾ ಜಲಾಶಯ ಬಾಗಿನ ಸಮರ್ಪಣೆ ನಂತರ ಮುನಿರಾಬಾದ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ಆಂಧ್ರಪ್ರದೇಶ, ತೆಲಂಗಾಣ ಮತ್ತು ತುಂಗಭದ್ರಾ ಬೋರ್ಡ್ ಬಳಿ ಚರ್ಚೆ ನಡೆಸಿ ನೂತನ ಗೇಟ್ ಅಳವಡಿಕೆ ಮಾಡಲಾಗುವುದು. ಇದರ ಮೂಲಕ ನಮ್ಮ ರೈತರ ರಕ್ಷಣೆ ಮಾಡಲಾಗುವುದು. ಆಧುನಿಕ ತಂತ್ರಜ್ಞಾನವನ್ನು ಅಳವಡಿಸಲಾಗುವುದು” ಎಂದು ಹೇಳಿದರು.

ಆಗಸ್ಟ್ 10 ನೇ ತಾರೀಕಿನಂದು 19ನೇ ಗೇಟ್ ಕಿತ್ತು ಹೋದಾಗ ಜಿಲ್ಲಾ ಮಂತ್ರಿಗಳು, ಎಂಡಿಯವರು ಕರೆ ಮಾಡಿ ಡ್ಯಾಮ್ ಅಪಾಯದಲ್ಲಿದೆ ಎಂದು ಪರಿಸ್ಥಿತಿಯ ಬಗ್ಗೆ ತಿಳಿಸಿದರು. ನಾನು ಆತಂಕ ಪಡಬೇಡಿ ಎಂದು ಹೇಳಿ ಮಾರನೇ ದಿನವೇ ಸ್ಥಳಕ್ಕೆ ಭೇಟಿ ನೀಡಿದೆ. ಅಧಿಕಾರಿಗಳು ಹಾಗೂ ತಾಂತ್ರಿಕ ಪರಿಣಿತರ ಹತ್ತಿರ ಮಾತನಾಡಿ ಎಲ್ಲಾ ಗೇಟ್ ಗಳಿಂದ ನೀರನ್ನು ಹರಿಸಿ ಎಂದು ಹೇಳಿ ತಕ್ಷಣ ಗೇಟ್ ತಯಾರು ಮಾಡುವ ಸಂಸ್ಥೆಗಳ ಜೊತೆ ಚರ್ಚೆ ನಡೆಸಿ ಗೇಟ್ ತಯಾರಿಗೆ ಆದೇಶ ನೀಡಿದೆ” ಎಂದರು.

“ಡ್ಯಾಮಿನ ಗೇಟ್ ಕಿತ್ತು ಹೋದಂತಹ ಕಷ್ಟಕಾಲದಲ್ಲಿ ನಾವು ಎದೆಗುಂದದೆ ರೈತರ ಜಮೀನಿಗೆ ಮತ್ತೆ ನೀರನ್ನು ಕೊಡುವಂತಹ ಅವಕಾಶ ನನಗೆ ಹಾಗೂ ಸಿದ್ದರಾಮಯ್ಯ ಅವರಿಗೆ ಸಿಕ್ಕಿರುವುದು ನಮ್ಮ ಭಾಗ್ಯ” ಎಂದರು.

ಕನ್ನಯ್ಯ ಅವರನ್ನು ಹೊಗಳಿದ ಡಿಸಿಎಂ

“ಕಷ್ಟಕಾಲದಲ್ಲಿ ಕನ್ನಯ್ಯ ನಾಯ್ಡು ಅವರು ನಮ್ಮ ಜೊತೆ ನಿಂತು, 20 ಟಿಎಂಸಿಯಷ್ಟು ನೀರು ಉಳಿಸಿದರು. 9 ಲಕ್ಷ ಎಕರೆಗೆ ಬೆಳೆ ಹಾಗೂ ನಮ್ಮ ರೈತರನ್ನು ಉಳಿಸಿದ ಹಿರಿಯ ಜೀವ” ಎಂದು ಹೇಳಿದರು.

