ತುಮಕೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ FIR ದಾಖಲಿಸಲಾಯಿತು. ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಯಾವುದೇ ಅಭ್ಯಂತರ ಇಲ್ಲ ಎಂದು ತುಮಕೂರಿನಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದರು.
ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮೇಲೆ ಎಫ್ಐಆರ್ ದಾಖಲು ವಿಚಾರವಾಗಿ ಸಚಿವ ಡಾ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ನಾವು ಮೊದಲಿನಿಂದ ಹೇಳುತ್ತಿದ್ದೇವೆ ಯಾವ ತನಿಖೆಗೂ ಸಿದ್ದ ಎಂದು. ಮುಖ್ಯಮಂತ್ರಿ ಕೂಡ ತನಿಖೆಗೆ ಸಿದ್ದ ಅಂತ ಹೇಳಿದ್ದಾರೆ. ಹಾಗಾಗಿ ತನಿಖೆಗೆ ಯಾವ ಅಭ್ಯಂತರವಿಲ್ಲ ತನಿಖಾ ವರದಿಯ ಆಧಾರದ ಮೇಲೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು.