Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೊದಲ ಅಧಿಕೃತ ಭೇಟಿಗಾಗಿ ಭಾರತಕ್ಕೆ ಆಗಮಿಸಿದ ಆಫ್ಘನ್ ಆರೋಗ್ಯ ಸಚಿವ

17/12/2025 7:05 AM

BIG NEWS: ರಾಜ್ಯದ ‘ಗುತ್ತಿಗೆ ಭೂ ಮಾಪಕ’ರಿಗೆ ಶಾಕಿಂಗ್ ನ್ಯೂಸ್: ‘ಖಾಯಂ ಅಸಾಧ್ಯ’ವೆಂದ ಸಚಿವ ಕೃಷ್ಣ ಬೈರೇಗೌಡ

17/12/2025 7:04 AM

SHOCKING : ರಾಜ್ಯದಲ್ಲಿ ಮತ್ತೊಂದು `ಪೈಶಾಚಿಕ ಕೃತ್ಯ’ : ಅಪ್ರಾಪ್ತ ತಂಗಿ ಮೇಲೆ ಅಣ್ಣನಿಂದಲೇ ಅತ್ಯಾಚಾರ.!

17/12/2025 6:59 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯಪಾಲರಿಗೆ ಅಪಮಾನ; ಮುಖ್ಯಮಂತ್ರಿ, ಕಾಂಗ್ರೆಸ್ ವಿರುದ್ಧ HD ಕುಮಾರಸ್ವಾಮಿ ಆಕ್ರೋಶ
KARNATAKA

ರಾಜ್ಯಪಾಲರಿಗೆ ಅಪಮಾನ; ಮುಖ್ಯಮಂತ್ರಿ, ಕಾಂಗ್ರೆಸ್ ವಿರುದ್ಧ HD ಕುಮಾರಸ್ವಾಮಿ ಆಕ್ರೋಶ

By kannadanewsnow0928/09/2024 4:12 PM

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ರಾಜ್ಯಪಾಲರ ಬಗ್ಗೆ ಎರಡು ನಾಲಿಗೆಗಳಲ್ಲಿ ಮಾತನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು; ಹಿಂದೆ ಐದು ವರ್ಷ ಅಧಿಕಾರದಲ್ಲಿ ಇದ್ದಾಗ, ಮಾಜಿ ಸಿಎಂ ಯಡಿಯೂರಪ್ಪ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡದ ವೇಳೆ ರಾಜ್ಯಪಾಲರನ್ನು ವಾಚಾಮಗೋಚರ ಹೊಗಳಿದ್ದ ಸಿದ್ದರಾಮಯ್ಯ, ಅದೇ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟ ಮೇಲೆ ರಾಜ್ಯಪಾಲರನ್ನು ಹೀನಾಮಾನವಾಗಿ ತೆಗಳುತ್ತಿದ್ದಾರೆ. ಅವರ ಪಕ್ಷದ ಶಾಸಕರು, ಸಚಿವರು ಇದನ್ನೇ ಮಾಡುತ್ತಿದ್ದಾರೆ ಎಂದು ಅವರು ದೂರಿದರು.

ಕಾಂಗ್ರೆಸ್ ನಾಯಕರದ್ದು ಹಂಸರಾಜ್ ಭಾರಧ್ವಾಜ್ ಅವರು ರಾಜ್ಯಪಾಲರು ಆಗಿದ್ದ ವೇಳೆ ಒಂದು ವರಸೆ, ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯಪಾಲರಾಗಿರುವ ವೇಳೆ ಇನ್ನೊಂದು ವರಸೆ. ಅದಕ್ಕೆ ಇಲ್ಲಿದೆ ನೋಡಿ ಸಾಕ್ಷಿ ಎಂದು ಈ ಹಿಂದೆ ಸಿದ್ದರಾಮಯ್ಯ ಅವರು ರಾಜ್ಯಪಾಲರ ಹೊಣೆಗಾರಿಕೆ ಬಗ್ಗೆ ನೀಡಿದ್ದ ಹೇಳಿಕೆಯನ್ನು ಮಾಧ್ಯಮಗೋಷ್ಠಿಯಲ್ಲಿ ಪ್ರದರ್ಶಿಸಿದರು.

