Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಶ್ವದ ಟಾಪ್ 10 ಅತ್ಯಂತ ದಯಾಳು ದೇಶಗಳ ಪಟ್ಟಿ ಪ್ರಕಟ, ಭಾರೆತ ಯಾವ ಸ್ಥಾನದಲ್ಲಿದೆ ಗೊತ್ತಾ?

16/11/2025 3:26 PM

ಈ ಹಂತ ಅನುಸರಿಸಿ, ಮನೆಯಲ್ಲೇ ‘ಬಕೆಟ್’ನಲ್ಲಿ ‘ಅಣಬೆ’ ಬೆಳೆಯಿರಿ | Mushrooms

16/11/2025 3:23 PM

ವಾಹನಗಳ ‘ಟೈರ್‌’ಗಳು ಯಾಕೆ ‘ಕಪ್ಪು ಬಣ್ಣ’ದಲ್ಲಷ್ಟೇ ಇರ್ತಾವೆ.? | Why Are Tires Black?

16/11/2025 3:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಅಕ್ರಮ ಮರಳು ಸಾಗಾಣಿಕೆ ವಿರುದ್ಧ ಸರ್ಕಾರದಿಂದ ಮಹತ್ವದ ಕ್ರಮ : `ಏಕರೀತಿಯ ನಿಯಮ ಜಾರಿ’!
KARNATAKA

BREAKING : ಅಕ್ರಮ ಮರಳು ಸಾಗಾಣಿಕೆ ವಿರುದ್ಧ ಸರ್ಕಾರದಿಂದ ಮಹತ್ವದ ಕ್ರಮ : `ಏಕರೀತಿಯ ನಿಯಮ ಜಾರಿ’!

By kannadanewsnow5725/09/2024 11:31 AM

ಶಿವಮೊಗ್ಗ : : ಕರ್ನಾಟಕ ವಾರ್ತೆ : ಅಕ್ರಮ ಗಣಿಗಾರಿಕೆ, ಸಾಗಾಣಿಕೆ, ದಾಸ್ತಾನು ಕುರಿತು ಜಿಲ್ಲೆಯಾದ್ಯಂತ ಏಕರೀತಿಯ ನಿಯಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಹೇಳಿದರು.

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈ ನಿಯಮವನ್ನು ಜಾರಿಗೊಳಿಸಲು ಆಯಾ ತಾಲೂಕುಗಳ ತಹಶೀಲ್ದಾರರು ಹಾಗೂ ಸಂಬAಧಿತ ಇಲಾಖೆಗಳ ಅಧಿಕಾರಿಗಳ ಉಪಸ್ಥಿತಿಯಲ್ಲಿ ತಕ್ಷಣದ ಕ್ರಮಗಳನ್ನು ಕೈಗೊಳ್ಳಲು ಸಮಿತಿಯನ್ನು ರಚಿಸಿ, ವರದಿ ಪಡೆದು, ಸಕಾಲಿಕ ಕ್ರಮಗಳನ್ನು ಸೂಚಿಸಲಾಗಿದೆ ಎಂದರು.

ಅಕ್ರಮ ಗಣಿಗಾರಿಕೆ ಹಾಗೂ ಸ್ಥಳೀಯ ವಿರೋಧಗಳ ನಡುವೆಯೂ ಕ್ವಾರಿಗಳನ್ನು ನಡೆಸುತ್ತಿರುವ, ನಿಯಮ ಮೀರಿ ಕ್ವಾರಿಗಳನ್ನು ನಿರ್ವಹಿಸುತ್ತಿರುವವರ ವಿರುದ್ಧ ಕ್ರಮಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಆಯಾ ಇಲಾಖೆಯ ಭೂವಿಜ್ಞಾನಿಗಳು ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸುವಂತೆ ಅವರು ಸಲಹೆ ನೀಡಿದರು.

