Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಕಪಿಲ್ ಶರ್ಮಾ ಕೆನಡಾ ಕೆಫೆಯಲ್ಲಿ ಗುಂಡಿನ ದಾಳಿ ಪ್ರಕರಣ: ದೆಹಲಿಯಲ್ಲಿ ವ್ಯಕ್ತಿ ಬಂಧನ

28/11/2025 12:16 PM

BREAKING : ಉಡುಪಿಯಲ್ಲಿ `ಕನಕನ ಕಿಂಡಿ’ ಮೂಲಕ ಶ್ರೀಕೃಷ್ಣನ ದರ್ಶನ ಪಡೆದ ಪ್ರಧಾನಿ ಮೋದಿ

28/11/2025 12:15 PM

GOOD NEWS : ಬೆಂಗಳೂರಲ್ಲಿ ನೀರಿನ ಬಿಲ್ ಕಟ್ಟದೇ ಬಾಕಿ ಉಳಿಸಿಕೊಂಡ ಗ್ರಾಹಕರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

28/11/2025 12:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ವಿಧಾನಸಭಾ ಸದಸ್ಯತ್ವದಿಂದ ಮುನಿರತ್ನ ಅಮಾನತ್ತಿಗೆ ಸಭಾಧ್ಯಕ್ಷರಿಗೆ ಸಚಿವ ಎಚ್.ಕೆ ಪಾಟೀಲ್ ಪತ್ರದಲ್ಲಿ ಆಗ್ರಹ
KARNATAKA

BREAKING: ವಿಧಾನಸಭಾ ಸದಸ್ಯತ್ವದಿಂದ ಮುನಿರತ್ನ ಅಮಾನತ್ತಿಗೆ ಸಭಾಧ್ಯಕ್ಷರಿಗೆ ಸಚಿವ ಎಚ್.ಕೆ ಪಾಟೀಲ್ ಪತ್ರದಲ್ಲಿ ಆಗ್ರಹ

By kannadanewsnow0923/09/2024 7:47 PM

ಬೆಂಗಳೂರು: ವಿಧಾನಸಭೆ ಸದಸ್ಯತ್ವದಿಂದ ಕೆ.ಮುನಿರತ್ನ ರವರನ್ನು ಅಮಾನತುಗೊಳಿಸಬೇಕೆಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಶ್ರೀ ಎಚ್.ಕೆ ಪಾಟೀಲ ರವರು ವಿಧಾನಸಭಾಧ್ಯಕ್ಷರಾದ ಸನ್ಮಾನ್ಯ ಯು.ಟಿ.ಖಾದರ ಅವರಿಗೆ ಪತ್ರ ಬರೆದಿದ್ದಾರೆ.

ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ನೈತಿಕ ಅಧ:ಪತನಕ್ಕೆ ಕಾರಣವಾದ ಅತ್ಯಂತ ಹೇಯವಾದ, ಅಸಭ್ಯವಾದ ಭಾಷೆ ಬಳಸಿ ಕೀಳು ಅಭಿರುಚಿ ಪ್ರದರ್ಶಿಸಿದ ಈ ಘಟನೆ ಕ್ಷಮಾರ್ಹವಲ್ಲ ಎಂದು ಕಾನೂನು ಸಚಿವರು ಅಭಿಪ್ರಾಯಪಟ್ಟಿದ್ದಾರೆ.

ವಿಧಾನಸಭೆಯ ಸದಸ್ಯರಿಗೆ ನೈತಿಕ ಮೌಲ್ಯಗಳ ನಿಯಂತ್ರಣ ಹೇರುವ “ನೀತಿ-ನಿರೂಪಣಾ ಸಮಿತಿ” (Ethics Committee of State Legislature) ಎಂದೆಂದಿಗಿಂತಲೂ ಇಂದು ರಚಿಸಬೇಕಾದ ಅತೀ ಅವಶ್ಯಕತೆ ಇದೆ. ಸದನದ ಒಳಗೆ ಹಾಗೂ ಹೊರಗೆ ಅಸಭ್ಯವಾಗಿ ವರ್ತಿಸುವ ಸದಸ್ಯರ ವರ್ತನೆಯನ್ನು ಮೌಲ್ಯಗಳನ್ನು ಗಾಳಿಗೆ ತೂರುವ ನಡತೆಗಳನ್ನು ನಿಯಂತ್ರಿಸುವ ನಿಯಮಗಳನ್ನು ತಕ್ಷಣ ರಚಿಸಬೇಕು.

ಸಂವಿಧಾನದತ್ತವಾಗಿ ಸಭಾಧ್ಯಕ್ಷರಿಗೆ ಪ್ರದತ್ತವಾಗಿರುವ ಪರಾಮಾಧಿಕಾರವನ್ನು ಚಲಾಯಿಸಿ ವಿಶೇಷ ಅಪರೂಪದ ಕ್ರಮ ಕೈಗೊಳ್ಳುವ ಮೂಲಕ ವಿಧಾನಸಭೆ ಸದಸ್ಯರಾದ ಶ್ರೀ ಕೆ.ಮುನಿರತ್ನ ಅವರನ್ನು ವಿಧಾನಸಭೆಯಿಂದ ಅಮಾನತುಗೊಳಿಸಬೇಕು ಮತ್ತು “ನೀತಿ-ನಿರೂಪಣಾ ಸಮಿತಿ” (Ethics Committee of State Legislature) ರಚನೆ ಮಾಡಿ ಆ ಸಮಿತಿಯ ಮೂಲಕ ಅಸಭ್ಯವಾಗಿ ವರ್ತಿಸುವ ಸದಸ್ಯರ ವಿರುದ್ಧ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲು ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ನಂಬಿಕೆಯುಳ್ಳವರೆಲ್ಲಾ ದಾಪುಗಾಲನ್ನಿಡಬೇಕು. ಯಾವುದೇ ಅಸಭ್ಯ ವರ್ತನೆ ಅಸಂಸದೀಯ ವರ್ತನೆಗೆ ಗಂಭೀರವಾದ ಮತ್ತು ಕಠಿಣ ಕ್ರಮಗಳ ಕುರಿತು ನಿಯಂತ್ರಣ ಮತ್ತು ಕಡಿವಾಣ ಹಾಕಲೇಬೇಕು. ಇಂತಹ ಅಸಭ್ಯ ವರ್ತನೆಗಳಿಗೆ ಶೂನ್ಯ-ಸಹನೆ ಇಡೀ ವಿಧಾನ ಮಂಡಲ ಹೊಂದಬೇಕಾದ ಸಂದರ್ಭ ಹಾಗೂ ಜನಾಪೇಕ್ಷೆ ಸ್ಪಷ್ಟವಾಗಿ ಕಾಣುತ್ತಿದೆ.

ಈ ಘಟನೆಯಿಂದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಮೌಲ್ಯಗಳಿಗೆ, ಸತ್ಸಂಪ್ರದಾಯಗಳಿಗೆ ತೀವ್ರವಾದ ಕೊಡಲಿ ಪೆಟ್ಟು ಬಿದ್ದಿದೆ. ಎಲ್ಲಕ್ಕಿಂತ ಹೆಚ್ಚಾಗಿ ಶಾನಸಭೆಯ ಘನತೆ, ಗೌರವಕ್ಕೆ ತೀವ್ರವಾದ ಧಕ್ಕೆಯುಂಟಾಗಿದೆ. ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ನೈತಿಕ ಅಧ:ಪತನವನ್ನು ನಿಯಂತ್ರಿಸಲು ತೀವ್ರವಾಗಿ ಅತ್ಯಂತ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಸಭಾಧ್ಯಕ್ಷರನ್ನು ಒತ್ತಾಯಿಸಿದ್ದಾರೆ.

ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆ ನಿಯಮಗಳ ಈ ಕೆಳಕಂಡ ನಿಯಮಗಳನ್ವಯ ಕ್ರಮ ಕೈಗೊಳ್ಳಬೇಕೆಂದು ಸಚಿವರು ಒತ್ತಾಯಿಸಿದ್ದಾರೆ.

