ಧಾರವಾಡ : ಧಾರವಾಡದಲ್ಲಿ ಬಡ್ಡಿ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ವ್ಯಕ್ತಿ ಒಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ನಜೀರ್ ಸಾಬ್ ಎಂದು ತಿಳಿದುಬಂದಿದೆ.
ಆತ್ಮಹತ್ಯೆ ಮಾಡಿಕೊಂಡ ನಜೀರ್ ಸಾಬ್ ಮಂಡಕ್ಕಿ ವ್ಯಾಪಾರ ಮಾಡುತ್ತಿದ್ದರು. ವ್ಯಕ್ತಿ ಒಬ್ಬರಿಂದ 1. 20 ಲಕ್ಷ ಸಾಲ ಪಡೆದಿದ್ದ ನಜೀರ್, ಎರಡು ವರ್ಷದಿಂದ 2.50 ಲಕ್ಷ ರೂಪಾಯಿ ಬಡ್ಡಿ ಕಟ್ಟುತ್ತಾ ಬಂದಿದ್ದಾರೆ. ಎರಡು ತಿಂಗಳಿಂದ ಬಡ್ಡಿ ಕಟ್ಟದಿದ್ದಕ್ಕೆ ವ್ಯಕ್ತಿ ಗಲಾಟೆ ಮಾಡಿದ್ದಾನೆ.ಮನೆ ಖಾಲಿ ಮಾಡಿಸುವುದಾಗಿ ಕೂಡ ವಾರ್ನಿಂಗ್ ಮಾಡಿದ್ದ.
ಇದರಿಂದ ನಜೀರ್ ಸಾಬ್ ಮನನೊಂದು ವಿಷ ಸೇವಿಸಿದ್ದ ಸೆಪ್ಟೆಂಬರ್ 26ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗಿದೆ. ಕೂಡಲೇ ನಜೀರ್ ಸಾಬ್ ನನ್ನು ತಕ್ಷಣ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಿಸಿದೆ ನಜೀರ್ ಸಾವನಪ್ಪಿದ್ದಾರೆ. ಆರೋಪಿಗಳನ್ನು ಬಂಧಿಸುವಂತೆ ಕುಟುಂಬಸ್ಥರು ಆಗ್ರಹಿಸುತ್ತಿದ್ದಾರೆ.