ಮೈಸೂರು : ರೋಗಿಯ ಜೀವಗಳನ್ನು ಉಳಿಸುವ, ಕಾಪಾಡುವ ವೈದ್ಯರನ್ನು ವೈದ್ಯೋ ನಾರಾಯಣ ಹರಿ ಎಂದು ಕರೆಯುತ್ತಾರೆ.ಈ ಪದದ ಮಹತ್ವ ಕಡಿಮೆ ಆಗಬಾರದು ಎಂದು ವೈದ್ಯರಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು ಹೇಳಿದರು.
ಇಂದು ಮೈಸೂರು ಮೆಡಿಕಲ್ ಕಾಲೇಜುಗೆ ಶತಮಾನೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ಈ ಒಂದು ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡಿ, ವೈದ್ಯೋ ನಾರಾಯಣ ಹರಿ ಎಂದು ವೈದ್ಯರನ್ನು ಕರೆಯುತ್ತಾರೆ. ಈ ಪದದ ಮಹತ್ವ ಕಡಿಮೆಯಾಗಬಾರದು ಎಂದು ವೈದ್ಯರಿಗೆ ಸಿಎಂ ಸಿದ್ದರಾಮಯ್ಯ ಕಿವಿ ಮಾತು ಹೇಳಿದರು.
ಕೆಲವು ವೈದ್ಯರು ಸ್ಟಿಫ್ ಆಗಿರುತ್ತಾರೆ. ನನ್ನ ತಾಯಿಗೆ ಕ್ಯಾನ್ಸರ್ ಕಾಯಿಲೆ ಬಂದಿತ್ತು ಆಗ ವೈದ್ಯರನ್ನು ಭೇಟಿಯಾಗಲು ಹೋದರೆ ಸ್ಟಿಫ್ ಆಗಿದ್ದರು ವೈದ್ಯರು ಸ್ಟೀಫ್ ಆಗಿ ಇರಬಾರದು. ಜನರ ಜೊತೆ ಬೆರೆಯಬೇಕು ವೈದ್ಯರು ಈ ಸಮಾಜಕ್ಕೆ ಆಸ್ತಿ ಇದ್ದಂತೆ ಎಂದು ಸಿಎಂ ಸಿದ್ದರಾಮಯ್ಯ ವೈದ್ಯರಿಗೆ ಸಲಹೆ ನೀಡಿದರು.