ಹಾಸನ : ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ವರ್ಷದಲ್ಲಿ ಮೂರು ಬಾರಿ ಬರೆಯಲು ಅವಕಾಶ ನೀಡಲಾಗಿದ್ದು, ಅನುತ್ತೀರ್ಣರದಲ್ಲಿ ಅಂತಹ ವಿದ್ಯಾರ್ಥಿಗಳು ಪುನಃ ಶಾಲಾ ಕಾಲೇಜುಗಳಿಗೆ ದಾಖಲಾಗಿ ಕಲಿಯಲು ಅವಕಾಶ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.
ಹಾಸನ ಜಿಲ್ಲೆಯ ಅರಕಲಗೂಡಿನ ಕೋಟೆ ನಗರದಲ್ಲಿರುವ “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ” ಹಾಗೂ “ಮಕ್ಕಳ ಮನೆ” ಗೆ ಭೇಟಿ ನೀಡಿ, ಶಾಲಾ ಮಕ್ಕಳಿಗೆ ವಾರದಲ್ಲಿ 6 ದಿನ ಮೊಟ್ಟೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ಸರ್ಕಾರಿ ಹಾಗೂ ಅನುದಾನಿತ ಶಾಲೆಗಳೂ ಸೇರಿದಂತೆ ಒಟ್ಟು 56 ಸಾವಿರ ಶಾಲೆಗಳಿದ್ದು, 1.08 ಕೋಟಿ ಮಕ್ಕಳಿದರೆ ಕಳೆದ 9 ತಿಂಗಳಲ್ಲಿ 12,500 ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ. ಕಲ್ಯಾಣ ಕರ್ನಾಟಕಕ್ಕೆ 5800 ಶಿಕ್ಷಕರನ್ನು ನೇಮಕಾತಿ ಮಾಡಲಾಗುವುದು. ರಾಜ್ಯದಲ್ಲಿ 500 ಕೆ.ಪಿ.ಎಸ್. ಶಾಲೆಗಳ ಪ್ರಾರಂಭ ಮಾಡಲಾಗುವುದು. ಇದರಿಂದ ಸುತ್ತಮುತ್ತಲಿನ ಸರ್ಕಾರಿ ಶಾಲೆಗಳು ಕೆ.ಪಿ.ಎಸ್. ಶಾಲೆಗಳಲ್ಲಿ ವೀಲಿನವಾಗುತ್ತವೆ ಎಂದರು.
ಮಕ್ಕಳು ಅಪೌಷ್ಟಿಕತೆಯಿಂದ ಬಳಲಬಾರದು ಎಂದು ಅಜೀಮ್ ಪ್ರೇಮ್ ಜಿ ಫೌಂಡೇಶನ್ ಸಹಕಾರದೊಂದಿಗೆ ನಮ್ಮ ಸರ್ಕಾರ ವಾರದ 6 ದಿನವೂ ಮೊಟ್ಟೆ ವಿತರಣೆ ಮಾಡುತ್ತಿದ್ದು, ಇದರ ಸದುಪಯೋಗ ಪಡೆದುಕೊಂಡು ಮಕ್ಕಳು ದೈಹಿಕವಾಗಿ, ಮಾನಸಿಕವಾಗಿ ಸದೃಢರಾಗಬೇಕು ಎಂದು ತಿಳಿಸಿದೆನು. ಜೊತೆಗೆ “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಯೋಜನೆಯು ರಾಜ್ಯದಾದ್ಯಂತ ಅಭೂತಪೂರ್ವ ಯಶಸ್ಸು ಕಾಣುತ್ತಿದ್ದು ಇದಕ್ಕೆ ಎಲ್ಲರೂ ಕೈ ಜೋಡಿಸಬೇಕೆಂದು ಹಳೇ ವಿದ್ಯಾರ್ಥಿಗಳಲ್ಲಿ ಮನವಿ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಅರಕಲಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎ. ಮಂಜು, ಹಾಸನ ಜಿಲ್ಲೆಯ ಸಂಸದರಾದ ಶ್ರೀ ಶ್ರೇಯಸ್ ಪಟೇಲ್, ತಹಶೀಲ್ದಾರ್ ಶ್ರೀಮತಿ ಸೌಮ್ಯ, ಡಿಡಿಪಿಐ ಹೆಚ್.ಕೆ ಪಾಂಡು, ಬಿಇಒ ಶ್ರೀ ನಾರಾಯಣ ಸೇರಿದಂತೆ ಎಸ್.ಡಿ.ಎಂ.ಸಿ ಪದಾಧಿಕಾರಿಗಳು ಉಪಸ್ಥಿತರಿದ್ದರು.