ಸರ್ಕಾರಿ ಇಲಾಖೆಗಳ ಕಟ್ಟಡ ನಿರ್ಮಾಣ, ಕಾಮಗಾರಿಗಳಿಗಾಗಿ ಮೀಸಲಿರಿಸಲಾದ ಕ್ವಾರಿಗಳಲ್ಲಿ ಬಳಸಲಾದ ಮರಳಿನ ಪ್ರಮಾಣವನ್ನು ಗಮನಿಸುವಂತೆ ಗಣಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಅವರು, ಅಂತಹ ಕ್ವಾರಿಗಳಲ್ಲಿ ಮರಳನ್ನು ಅನ್ಯ ಉದ್ದೇಶಕ್ಕೆ ಬಳಸುತ್ತಿರುವ ಬಗ್ಗೆ ಸಾರ್ವಜನಿಕ ವಲಯದಿಂದ ಸಾಕಷ್ಟು ದೂರುಗಳು ಕೇಳಿ ಬರುತ್ತಿವೆ. ಒಂದು ವೇಳೆ ಅಂತಹ ಪ್ರಮಾಣ ಎಸಗಿರುವುದು ಕಂಡುಬAದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಅನಿವಾರ್ಯವಾಗಲಿದೆ. ಅಲ್ಲದೇ ಗಣಿ ಇಲಾಖೆಯ ಅಧಿಕಾರಿಗಳು ಕ್ವಾರಿ ನಿಗಧಿಪಡಿಸಿದ ಇಲಾಖೆಯ ಅಧಿಕಾರಿಗಳು ಬಳಸಿದ ಮರಳಲಿನ ಪ್ರಮಾಣ ಹಾಗೂ ಸರ್ಕಾರಕ್ಕೆ ಸಲ್ಲಿಸಿದ ರಾಯಧನದ ಮಾಹಿತಿ ಪಡೆದುಕೊಳ್ಳುವಂತೆಯೂ ಜಿಲ್ಲಾಧಿಕಾರಿಗಳು ಸೂಚಿಸಿದರು.

ಈವರೆಗೆ ಸರ್ಕಾರದ ಇಲಾಖೆಗಳಿಗೆ ಕಾಯ್ದಿರಿಸಿದ ಕ್ವಾರಿಗಳಿಂದ ಮರಳನ್ನು ಪಡೆದ ಇಲಾಖೆಗಳ ಅಧಿಕಾರಿಗಳು ಎಂ-ಸ್ಯಾAಡ್ ಬಳಸಿರುವ ಹಾಗೂ ಬಳಸದಿರುವ ಬಗ್ಗೆ ಮಾಹಿತಿ ಪಡೆದುಕೊಳ್ಳುವಂತೆ ಸೂಚಿಸಿದ ಅವರು, ಮುಂದಿನ ದಿನಗಳಲ್ಲಿ ಕೋರಿಕೆಯ ಅರ್ಜಿಗಳನ್ನು ಪರಿಶೀಲಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಅವರು ಸಲಹೆ ನೀಡಿದರು.