“ನಾರಾಯಣ ಇಂಜಿನಿಯರಿಂಗ್, ಜಿಂದಾಲ್ ಹಾಗೂ ಹಿಂದೂಸ್ತಾನ್ ಇಂಜಿನಿಯರಿಂಗ್ ಅವರು ಕನ್ನಯ್ಯ ನಾಯ್ಡು ಅವರ ನೇತೃತ್ವದಲ್ಲಿ ಬಹು ದೊಡ್ಡ ಕೆಲಸ ಮಾಡಿದ್ದಾರೆ. ಇಲಾಖೆಯ ಅಧಿಕಾರಿಗಳು ಸೇರಿದಂತೆ ಎಲ್ಲರ ಸಹಕಾರದಿಂದ ಇಡೀ ಭಾರತವೇ ತಿರುಗಿ ನೋಡುವಂತಹ ಕೆಲಸವನ್ನು ನಾವು ಮಾಡಿದ್ದೇವೆ. ಗೇಟ್ ಕಿತ್ತು ಹೋದಾಗ ಆಂಧ್ರ, ತೆಲಂಗಾಣದ ರೈತರು ಆತಂಕದಲ್ಲಿದ್ದರು. ಎಲ್ಲರ ಭಯವನ್ನು ನಾವು ಗೇಟ್ ಮರು ಜೋಡಿಸುವುದರ ಮೂಲಕ ದೂರ ಮಾಡಿದ್ದೇವೆ” ಎಂದರು.

ನವಲಿ ಆಣೆಕಟ್ಟು ನಿರ್ಮಾಣಕ್ಕೆ ಶೀಘ್ರ ಕ್ರಮ

“ನಾವು ಉದ್ಘಾಟನೆ ವೇಳೆ ಗಿಡಕ್ಕೆ ನೀರು ಹಾಕಿದೆವು. ಇದು ರಾಜ್ಯದ ಜನರ ಹಾಗೂ ರೈತರ ಬದುಕನ್ನು ಹಸನು ಮಾಡಲು ಹಾಕಿದ ನೀರು. ನಮ್ಮ ಕರ್ನಾಟಕದ ಪಾಲಿನ ನೀರನ್ನು ಉಳಿಸಿಕೊಳ್ಳಲು ನಾವು ಹೋರಾಡುತ್ತೇವೆ. ನವಲಿಯಲ್ಲಿ ಸಮತೋಲಿತ ಅಣೆಕಟ್ಟು ನಿರ್ಮಾಣಕ್ಕೆ ನಾವು ಮುಂದಾಗುತ್ತೇವೆ. ಈ ಅಣೆಕಟ್ಟು ನಿರ್ಮಾಣಕ್ಕೆ ಈಗಾಗಲೇ ಡಿಪಿಆರ್ ತಯಾರಿಸಿದ್ದೇವೆ. ಸುಮಾರು ಹದಿನೈದು ಸಾವಿರ ಎಕರೆ ಭೂಮಿ ಇದಕ್ಕೆ ಬೇಕಾಗಿದೆ. ಈ ಕುರಿತು ನೆರೆಯ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರನ್ನು ಶೀಘ್ರದಲ್ಲೇ ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ” ಎಂದು ಹೇಳಿದರು.

“ತುಂಗಭದ್ರಾ ಅಣೆಕಟ್ಟಿನಲ್ಲಿ ಹೂಳು ತುಂಬಿಕೊಂಡ ಕಾರಣಕ್ಕೆ ಸುಮಾರು 33 ಟಿಎಂಸಿಯಷ್ಟು ನಮ್ಮ ಪಾಲಿನ ನೀರು ಸಿಗುತ್ತಿಲ್ಲ. ಇದಕ್ಕೆಲ್ಲ ಪರಿಹಾರ ನವಲಿ ಅಣೆಕಟ್ಟು. ನಿರ್ಮಾಣಕ್ಕೆ ನೆರೆಯ ರಾಜ್ಯಗಳ ಸಹಕಾರವನ್ನು ಕೇಳಲಾಗುವುದು” ಎಂದು ತಿಳಿಸಿದರು.

ಗಂಗಾ ಸ್ನಾನ, ತುಂಗಾ ಪಾನ ಎನ್ನುವ ಮಾತಿದೆ. ಅಂದರೆ ತುಂಗಾ ನೀರು ಕುಡಿಯಲು ಅಷ್ಟು ಪವಿತ್ರವಾದುದು. ಶೃಂಗೇರಿಯ ಶಾರದಾಂಬೆಯ ಪಾದ ಮುಟ್ಟಿ ಹರಿಯು ತುಂಗಾ ನದಿ ನಮ್ಮನ್ನು ಕಾಪಾಡಿದ್ದಾಳೆ. ಹಂಪಿಯ ವಿರೂಪಾಕ್ಷನ ಆಶೀರ್ವಾದದಿಂದ ಪ್ರಕೃತಿ ಮಾತೆಯ ಆಶೀರ್ವಾದದಿಂದ ಮತ್ತೆ ಅಣೆಕಟ್ಟು ತುಂಬಿದೆ” ಎಂದರು.

“ತುಂಗಭದ್ರಾ ಅಣೆಕಟ್ಟು ಕಾಂಗ್ರೆಸ್ ಪಕ್ಷದ ಕೊಡುಗೆ. ಈ ಇತಿಹಾಸವನ್ನು ಯಾರಿಂದಲೂ ತಿರುಚಲು ಸಾಧ್ಯವಿಲ್ಲ. ಆಧುನಿಕ ಭಾರತದ ದೇವಾಲಯಗಳು ಆಣೆಕಟ್ಟುಗಳು ಎಂದು ನೆಹರು ಅವರು ಹೇಳಿದ್ದರು. ರೈತರನ್ನು ಕಾಪಾಡುವುದೇ ಅಣೆಕಟ್ಟುಗಳು” ಎಂದು ಹೇಳಿದರು.

“ನಾನು ಈ ಹಿಂದೆ ತುಂಗಾ ಆರತಿ ಆರಂಭ ಮಾಡಿದ್ದೆ. ಈಗ ಕಾವೇರಿ ಆರತಿಗೆ ತೀರ್ಮಾನ ಮಾಡಿದ್ದೇವೆ. ಅದಕ್ಕೆ ಒಂದು ತಂಡವನ್ನು ರಚನೆ ಮಾಡಲಾಗಿದೆ. ಈಗಾಗಲೇ ಹರಿದ್ವಾರಾ, ಕಾಶಿ ಸೇರಿದಂತೆ ಇತರೇ ಕಡೆ ಅಧ್ಯಯನ ಮಾಡುತ್ತಿದೆ” ಎಂದು ಹೇಳಿದರು.

ಟೀಕೆಗಳು ಸತ್ತಿವೆ, ಕೆಲಸಗಳು ಉಳಿದಿವೆ

“ಗೇಟ್ ಕಿತ್ತು ಹೋದಾಗ ವಿರೋಧ ಪಕ್ಷಗಳು ಟೀಕೆ ಮಾಡಿದವು. ನಾನು ಹಾಗೂ ಸಿದ್ದರಾಮಯ್ಯ ಅವರು ವಿರೋಧಿಗಳ ಟೀಕೆಗಳಿಗೆ ಎದೆಗುಂದಲಿಲ್ಲ. ಸರ್ಕಾರದ ಸಚಿವರ ಹಾಗೂ ಶಾಸಕರ ಬೆಂಬಲದಿಂದ, ನಾವು ಮಾಡಿದ ಕೆಲಸದಿಂದ ಟೀಕೆಗಳು ಸತ್ತಿವೆ, ಕೆಲಸಗಳು ಉಳಿದಿವೆ” ಎಂದರು.

“ಜನ ಬದಲಾವಣೆ ಆಗಬಹುದು, ಜಗತ್ತು ಬದಲಾವಣೆ ಆಗಬಹುದು ಆದರೆ ನಾವು ಮಾಡಿರುವ ಸಾಧನೆಗಳು ಎಂದಿಗೂ ಶಾಶ್ವತ. ಆಣೆಕಟ್ಟು ಉಳಿಸಲು ಹಗಲು, ರಾತ್ರಿ ಕಷ್ಟಪಟ್ಟ ಕಾರ್ಮಿಕರ ಶ್ರಮದಲ್ಲಿ ನಾವು ಯಶಸ್ಸನ್ನು ಕಾಣುತ್ತಿದ್ದೇವೆ” ಎಂದು ಹೇಳಿದರು.

“ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಎಂಬುದಕ್ಕೆ ನಿಮ್ಮ ಕಣ್ಣುಗಳೇ ಸಾಕ್ಷಿ. ಗ್ಯಾರಂಟಿ ಯೋಜನೆಗ ಮೂಲಕ ನಾಡಿನ ಪ್ರತಿಯೊಂದು ಕುಟುಂಬವು ಸಮೃದ್ಧಿಯಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಕಾಂಗ್ರೆಸ್ ಸರ್ಕಾರ ಚಿರಋಣಿಯಾಗಿರುತ್ತದೆ. ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ನಮ್ಮ ಕೈ ಹಿಡಿದಿದ್ದೀರಿ. ಇದಕ್ಕಾಗಿ ನಿಮ್ಮ ಋಣ ತೀರಿಸುವ ಕೆಲಸ ಮಾಡುತ್ತೇವೆ” ಎಂದರು.

“ಯಾವುದೇ ಕಾರಣಕ್ಕೂ ನಮ್ಮ ಕಾಂಗ್ರೆಸ್ ಸರ್ಕಾರ ಬೀಳಿಸಲು ಸಾಧ್ಯವಿಲ್ಲ. ಮುಂದೆ 10 ವರ್ಷಗಳ ಕಾಲ ನಾವೇ ಬಾಗಿನ ಅರ್ಪಿಸುತ್ತೇವೆ. ಈ ವರ್ಷ ಉತ್ತಮ ಮಳೆ ಬಂದು ನಾನು ಮತ್ತು ಸಿದ್ದರಾಮಯ್ಯ ಅವರು ಪ್ರಮುಖ ನಾಲ್ಕು ಅಣೆಕಟ್ಟುಗಳಿಗೆ ಬಾಗಿನ ಅರ್ಪಿಸಿದ್ದೇವೆ. ನಮ್ಮ ಮೇಲೆ ನಿಮಗೆ ವಿಶ್ವಾಸವಿರಲಿ” ಎಂದು ಹೇಳಿದರು.

2,500 ಕಿ.ಮೀ ಉದ್ದದ ‘ಮಾನವ ಸರಪಳಿ’ ರಚಿಸಿ ಹೊಸ ‘ವಿಶ್ವದಾಖಲೆ’ ಬರೆದ ‘ಕರ್ನಾಟಕ ಸರ್ಕಾರ’

BIG UPDATE: ಬೆಂಗಳೂರಲ್ಲಿ BBMP ನಿರ್ಲಕ್ಷ್ಯಕ್ಕೆ ಮಹಾ ದುರಂತ: ಮೈದಾನದ ಗೇಟ್ ಬಿದ್ದು 10 ವರ್ಷದ ಬಾಲಕ ಸಾವು

ಇರಾನ್ ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ: 30 ಕಾರ್ಮಿಕರು ಸಾವು, ಹಲವರಿಗೆ ಗಾಯ | Iran coal mine blast

Share. Facebook Twitter LinkedIn WhatsApp Email

Related Posts

BREAKING : ಬೀದರ್ ನಲ್ಲಿ ಘೋರ ದುರಂತ : ಶಾಲಾ ಬಸ್ ಹರಿದು 6 ವರ್ಷದ ಬಾಲಕಿ ದುರ್ಮರಣ!

