Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : 80 ವರ್ಷ ಪೂರೈಸಿದ ರಾಜ್ಯ ನಿವೃತ್ತ ಸರ್ಕಾರಿ ನೌಕರರಿಗೆ ಹೆಚ್ಚುವರಿ `ಪಿಂಚಣಿ’ : ಸರ್ಕಾರದಿಂದ ಮಹತ್ವದ ಆದೇಶ.!

06/07/2025 10:00 AM
dhananjaya y.

BREAKING: ಬಂಗಲೆ ಕೂಡಲೇ ತೆರವುಗೊಳಿಸುವಂತೆ ಮಾಜಿ ಸಿಜೆಐ ಚಂದ್ರಚೂಡ್ ಗೆ ಸುಪ್ರೀಂ ಕೋರ್ಟ್ ಸೂಚನೆ

06/07/2025 9:59 AM

Big Updates: ಟೆಕ್ಸಾಸ್ ಪ್ರವಾಹ: ಸಾವಿನ ಸಂಖ್ಯೆ 51ಕ್ಕೆ ಏರಿಕೆ, ತೀವ್ರಗೊಂಡ ಕಾಣೆಯಾದ ಬಾಲಕಿಯರ ಹುಡುಕಾಟ

06/07/2025 9:53 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಕ್ರಮ ಮರಳು ಸಾಗಾಣಿಕೆ ವಿರುದ್ಧ ಸರ್ಕಾರದಿಂದ ಮಹತ್ವದ ಕ್ರಮ : `ಏಕರೀತಿಯ ನಿಯಮ’ ಜಾರಿ!
KARNATAKA

ಅಕ್ರಮ ಮರಳು ಸಾಗಾಣಿಕೆ ವಿರುದ್ಧ ಸರ್ಕಾರದಿಂದ ಮಹತ್ವದ ಕ್ರಮ : `ಏಕರೀತಿಯ ನಿಯಮ’ ಜಾರಿ!

By kannadanewsnow5726/09/2024 6:33 AM

ಶಿವಮೊಗ್ಗ : : ಕರ್ನಾಟಕ ವಾರ್ತೆ : ಅಕ್ರಮ ಗಣಿಗಾರಿಕೆ, ಸಾಗಾಣಿಕೆ, ದಾಸ್ತಾನು ಕುರಿತು ಜಿಲ್ಲೆಯಾದ್ಯಂತ ಏಕರೀತಿಯ ನಿಯಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಹೇಳಿದರು.

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈ ನಿಯಮವನ್ನು ಜಾರಿಗೊಳಿಸಲು ಆಯಾ ತಾಲೂಕುಗಳ ತಹಶೀಲ್ದಾರರು ಹಾಗೂ ಸಂಬAಧಿತ ಇಲಾಖೆಗಳ ಅಧಿಕಾರಿಗಳ ಉಪಸ್ಥಿತಿಯಲ್ಲಿ ತಕ್ಷಣದ ಕ್ರಮಗಳನ್ನು ಕೈಗೊಳ್ಳಲು ಸಮಿತಿಯನ್ನು ರಚಿಸಿ, ವರದಿ ಪಡೆದು, ಸಕಾಲಿಕ ಕ್ರಮಗಳನ್ನು ಸೂಚಿಸಲಾಗಿದೆ ಎಂದರು.

ಅಕ್ರಮ ಗಣಿಗಾರಿಕೆ ಹಾಗೂ ಸ್ಥಳೀಯ ವಿರೋಧಗಳ ನಡುವೆಯೂ ಕ್ವಾರಿಗಳನ್ನು ನಡೆಸುತ್ತಿರುವ, ನಿಯಮ ಮೀರಿ ಕ್ವಾರಿಗಳನ್ನು ನಿರ್ವಹಿಸುತ್ತಿರುವವರ ವಿರುದ್ಧ ಕ್ರಮಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಆಯಾ ಇಲಾಖೆಯ ಭೂವಿಜ್ಞಾನಿಗಳು ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸುವಂತೆ ಅವರು ಸಲಹೆ ನೀಡಿದರು.