ಜಿಲ್ಲೆಯಲ್ಲಿ ಖಾಸಗಿ ಸಂಸ್ಥೆಗಳ ಗುತ್ತಿಗೆದಾರರು ಪಡೆದಿರುವ ಕ್ವಾರಿಗಳಲ್ಲಿ ಬಳಸಿರುವ ಮರಳಿನ ಪ್ರಮಾಣದ ಹಾಗೂ ಸಲ್ಲಿಸಿರುವ ರಾಯಧನದ ಕುರಿತು ಮಾಹಿತಿ ಪಡೆದುಕೊಳ್ಳುವುದಲ್ಲದೇ ಜಿಲ್ಲಾ ಟಾಸ್ಕ್ಫೋರ್ಸ್ನ ಅನುಮತಿಯಿಲ್ಲದೇ ನೆರೆಯ ಜಿಲ್ಲೆಗಳಿಗೆ ಸಾಗಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಸ್ಥಳೀಯ ಸಾರ್ವಜನಿಕರಿಗೆ ಅನಾನುಕೂಲವಾಗದಂತೆ ಅಥವಾ ಕೃತಕ ಅಭಾವ ಸೃಷ್ಠಿಸದಂತೆ ವಿಶೇಷ ಗಮನಹರಿಸುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಗಣಿಗಾರಿಕೆ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸೇರಿದಂತೆ ಅಕ್ರಮ ಗಣಿಗಾರಿಕೆ ಮತ್ತು ಸಾಗಾಣಿಕೆಯಿಂದ ಒಟ್ಟು ರೂ.51.49ಗಳ ದಂಡ ವಸೂಲಿ ಮಾಡಲಾಗಿದೆ. ತೀರ್ಥಹಳ್ಳಿ ತಾಲೂಕು ಮೇಲಿನಕುರುವಳ್ಳಿ ಸರ್ವೇ ನಂ. 75, 38 ಮತ್ತು ಬುಕ್ಲಾಪುರ ಗ್ರಾಮದ ಸರ್ವೇ ನಂ.64ರಲ್ಲಿ ಮರುಕಳಿಸುತ್ತಿರುವ ಕಟ್ಟಡ ಕಲ್ಲಿನ ಅಕ್ರಮ ಗಣಿಗಾರಿಕೆ ಮತ್ತು ಸಾಗಾಣಿಕೆ ಹಾಗೂ ಸಾಗರ ತಾಲೂಕಿನ ಆನಂದಪುರ ಮತ್ತು ತಾಳಗುಪ್ಪ ಹೋಬಳಿ ವ್ಯಾಪ್ತಿಯ ಸರ್ಕಾರಿ ಜಮೀನುಗಳಲ್ಲಿ ಜಂಬಿಟ್ಟಿಗೆ ಅಕ್ರಮ ಗಣಿಗಾರಿಕೆ ಮತ್ತು ಸಾಗಾಣಿಕೆ ಕುರಿತು ಸ್ಥಳೀಯ ತಹಶೀಲ್ದಾರರ ಸಹಕಾರ ಪಡೆದು, ಸ್ಥಳ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೊಳಪಡುವ ಅಬ್ಬಲಗೆರೆ ಗ್ರಾಮ ಹಾಗೂ ಹುಣಸೋಡು ಮತ್ತಿತರ ಸುತ್ತಮುತ್ತಲ ಗ್ರಾಮಗಳ ವಸತಿ ಯೋಜನೆ ಮತ್ತು ಇನ್ನಿತರೆ ಉದ್ದೇಶಗಳಿಗೆ ಭೂಪರಿವರ್ತನೆ ಅಥವಾ ವಿನ್ಯಾಸ ನಕ್ಷೆಗೆ ಅನುಮೋದನೆ ನೀಡದಂತೆ ಸ್ಥಳೀಯ ಜನಪ್ರತಿನಿಧಿಗಳು ಆಕ್ಷೇಪಣೆ ಸಲ್ಲಿಸಿದ್ದು, ಸಂಬAಧಿಸಿದ ಇಲಾಖಾಧಿಕಾರಿಗಳು ಪರಿಶೀಲಿಸಿ ಸೂಕ್ತ ಕೈಗೊಳ್ಳುವಂತೆ ಅವರು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್, ಹಿರಿಯ ಭೂವಿಜ್ಞಾನಿ ಪಿ.ಕೆ.ನಾಯ್ಕ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

BREAKING : ಅಕ್ರಮ ಮರಳು ಸಾಗಾಣಿಕೆ ವಿರುದ್ಧ ಸರ್ಕಾರದಿಂದ ಮಹತ್ವದ ಕ್ರಮ : `ಏಕರೀತಿಯ ನಿಯಮ ಜಾರಿ'! BREAKING: Govt to take major action against illegal sand transportation: 'Uniform rule'
Share. Facebook Twitter LinkedIn WhatsApp Email

Related Posts

ಈ ಹಂತ ಅನುಸರಿಸಿ, ಮನೆಯಲ್ಲೇ ‘ಬಕೆಟ್’ನಲ್ಲಿ ‘ಅಣಬೆ’ ಬೆಳೆಯಿರಿ | Mushrooms

16/11/2025 3:23 PM2 Mins Read

BIG NEWS: ರಾಜ್ಯ ಸಂಪುಟ ಪುನಾರಚನೆಗ ಹೈಕಮಾಂಡ್‌ ಒಪ್ಪಿಗೆ: ಯಾರು ಔಟ್‌? ಯಾರು ಇನ್‌? ಹೀಗಿದೆ ಸಂಭಾವ್ಯ ಪಟ್ಟಿ

16/11/2025 2:51 PM2 Mins Read

SHOCKING : ನಾಯಿಗೆ ಮುದ್ದು ಮಾಡುವ ನೆಪದಲ್ಲಿ, ಯುವತಿಯ ಮೈ-ಕೈ ಮುಟ್ಟಿ ‘ಲೈಂಗಿಕ ಕಿರುಕುಳ’ ನೀಡಿದ ಕಾಮುಕ!

