ಬೆಂಗಳೂರು : ಸಾಮಾನ್ಯವಾಗಿ ಲವರ್ಸ್ ಗಳ ಮಧ್ಯ ಯಾವುದು ಒಂದು ಜಗಳಕ್ಕೆ ಬ್ರೇಕ್ ಅಪ್ ಆಗುವುದನ್ನು ನುಡಿರುತ್ತವೆ ಕೇಳಿರುತ್ತೇವೆ ಆದರೆ ಬೆಂಗಳೂರಿನಲ್ಲಿ ಸುಂದರಿಯೊಬ್ಬಳು ಬ್ರೇಕಪ್ ಗಾಗಿ ತನ್ನ ಪ್ರಿಯಕರಣ ಮೇಲೆ ತಾನೆ ರಾಬರಿ ಮಾಡಿಸಿ ಸಿಕ್ಕಿಬಿದ್ದಿದ್ದಾಳೆ. ಇದೀಗ ಕಳ್ಳತನ ಮಾಡಿಸಿದ ಟೆಕ್ಕಿ ಶೃತಿ ಸೇರಿ ನಾಲ್ವರನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ.
ಹೌದು ಈ ಒಂದು ಘಟನೆ ನಡೆದಿದ್ದು, ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಯುವತಿ ತನ್ನ ಸ್ನೇಹಿತರ ಜೊತೆ ಸೇರಿಕೊಂಡು ಮೊಬೈಲ್ ಕಸಿಯೋದು ಹೇಗೆ ಅನ್ನೋದು ಪ್ಲಾನ್ ಮಾಡಿದ್ಲು. ಕಳೆದ ಸೆಪ್ಟೆಂಬರ್ 20 ರಂದು ಪ್ರಿಯಕರ ವಂಶಿಕೃಷ್ಣರೆಡ್ಡಿ ಎಂಬಾತ ಶೃತಿ ಭೇಟಿಗೆ ತೆರಳಿದ್ದ. ಅದರಂತೆ ಭೇಟಿಯಾಗಿ ಆಕೆಯನ್ನು ಕರೆದುಕೊಂಡು ಹೊರಬರುತ್ತಿದ್ದಂತೆ ಸ್ವಿಫ್ಟ್ ಕಾರಿನಲ್ಲಿ ಬಂದವರು, ವಂಶಿಕೃಷ್ಣನ ಬೈಕ್ಗೆ ಡಿಕ್ಕಿ ಹೊಡೆದಿದ್ದಾರೆ.
ಈ ವೇಳೆ ಜಗಳ ತೆಗೆದು ಆತನ ಬಳಿಯಿದ್ದ ಮೊಬೈಲ್ ಕಸಿದುಕೊಂಡಿದ್ದಾರೆ. ಅಲ್ಲದೇ ವಂಶಿಕೃಷ್ಣನ ಜೊತೆಯಲ್ಲಿಯೇ ಇದ್ದ ಶೃತಿಯ ಮೊಬೈಲ್ನ್ನು ಸಹ ಕಸಿದು ಕೊಂಡಿದ್ದಾರೆ. ನಂತರ ದೂರು ಕೊಡುವುದು ಬೇಡ, ಮೊಬೈಲ್ ಹೋದರೆ ಹೋಗಲಿ ಎಂದು ಪ್ರಿಯತಮೆ ಶೃತಿ, ವಂಶಿ ಮುಂದೆ ಡ್ರಾಮ ಮಾಡಿದ್ದಾಳೆ. ಆದರೂ, ವಂಶಿಕೃಷ್ಣ ಬೆಳ್ಳಂದೂರು ಠಾಣೆಗೆ ಕಾರಿನ ನಂಬರ್ ಸಮೇತ ದೂರು ನೀಡಿದ್ದರು.
ಈ ಕುರಿತು ತನಿಖೆ ಕೈಗೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಇತ್ತೀಚೆಗೆ ವಂಶಿಕೃಷ್ಣನಿಂದ ದೂರವಾಗಲು ಶೃತಿ ಯತ್ನಿಸುತ್ತಿದ್ದಳು. ಆದರೆ, ವಂಶಿಕೃಷ್ಣನ ಮೊಬೈಲ್ನಲ್ಲಿ ಇಬ್ಬರು ಜೊತೆಗಿದ್ದ ಫೋಟೋಗಳಿದ್ದವು. ಈ ಹಿನ್ನಲೆ ಫೋಟೋಸ್, ವಿಡಿಯೋಸ್ ಡಿಲೀಟ್ ಮಾಡಿಸಲಿಕ್ಕೆ ಒಂದೂವರೆ ಲಕ್ಷ ಹಣ ಕೊಟ್ಟು ಮೊಬೈಲ್ ರಾಬರಿ ಮಾಡುವ ಖರ್ತನಾಕ್ ಪ್ಲಾನ್ ಮಾಡಿರುವುದು ತನಿಖೆ ಬಳಿಕ ತಿಳಿದಿದೆ.
ಯುವಕನ ಮೊಬೈಲ್ನಲ್ಲಿದ್ದ ಕೆಲ ಫೋಟೋಗಳನ್ನು ಡಿಲೀಟ್ ಮಾಡಬೇಕಿತ್ತು, ಅದಕ್ಕೆ ಈ ಪ್ಲ್ಯಾನ್ ಮಾಡಿದ್ವಿ ಅಂತಾ ಯುವತಿ ಸೇರಿ ಐವರು ಪೊಲೀಸರ ಮುಂದೆ ತಪ್ಪೋಪ್ಪಿಕೊಂಡಿದ್ದಾರೆ. ಮತ್ತೊಂದು ಕಡೆ ದೂರು ನೀಡಿದ್ದ ಯುವಕ ವಂಶಿಕೃಷ್ಣ, ಪ್ರಿಯತಮೆಯ ಈ ಪ್ರಕರಣದ ಕಿಂಗ್ ಪಿನ್ ಅನ್ನೋದು ತಿಳಿದು ಶಾಕ್ ಆಗಿದ್ದಾನೆ.