“196 ಸಮಿತಿಯ ಮುಂದೆ ಹಕ್ಕುಬಾದ್ಯತೆ ಪ್ರಶ್ನೆಯನ್ನು ಕಳುಹಿಸಲು ಅಧ್ಯಕ್ಷರ ಅಧಿಕಾರ: ಈ ನಿಯಮಗಳಲ್ಲಿ ಏನೇ ಹೇಳಿದ್ದರೂ, ಅಧ್ಯಕ್ಷರು ಹಕ್ಕುಬಾದ್ಯತೆಯ ಯಾವುದೇ ಪ್ರಶ್ನೆಯನ್ನು ಪರಿಶೀಲನೆಗಾಗಿ, ತನಿಖೆಗಾಗಿ ಅಥವಾ ವರದಿಗಾಗಿ ಹಕ್ಕುಬಾದ್ಯತೆ ಸಮಿತಿಗೆ ಕಳುಹಿಸಬಹುದು”

ಅದು ಅಲ್ಲದೇ ನಿಯಮ 273(I) ಸಮಿತಿಯಿಂದ ಪ್ರಶ್ನೆಗಳ ಪರಿಶೀಲನೆ: ತನಗೆ ಒಪ್ಪಿಸುವ ಪ್ರತಿಯೊಂದು ವಿಷಯವನ್ನು ಸಮಿತಿಯು ಪರಿಶೀಲಿಸತಕ್ಕದ್ದು ಮತ್ತು ಪ್ರತಿಯೊಂದು ಸಂದರ್ಭದ ಸತ್ಯಾಂಶಗಳನ್ನು ನೋಡಿ, ಹಕ್ಕುಬಾದ್ಯತೆಯ ಉಲ್ಲಂಘನೆಯು ನಡೆದಿದೆಯೇ ಎಂಬುದನ್ನು ನಿರ್ಧರಿಸತಕ್ಕದ್ದು ಮತ್ತು ಉಲ್ಲಂಘನೆಯಾಗಿದ್ದರೇ ಉಲ್ಲಂಘನೆಯ ಸ್ವರೂಪ, ಉಲ್ಲಂಘನೆಗೆ ಅವಕಾಶ ಕೊಟ್ಟಿರುವಂತಹ ಸಂದರ್ಭಗಳು ಇವುಗಳನ್ನು ನಿರ್ಧರಿಸತಕ್ಕುದು ಮತ್ತು ಈ ಸಂದರ್ಭದಲ್ಲಿ ತಾನು ಯುಕ್ತವೆಂದು ತಿಳಿಯುವಂಥ ಶಿಫಾರಸ್ಸುಗಳನ್ನು ಮಾಡತಕ್ಕುದು.

ನಿಯಮ 273 (II) ಸಮಿತಿಯು ಮಾಡಿರುವ ಶಿಫಾರಸ್ಸುಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಅನುಸರಿಸಬೇಕಾದ ಕಾರ್ಯವಿಧಾನವನ್ನು ಸಹ ತನ್ನ ವರದಿಯಲ್ಲಿ ತಿಳಿಸಬಹುದು.

ಮೇಲ್ಕಂಡ ನಿಯಮಗಳಂತೆ ಕ್ರಮ ಕೈಗೊಂಡು ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಸಚಿವರು ಒತ್ತಾಯಿಸಿದ್ದಾರೆ.

BREAKING : ಬೆಂಗಳೂರಲ್ಲಿ ‘CCB’ ಭರ್ಜರಿ ಬೇಟೆ : 1 ಕೋಟಿಗು ಅಧಿಕ ಮೌಲ್ಯದ ‘ಡ್ರಗ್ಸ್’ ಜೊತೆ ದಂಪತಿಗಳು ಅರೆಸ್ಟ್!