ಸರ್ಕಾರಿ ಇಲಾಖೆಗಳ ಕಟ್ಟಡ ನಿರ್ಮಾಣ, ಕಾಮಗಾರಿಗಳಿಗಾಗಿ ಮೀಸಲಿರಿಸಲಾದ ಕ್ವಾರಿಗಳಲ್ಲಿ ಬಳಸಲಾದ ಮರಳಿನ ಪ್ರಮಾಣವನ್ನು ಗಮನಿಸುವಂತೆ ಗಣಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಅವರು, ಅಂತಹ ಕ್ವಾರಿಗಳಲ್ಲಿ ಮರಳನ್ನು ಅನ್ಯ ಉದ್ದೇಶಕ್ಕೆ ಬಳಸುತ್ತಿರುವ ಬಗ್ಗೆ ಸಾರ್ವಜನಿಕ ವಲಯದಿಂದ ಸಾಕಷ್ಟು ದೂರುಗಳು ಕೇಳಿ ಬರುತ್ತಿವೆ. ಒಂದು ವೇಳೆ ಅಂತಹ ಪ್ರಮಾಣ ಎಸಗಿರುವುದು ಕಂಡುಬAದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಅನಿವಾರ್ಯವಾಗಲಿದೆ. ಅಲ್ಲದೇ ಗಣಿ ಇಲಾಖೆಯ ಅಧಿಕಾರಿಗಳು ಕ್ವಾರಿ ನಿಗಧಿಪಡಿಸಿದ ಇಲಾಖೆಯ ಅಧಿಕಾರಿಗಳು ಬಳಸಿದ ಮರಳಲಿನ ಪ್ರಮಾಣ ಹಾಗೂ ಸರ್ಕಾರಕ್ಕೆ ಸಲ್ಲಿಸಿದ ರಾಯಧನದ ಮಾಹಿತಿ ಪಡೆದುಕೊಳ್ಳುವಂತೆಯೂ ಜಿಲ್ಲಾಧಿಕಾರಿಗಳು ಸೂಚಿಸಿದರು.

ಈವರೆಗೆ ಸರ್ಕಾರದ ಇಲಾಖೆಗಳಿಗೆ ಕಾಯ್ದಿರಿಸಿದ ಕ್ವಾರಿಗಳಿಂದ ಮರಳನ್ನು ಪಡೆದ ಇಲಾಖೆಗಳ ಅಧಿಕಾರಿಗಳು ಎಂ-ಸ್ಯಾAಡ್ ಬಳಸಿರುವ ಹಾಗೂ ಬಳಸದಿರುವ ಬಗ್ಗೆ ಮಾಹಿತಿ ಪಡೆದುಕೊಳ್ಳುವಂತೆ ಸೂಚಿಸಿದ ಅವರು, ಮುಂದಿನ ದಿನಗಳಲ್ಲಿ ಕೋರಿಕೆಯ ಅರ್ಜಿಗಳನ್ನು ಪರಿಶೀಲಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಅವರು ಸಲಹೆ ನೀಡಿದರು.