ಪ್ರಾಸಿಕ್ಯೂಶನ್ ಗೆ ಅನುಮತಿ ಕೊಟ್ಟ ಮೇಲೆ ರಾಜ್ಯಪಾಲರ ವಿಷಯದಲ್ಲಿ ಕಾಂಗ್ರೆಸ್ ನಾಯಕರು ಅತ್ಯಂತ ಕೀಳಾಗಿ ವರ್ತಿಸಿದ್ದಾರೆ. ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿದ್ದಾರೆ. ಪ್ರತಿಕೃತಿ ದಹನ ಮಾಡಿದ್ದಾರೆ. ಈಗ ಅವರು ಯಾರಿಗೆ ಚಪ್ಪಲಿ ಹಾರ ಹಾಕುತ್ತಾರೆ? ಯಾರ ಪ್ರತಿಕೃತಿ ದಹನ ಮಾಡುತ್ತಾರೆ ಎಂದು ತೀಕ್ಷ್ಣವಾಗಿ ಪ್ರಶ್ನೆ ಮಾಡಿದರು.

ಸರ್ಕಾರ ಮತ್ತು ಸಿಎಂ ತಪ್ಪು ಮಾಡಿದ್ದಾರೆ. ರಾಜ್ಯಪಾಲರು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಕ್ರಮ ಜರುಗಿಸಿದ್ದಾರೆ. ಸರ್ಕಾರದಿಂದ ಸಮಜಾಯಿಷಿ ಕೇಳುವುದು ರಾಜ್ಯಪಾಲರ ಹಕ್ಕು ಎಂದು ಸಿದ್ದರಾಮಯ್ಯ ಈ ಹಿಂದೆ ಹೇಳಿದ್ದರು. ಪ್ರತಿಪಕ್ಷದನಾಯಕರಾಗಿದ್ದಾಗ ಹಾಗೆ ಹೇಳಿದ್ದ ಸಿದ್ದರಾಮಯ್ಯ ಅದನ್ನೀಗ ಮರೆತಿದ್ದಾರೆ. ನಾನು ತೋರಿಸುತ್ತಿರುವ ಹೇಳಿಕೆಯನ್ನು ಅವರು ಒಮ್ಮೆ ಕೇಳಿಸಿಕೊಳ್ಳಲಿ ಎಂದು ಕುಮಾರಸ್ವಾಮಿ ಅವರು ಟಾಂಗ್ ಕೊಟ್ಟರು.

ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಹಲವಾರು ಪ್ರಕರಣ ದಾಖಲಾಗಿವೆ. ಅವರೇನು ಸಾಚಾ ಅಲ್ಲ. ಮೂಡಾ ಹಗರಣದಲ್ಲಿ ಇವರ ಪಾತ್ರವೇ ಇಲ್ಲದಿದ್ದರೆ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಣಯಗಳನ್ನು ತರಾತುರಿಯಲ್ಲಿ ಏಕೆ ಮಾಡುತ್ತಿದ್ದರು? ನ್ಯಾಯಲಯ ಆದೇಶ ನೀಡಿದ 48 ಗಂಟೆಯಾದರೂ ಸಿಎಂ ವಿರುದ್ಧ ಎಫ್ಐಆರ್ ಯಾಕೆ ದಾಖಲು ಮಾಡಲಿ? ಸರ್ಕಾರ, ಆಡಳಿತ ವ್ಯವಸ್ಥೆ ಕೆಲಸ ಮಾಡುವುದು ಹೀಗೆಯೇ? ಎಂದು ಅವರು ಕೇಳಿದರು.

ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರು ಪೊಲೀಸರಿಗೆ ಸೂಚನೆ ಕೊಟ್ಟು ಕೆಲವರಿಗೆ ತೊಂದರೆ ಮಾಡುತ್ತಿದ್ದಾರೆ. ಇದಕ್ಕೆಲ್ಲಾ ನಾನು ಹೆದರುವ ಪೈಕಿ ಅಲ್ಲ ಎಂದು ಅವರು ಹೇಳಿದರು.