ಮೈಸೂರು ದಸರಾ ಮಹೋತ್ಸವ: ಈ ಬಾರಿ 21 ದಿನಗಳ ಕಾಲ ದಸರಾ ವಿದ್ಯುತ್ ದೀಪಾಲಂಕಾರ ಆಯೋಜನೆ | Mysuru Dasara

Share. Facebook Twitter LinkedIn WhatsApp Email

Related Posts

BREAKING : ಉಡುಪಿಯಲ್ಲಿ `ಕನಕನ ಕಿಂಡಿ’ ಮೂಲಕ ಶ್ರೀಕೃಷ್ಣನ ದರ್ಶನ ಪಡೆದ ಪ್ರಧಾನಿ ಮೋದಿ

28/11/2025 12:15 PM1 Min Read

GOOD NEWS : ಬೆಂಗಳೂರಲ್ಲಿ ನೀರಿನ ಬಿಲ್ ಕಟ್ಟದೇ ಬಾಕಿ ಉಳಿಸಿಕೊಂಡ ಗ್ರಾಹಕರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

28/11/2025 12:14 PM1 Min Read

BREAKING : ಉಡುಪಿಯಲ್ಲಿ `ನವಗ್ರಹ ಕಿಂಡಿ’ ಮೂಲಕ ಶ್ರೀಕೃಷ್ಣನ ದರ್ಶನ ಪಡೆದ ಪ್ರಧಾನಿ ಮೋದಿ

28/11/2025 12:07 PM1 Min Read
Recent News

BREAKING: ಕಪಿಲ್ ಶರ್ಮಾ ಕೆನಡಾ ಕೆಫೆಯಲ್ಲಿ ಗುಂಡಿನ ದಾಳಿ ಪ್ರಕರಣ: ದೆಹಲಿಯಲ್ಲಿ ವ್ಯಕ್ತಿ ಬಂಧನ

28/11/2025 12:16 PM

BREAKING : ಉಡುಪಿಯಲ್ಲಿ `ಕನಕನ ಕಿಂಡಿ’ ಮೂಲಕ ಶ್ರೀಕೃಷ್ಣನ ದರ್ಶನ ಪಡೆದ ಪ್ರಧಾನಿ ಮೋದಿ

28/11/2025 12:15 PM

GOOD NEWS : ಬೆಂಗಳೂರಲ್ಲಿ ನೀರಿನ ಬಿಲ್ ಕಟ್ಟದೇ ಬಾಕಿ ಉಳಿಸಿಕೊಂಡ ಗ್ರಾಹಕರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

28/11/2025 12:14 PM

BREAKING : ಉಡುಪಿಯಲ್ಲಿ `ನವಗ್ರಹ ಕಿಂಡಿ’ ಮೂಲಕ ಶ್ರೀಕೃಷ್ಣನ ದರ್ಶನ ಪಡೆದ ಪ್ರಧಾನಿ ಮೋದಿ

28/11/2025 12:07 PM
State News
KARNATAKA

BREAKING : ಉಡುಪಿಯಲ್ಲಿ `ಕನಕನ ಕಿಂಡಿ’ ಮೂಲಕ ಶ್ರೀಕೃಷ್ಣನ ದರ್ಶನ ಪಡೆದ ಪ್ರಧಾನಿ ಮೋದಿ

By kannadanewsnow5728/11/2025 12:15 PM KARNATAKA 1 Min Read

ಉಡುಪಿ : ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಆಯೋಜಿಸಲಾದ ‘ಲಕ್ಷ ಕಂಠ ಗೀತಾ ಪಾರಾಯಣ’ದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಅವರು…

GOOD NEWS : ಬೆಂಗಳೂರಲ್ಲಿ ನೀರಿನ ಬಿಲ್ ಕಟ್ಟದೇ ಬಾಕಿ ಉಳಿಸಿಕೊಂಡ ಗ್ರಾಹಕರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

28/11/2025 12:14 PM

BREAKING : ಉಡುಪಿಯಲ್ಲಿ `ನವಗ್ರಹ ಕಿಂಡಿ’ ಮೂಲಕ ಶ್ರೀಕೃಷ್ಣನ ದರ್ಶನ ಪಡೆದ ಪ್ರಧಾನಿ ಮೋದಿ

28/11/2025 12:07 PM

BREAKING : ಪ್ರಧಾನಿ ಮೋದಿ ಸ್ವಾಗತಿಸಿದ ಅಷ್ಟಮಠದ ಪ್ರಮುಖರು : ಸ್ವರ್ಣಲೇಪಿತ ಕನಕನ ಕಿಂಡಿ ಉದ್ಘಾಟಿಸಿದ ನಮೋ

28/11/2025 12:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.