ಜಿಲ್ಲೆಯಲ್ಲಿ ಖಾಸಗಿ ಸಂಸ್ಥೆಗಳ ಗುತ್ತಿಗೆದಾರರು ಪಡೆದಿರುವ ಕ್ವಾರಿಗಳಲ್ಲಿ ಬಳಸಿರುವ ಮರಳಿನ ಪ್ರಮಾಣದ ಹಾಗೂ ಸಲ್ಲಿಸಿರುವ ರಾಯಧನದ ಕುರಿತು ಮಾಹಿತಿ ಪಡೆದುಕೊಳ್ಳುವುದಲ್ಲದೇ ಜಿಲ್ಲಾ ಟಾಸ್ಕ್ಫೋರ್ಸ್ನ ಅನುಮತಿಯಿಲ್ಲದೇ ನೆರೆಯ ಜಿಲ್ಲೆಗಳಿಗೆ ಸಾಗಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಸ್ಥಳೀಯ ಸಾರ್ವಜನಿಕರಿಗೆ ಅನಾನುಕೂಲವಾಗದಂತೆ ಅಥವಾ ಕೃತಕ ಅಭಾವ ಸೃಷ್ಠಿಸದಂತೆ ವಿಶೇಷ ಗಮನಹರಿಸುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಗಣಿಗಾರಿಕೆ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸೇರಿದಂತೆ ಅಕ್ರಮ ಗಣಿಗಾರಿಕೆ ಮತ್ತು ಸಾಗಾಣಿಕೆಯಿಂದ ಒಟ್ಟು ರೂ.51.49ಗಳ ದಂಡ ವಸೂಲಿ ಮಾಡಲಾಗಿದೆ. ತೀರ್ಥಹಳ್ಳಿ ತಾಲೂಕು ಮೇಲಿನಕುರುವಳ್ಳಿ ಸರ್ವೇ ನಂ. 75, 38 ಮತ್ತು ಬುಕ್ಲಾಪುರ ಗ್ರಾಮದ ಸರ್ವೇ ನಂ.64ರಲ್ಲಿ ಮರುಕಳಿಸುತ್ತಿರುವ ಕಟ್ಟಡ ಕಲ್ಲಿನ ಅಕ್ರಮ ಗಣಿಗಾರಿಕೆ ಮತ್ತು ಸಾಗಾಣಿಕೆ ಹಾಗೂ ಸಾಗರ ತಾಲೂಕಿನ ಆನಂದಪುರ ಮತ್ತು ತಾಳಗುಪ್ಪ ಹೋಬಳಿ ವ್ಯಾಪ್ತಿಯ ಸರ್ಕಾರಿ ಜಮೀನುಗಳಲ್ಲಿ ಜಂಬಿಟ್ಟಿಗೆ ಅಕ್ರಮ ಗಣಿಗಾರಿಕೆ ಮತ್ತು ಸಾಗಾಣಿಕೆ ಕುರಿತು ಸ್ಥಳೀಯ ತಹಶೀಲ್ದಾರರ ಸಹಕಾರ ಪಡೆದು, ಸ್ಥಳ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೊಳಪಡುವ ಅಬ್ಬಲಗೆರೆ ಗ್ರಾಮ ಹಾಗೂ ಹುಣಸೋಡು ಮತ್ತಿತರ ಸುತ್ತಮುತ್ತಲ ಗ್ರಾಮಗಳ ವಸತಿ ಯೋಜನೆ ಮತ್ತು ಇನ್ನಿತರೆ ಉದ್ದೇಶಗಳಿಗೆ ಭೂಪರಿವರ್ತನೆ ಅಥವಾ ವಿನ್ಯಾಸ ನಕ್ಷೆಗೆ ಅನುಮೋದನೆ ನೀಡದಂತೆ ಸ್ಥಳೀಯ ಜನಪ್ರತಿನಿಧಿಗಳು ಆಕ್ಷೇಪಣೆ ಸಲ್ಲಿಸಿದ್ದು, ಸಂಬAಧಿಸಿದ ಇಲಾಖಾಧಿಕಾರಿಗಳು ಪರಿಶೀಲಿಸಿ ಸೂಕ್ತ ಕೈಗೊಳ್ಳುವಂತೆ ಅವರು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್, ಹಿರಿಯ ಭೂವಿಜ್ಞಾನಿ ಪಿ.ಕೆ.ನಾಯ್ಕ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Govt to take major action against illegal sand mining: 'Uniform rule' ಅಕ್ರಮ ಮರಳು ಸಾಗಾಣಿಕೆ ವಿರುದ್ಧ ಸರ್ಕಾರದಿಂದ ಮಹತ್ವದ ಕ್ರಮ : `ಏಕರೀತಿಯ ನಿಯಮ' ಜಾರಿ!
Share. Facebook Twitter LinkedIn WhatsApp Email

Related Posts

GOOD NEWS : 80 ವರ್ಷ ಪೂರೈಸಿದ ರಾಜ್ಯ ನಿವೃತ್ತ ಸರ್ಕಾರಿ ನೌಕರರಿಗೆ ಹೆಚ್ಚುವರಿ `ಪಿಂಚಣಿ’ : ಸರ್ಕಾರದಿಂದ ಮಹತ್ವದ ಆದೇಶ.!

06/07/2025 10:00 AM2 Mins Read

ಧನುಸ್ಸು ರಾಶಿಯವರಿಗೆ ಈ ಒಂದು ತಾಂತ್ರಿಕ ಅನುಷ್ಠಾನ ಮಾಡಿ ನೋಡಿ ಜೀವನ ಅದೃಷ್ಟದ ರೀತಿಯಲ್ಲಿ ಬದಲಾವಣೆಯಾಗುತ್ತದೆ

06/07/2025 9:46 AM1 Min Read

SHOCKING : ರಾಯಚೂರಿನಲ್ಲಿ ಘೋರ ದುರಂತ : ಮೊಹರಂ ವೇಳೆ ಬೆಂಕಿಯಲ್ಲಿ ಬಿದ್ದು ವ್ಯಕ್ತಿಗೆ ಗಂಭೀರ ಗಾಯ.!