ನನಗೆ ಲೋಕಾಯುಕ್ತರಿಂದ ಯಾವುದೇ ನೋಟಿಸ್ ಬಂದಿಲ್ಲ. ನಾನೇ ಸ್ವಯಂ ಪ್ರೇರಿತವಾಗಿ ಲೋಕಾಯುಕ್ತ ಕಚೇರಿಗೆ ಹೋಗಿದ್ದೆ. ಇದು ಬಿಟ್ಡರೆ ಅವರು ಒಂದು ಹೆಜ್ಜೆ ಏನು ಮಾಡಲು ಆಗಲ್ಲ. ನಾನು ಆರ್ಕವತಿಯಲ್ಲಿ ರೀಡೂ ಮಾಡಿದಂತೆ ಮಾಡಿಲ್ಲ. ಸರ್ಕಾರಿ ಜಮೀನು ಕಬಳಿಸಿಲ್ಲ. ಮಾಡುವ ಅಕ್ರಮ ಎಲ್ಲಾ ಮಾಡಿ ಮೋದಿ ಹಾಗೂ ನಿರ್ಮಲಾ ಸೀತಾರಾಮನ್ ಬಗ್ಗೆ ಮಾತನಾಡುತ್ತಾರೆ. ನಾಚಿಕೆ ಆಗಬೇಕು ಇವರಿಗೆ ಎಂದು ಅವರು ಕಿಡಿಕಾರಿದರು.

ನನ್ನ ವಿರುದ್ಧದ ಪ್ರಕರಣಗಳು ನ್ಯಾಯಲಯದಲ್ಲಿ ತಿರ್ಮಾನ ಆಗಲಿ. ತೀರ್ಪು ಬರಲಿ, ತಲೆಬಾಗುತ್ತೇನೆ. ಇವರು ಕೇಳಿದ ಕೂಡಲೇ ನಾನು ಯಾಕೆ ರಾಜೀನಾಮೆ ಕೊಡಲಿ? ರಾಜೀನಾಮೆ ಕೊಡಲು ಏನಿದೆ? ಸಂವಿಧಾನ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲ್ಲ. ಅಂತಹ ಪರಿಸ್ಥಿತಿ ಬಂದರೆ ಗೌರವಯುತವಾಗಿ ರಾಜೀನಾಮೆ ನೀಡುತ್ತೇನೆ. ರಾಜೀನಾಮೆ ಕೊಡಬೇಕಾದಾಗ ನಾನೇ ಕೊಡುತ್ತೇನೆ. ಅದರ ಬಗ್ಗೆ ಸಿದ್ದರಾಮಯ್ಯ ಹೇಳುವುದು ಬೇಡ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

BREAKING : ಮುಸ್ಲಿಂರು ‘ಹಮ್ ಪಾಂಚ್ ಹಮಾರಾ ಪಂಚಿಸ್’ ಅಂತಾರೆ : ಶಾಸಕ ಯತ್ನಾಳ್ ವಿವಾದಾತ್ಮಕ ಹೇಳಿಕೆ

ಆ ತಾಯಿ ಎಂದೂ ಹೊರಬಂದವರಲ್ಲ, ಅವರು ಮುಗ್ದರು : ಸಿಎಂ ಪತ್ನಿ ಪಾರ್ವತಿ ಕುರಿತು ಕೆಎಸ್ ಈಶ್ವರಪ್ಪ ಹೇಳಿದ್ದೇನು?

Share. Facebook Twitter LinkedIn WhatsApp Email

Related Posts

BIG NEWS: ರಾಜ್ಯದ ‘ಗುತ್ತಿಗೆ ಭೂ ಮಾಪಕ’ರಿಗೆ ಶಾಕಿಂಗ್ ನ್ಯೂಸ್: ‘ಖಾಯಂ ಅಸಾಧ್ಯ’ವೆಂದ ಸಚಿವ ಕೃಷ್ಣ ಬೈರೇಗೌಡ

17/12/2025 7:04 AM2 Mins Read

SHOCKING : ರಾಜ್ಯದಲ್ಲಿ ಮತ್ತೊಂದು `ಪೈಶಾಚಿಕ ಕೃತ್ಯ’ : ಅಪ್ರಾಪ್ತ ತಂಗಿ ಮೇಲೆ ಅಣ್ಣನಿಂದಲೇ ಅತ್ಯಾಚಾರ.!