16/11/2025 2:13 PM1 Min Read
Recent News

ವಿಶ್ವದ ಟಾಪ್ 10 ಅತ್ಯಂತ ದಯಾಳು ದೇಶಗಳ ಪಟ್ಟಿ ಪ್ರಕಟ, ಭಾರೆತ ಯಾವ ಸ್ಥಾನದಲ್ಲಿದೆ ಗೊತ್ತಾ?

16/11/2025 3:26 PM

ಈ ಹಂತ ಅನುಸರಿಸಿ, ಮನೆಯಲ್ಲೇ ‘ಬಕೆಟ್’ನಲ್ಲಿ ‘ಅಣಬೆ’ ಬೆಳೆಯಿರಿ | Mushrooms

16/11/2025 3:23 PM

ವಾಹನಗಳ ‘ಟೈರ್‌’ಗಳು ಯಾಕೆ ‘ಕಪ್ಪು ಬಣ್ಣ’ದಲ್ಲಷ್ಟೇ ಇರ್ತಾವೆ.? | Why Are Tires Black?

16/11/2025 3:07 PM

BIG NEWS: ರಾಜ್ಯ ಸಂಪುಟ ಪುನಾರಚನೆಗ ಹೈಕಮಾಂಡ್‌ ಒಪ್ಪಿಗೆ: ಯಾರು ಔಟ್‌? ಯಾರು ಇನ್‌? ಹೀಗಿದೆ ಸಂಭಾವ್ಯ ಪಟ್ಟಿ

16/11/2025 2:51 PM
State News
KARNATAKA

ಈ ಹಂತ ಅನುಸರಿಸಿ, ಮನೆಯಲ್ಲೇ ‘ಬಕೆಟ್’ನಲ್ಲಿ ‘ಅಣಬೆ’ ಬೆಳೆಯಿರಿ | Mushrooms

By kannadanewsnow0916/11/2025 3:23 PM KARNATAKA 2 Mins Read

ಕೆಎನ್ಎನ್ ಡಿಜಿಟಲ್ ಡೆಸ್ಕ್: ಅಣಬೆ ಕೃಷಿಯನ್ನು ಮಾಡುವುದು ಈಗ ಮತ್ತಷ್ಟು ಸುಲಭವಾಗಿದೆ. ಅದಕ್ಕಾಗಿ ಜಮೀನು ಇರಬೇಕು ಎಂದೇನೂ ಇಲ್ಲ. ನಿಮ್ಮ…

BIG NEWS: ರಾಜ್ಯ ಸಂಪುಟ ಪುನಾರಚನೆಗ ಹೈಕಮಾಂಡ್‌ ಒಪ್ಪಿಗೆ: ಯಾರು ಔಟ್‌? ಯಾರು ಇನ್‌? ಹೀಗಿದೆ ಸಂಭಾವ್ಯ ಪಟ್ಟಿ

16/11/2025 2:51 PM

SHOCKING : ನಾಯಿಗೆ ಮುದ್ದು ಮಾಡುವ ನೆಪದಲ್ಲಿ, ಯುವತಿಯ ಮೈ-ಕೈ ಮುಟ್ಟಿ ‘ಲೈಂಗಿಕ ಕಿರುಕುಳ’ ನೀಡಿದ ಕಾಮುಕ!

16/11/2025 2:13 PM

BREAKING : ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಮದ್ದೂರು ಕೃಷಿ ಇಲಾಖೆಯ ಎಸ್ ಡಿ ಎ ಶ್ವೇತಾ ಸಾವು

16/11/2025 2:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.