06/07/2025 9:34 AM1 Min Read
Recent News

GOOD NEWS : 80 ವರ್ಷ ಪೂರೈಸಿದ ರಾಜ್ಯ ನಿವೃತ್ತ ಸರ್ಕಾರಿ ನೌಕರರಿಗೆ ಹೆಚ್ಚುವರಿ `ಪಿಂಚಣಿ’ : ಸರ್ಕಾರದಿಂದ ಮಹತ್ವದ ಆದೇಶ.!

06/07/2025 10:00 AM
dhananjaya y.

BREAKING: ಬಂಗಲೆ ಕೂಡಲೇ ತೆರವುಗೊಳಿಸುವಂತೆ ಮಾಜಿ ಸಿಜೆಐ ಚಂದ್ರಚೂಡ್ ಗೆ ಸುಪ್ರೀಂ ಕೋರ್ಟ್ ಸೂಚನೆ

06/07/2025 9:59 AM

Big Updates: ಟೆಕ್ಸಾಸ್ ಪ್ರವಾಹ: ಸಾವಿನ ಸಂಖ್ಯೆ 51ಕ್ಕೆ ಏರಿಕೆ, ತೀವ್ರಗೊಂಡ ಕಾಣೆಯಾದ ಬಾಲಕಿಯರ ಹುಡುಕಾಟ

06/07/2025 9:53 AM

ಧನುಸ್ಸು ರಾಶಿಯವರಿಗೆ ಈ ಒಂದು ತಾಂತ್ರಿಕ ಅನುಷ್ಠಾನ ಮಾಡಿ ನೋಡಿ ಜೀವನ ಅದೃಷ್ಟದ ರೀತಿಯಲ್ಲಿ ಬದಲಾವಣೆಯಾಗುತ್ತದೆ

06/07/2025 9:46 AM
State News
KARNATAKA

GOOD NEWS : 80 ವರ್ಷ ಪೂರೈಸಿದ ರಾಜ್ಯ ನಿವೃತ್ತ ಸರ್ಕಾರಿ ನೌಕರರಿಗೆ ಹೆಚ್ಚುವರಿ `ಪಿಂಚಣಿ’ : ಸರ್ಕಾರದಿಂದ ಮಹತ್ವದ ಆದೇಶ.!

By kannadanewsnow5706/07/2025 10:00 AM KARNATAKA 2 Mins Read

ಬೆಂಗಳೂರು : 80 ವರ್ಷ ಪೂರೈಸಿದ ಮತ್ತು ಅದಕ್ಕೂ ಮೇಲ್ಮಟ್ಟ ವಯಸ್ಸನ್ನು ಪೂರ್ಣಗೊಳಿಸಿರುವ ರಾಜ್ಯ ಸರ್ಕಾರಿ ಕುಟುಂಬ ಪಿಂಚಣಿದಾರರಿಗೆ ಹೆಚ್ಚುವರಿ…

ಧನುಸ್ಸು ರಾಶಿಯವರಿಗೆ ಈ ಒಂದು ತಾಂತ್ರಿಕ ಅನುಷ್ಠಾನ ಮಾಡಿ ನೋಡಿ ಜೀವನ ಅದೃಷ್ಟದ ರೀತಿಯಲ್ಲಿ ಬದಲಾವಣೆಯಾಗುತ್ತದೆ

06/07/2025 9:46 AM

SHOCKING : ರಾಯಚೂರಿನಲ್ಲಿ ಘೋರ ದುರಂತ : ಮೊಹರಂ ವೇಳೆ ಬೆಂಕಿಯಲ್ಲಿ ಬಿದ್ದು ವ್ಯಕ್ತಿಗೆ ಗಂಭೀರ ಗಾಯ.!

06/07/2025 9:34 AM

BREAKING : ಕಾಂಗ್ರೆಸ್ ನಲ್ಲಿ `CM ಸಿದ್ದರಾಮಯ್ಯ’ಗೆ ರಾಷ್ಟ್ರಮಟ್ಟದ ಹುದ್ದೆ : `ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ’ ಅಧ್ಯಕ್ಷರಾಗಿ ನೇಮಕ

06/07/2025 9:26 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.