17/12/2025 6:59 AM1 Min Read

BIG NEWS : ರಾಜ್ಯದಲ್ಲಿ ತಾಪಮಾನ ಭಾರೀ ಕುಸಿತದಿಂದ ಚಳಿಗೆ ಜನರು ತತ್ತರ : ಇನ್ನೂ 2 ದಿನ `ಶೀತಗಾಳಿ’ ಅಲರ್ಟ್.!

17/12/2025 6:57 AM1 Min Read
Recent News

ಮೊದಲ ಅಧಿಕೃತ ಭೇಟಿಗಾಗಿ ಭಾರತಕ್ಕೆ ಆಗಮಿಸಿದ ಆಫ್ಘನ್ ಆರೋಗ್ಯ ಸಚಿವ

17/12/2025 7:05 AM

BIG NEWS: ರಾಜ್ಯದ ‘ಗುತ್ತಿಗೆ ಭೂ ಮಾಪಕ’ರಿಗೆ ಶಾಕಿಂಗ್ ನ್ಯೂಸ್: ‘ಖಾಯಂ ಅಸಾಧ್ಯ’ವೆಂದ ಸಚಿವ ಕೃಷ್ಣ ಬೈರೇಗೌಡ

17/12/2025 7:04 AM

SHOCKING : ರಾಜ್ಯದಲ್ಲಿ ಮತ್ತೊಂದು `ಪೈಶಾಚಿಕ ಕೃತ್ಯ’ : ಅಪ್ರಾಪ್ತ ತಂಗಿ ಮೇಲೆ ಅಣ್ಣನಿಂದಲೇ ಅತ್ಯಾಚಾರ.!

17/12/2025 6:59 AM

BIG NEWS : ರಾಜ್ಯದಲ್ಲಿ ತಾಪಮಾನ ಭಾರೀ ಕುಸಿತದಿಂದ ಚಳಿಗೆ ಜನರು ತತ್ತರ : ಇನ್ನೂ 2 ದಿನ `ಶೀತಗಾಳಿ’ ಅಲರ್ಟ್.!

17/12/2025 6:57 AM
State News
KARNATAKA

BIG NEWS: ರಾಜ್ಯದ ‘ಗುತ್ತಿಗೆ ಭೂ ಮಾಪಕ’ರಿಗೆ ಶಾಕಿಂಗ್ ನ್ಯೂಸ್: ‘ಖಾಯಂ ಅಸಾಧ್ಯ’ವೆಂದ ಸಚಿವ ಕೃಷ್ಣ ಬೈರೇಗೌಡ

By kannadanewsnow0917/12/2025 7:04 AM KARNATAKA 2 Mins Read

ಬೆಳಗಾವಿ ಸುವರ್ಣಸೌಧ : ಪರವಾನಗಿ ಭೂ ಮಾಪಕರನ್ನು ಖಾಯಂಗೊಳಿಸುವುದು ಅಸಾಧ್ಯ. ಆದರೆ, ಅವರ ಮೇಲೆ ಸರ್ಕಾರಕ್ಕೆ ಸಹಾನುಭೂತಿ ಇದ್ದು, ಅವರ ಕಲ್ಯಾಣಕ್ಕೆ…

SHOCKING : ರಾಜ್ಯದಲ್ಲಿ ಮತ್ತೊಂದು `ಪೈಶಾಚಿಕ ಕೃತ್ಯ’ : ಅಪ್ರಾಪ್ತ ತಂಗಿ ಮೇಲೆ ಅಣ್ಣನಿಂದಲೇ ಅತ್ಯಾಚಾರ.!

17/12/2025 6:59 AM

BIG NEWS : ರಾಜ್ಯದಲ್ಲಿ ತಾಪಮಾನ ಭಾರೀ ಕುಸಿತದಿಂದ ಚಳಿಗೆ ಜನರು ತತ್ತರ : ಇನ್ನೂ 2 ದಿನ `ಶೀತಗಾಳಿ’ ಅಲರ್ಟ್.!

17/12/2025 6:57 AM

BIG NEWS : ರಾಜ್ಯದಲ್ಲಿ 6395 ಆನೆಗಳು, 563 ಹುಲಿಗಳಿವೆ : ಸಚಿವ ಈಶ್ವರ್ ಖಂಡ್ರೆ ಮಾಹಿತಿ

17/12/2025 6:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.