06/09/2025 12:15 PM1 Min Read

BREAKING : ಧರ್ಮಸ್ಥಳ ಬುರುಡೆ ಕೇಸ್ : ಶಾಸಕ ಜನಾರ್ಧನ್ ರೆಡ್ಡಿ ವಿರುದ್ಧ ಮಾನನಷ್ಟ ಕೇಸ್ ದಾಖಲಿಸಿದ ಸಂಸದ ಸೆಂಥಿಲ್

06/09/2025 12:13 PM1 Min Read
high court

ಮರು ತನಿಖೆ, ಹೊಸದಾಗಿ ತನಿಖೆಗೆ ಆದೇಶಿಸುವ ಅಧಿಕಾರ ಹೈಕೋರ್ಟ್, ಸುಪ್ರೀಂಕೋರ್ಟ್​ಗೆ ಮಾತ್ರ ಇದೆ : ಹೈಕೋರ್ಟ್

06/09/2025 11:55 AM1 Min Read
Recent News

BREAKING : ಬೀದರ್ ನಲ್ಲಿ ಘೋರ ದುರಂತ : ಶಾಲಾ ಬಸ್ ಹರಿದು 6 ವರ್ಷದ ಬಾಲಕಿ ದುರ್ಮರಣ!

06/09/2025 12:15 PM

BREAKING : ಧರ್ಮಸ್ಥಳ ಬುರುಡೆ ಕೇಸ್ : ಶಾಸಕ ಜನಾರ್ಧನ್ ರೆಡ್ಡಿ ವಿರುದ್ಧ ಮಾನನಷ್ಟ ಕೇಸ್ ದಾಖಲಿಸಿದ ಸಂಸದ ಸೆಂಥಿಲ್

06/09/2025 12:13 PM
National flags at Red Fort and Rashtrapati Bhavan fly at half-mast as one-day state mourning is being observed in the country following the demise of Queen Elizabeth II.

BREAKING: ಕೆಂಪು ಕೋಟೆಯಿಂದ 1 ಕೋಟಿ ಮೌಲ್ಯದ ವಜ್ರ ಖಚಿತ ಕಲಶ ಕಳ್ಳತನ

06/09/2025 12:00 PM
high court

ಮರು ತನಿಖೆ, ಹೊಸದಾಗಿ ತನಿಖೆಗೆ ಆದೇಶಿಸುವ ಅಧಿಕಾರ ಹೈಕೋರ್ಟ್, ಸುಪ್ರೀಂಕೋರ್ಟ್​ಗೆ ಮಾತ್ರ ಇದೆ : ಹೈಕೋರ್ಟ್

06/09/2025 11:55 AM
State News
KARNATAKA

BREAKING : ಬೀದರ್ ನಲ್ಲಿ ಘೋರ ದುರಂತ : ಶಾಲಾ ಬಸ್ ಹರಿದು 6 ವರ್ಷದ ಬಾಲಕಿ ದುರ್ಮರಣ!

By kannadanewsnow0506/09/2025 12:15 PM KARNATAKA 1 Min Read

ಬೀದರ್ : ಖಾಸಗಿ ಶಾಲಾ ಬಸ್ ಹರಿದು ಯುಕೆಜಿ ಓದುತ್ತಿದ್ದ 6 ವರ್ಷದ ಬಾಲಕಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೀದರ್…

BREAKING : ಧರ್ಮಸ್ಥಳ ಬುರುಡೆ ಕೇಸ್ : ಶಾಸಕ ಜನಾರ್ಧನ್ ರೆಡ್ಡಿ ವಿರುದ್ಧ ಮಾನನಷ್ಟ ಕೇಸ್ ದಾಖಲಿಸಿದ ಸಂಸದ ಸೆಂಥಿಲ್

06/09/2025 12:13 PM
high court

ಮರು ತನಿಖೆ, ಹೊಸದಾಗಿ ತನಿಖೆಗೆ ಆದೇಶಿಸುವ ಅಧಿಕಾರ ಹೈಕೋರ್ಟ್, ಸುಪ್ರೀಂಕೋರ್ಟ್​ಗೆ ಮಾತ್ರ ಇದೆ : ಹೈಕೋರ್ಟ್

06/09/2025 11:55 AM

BREAKING : ‘BMTC’ ಗೆ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ : 4500 ಹೊಸ ಬಸ್ ಒದಗಿಸಲು ಗ್ರೀನ್ ಸಿಗ್ನಲ್!

06/09/2025 11:49 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.