ಮೈಸೂರು : ಮೈಸೂರಿನಲ್ಲಿ ಮಹಿಷ ದಸರಾ ಆಚರಣೆಗೆ ನಿಷೇಧವಿದ್ದರೂ ಸಹ ಇದೀಗ ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಸಮಿತಿಯ 5 ಸದಸ್ಯರನ್ನು ಪೊಲೀಸರೆ ಕರೆದೋಯ್ದು ಪುಷ್ಪರ್ಚನೆ ಸಲ್ಲಿಸಿರುವ ಘಟನೆ ನಡೆದಿದ್ದು, ಇದೀಗ ಪೊಲೀಸರೆ ಕಾನೂನು ಉಲ್ಲಂಘಿಸಿರುವ ಘಟನೆ ನಡೆದಿದೆ.
ಹೌದು ಮಹಿಷ ದಸರಾ ಆಚರಣೆಯ ಸಮಿತಿ ಸದಸ್ಯರನ್ನು ಕರೆದೋಯ್ದ ಪೊಲೀಸರು ಕದ್ದು ಮುಚ್ಚಿ ಕರೆದೋಯ್ದು ಪುಷ್ಪಾರ್ಚನೆ ಮಾಡಿಸಿದ್ದಾರೆ.ಆ ಮೂಲಕ ಪೊಲೀಸರಿಂದಲೇ ಕಾನೂನು ಉಲಂಘನೆ ಆಗಿದೆ. ಚಾಮುಂಡಿ ಬೆಟ್ಟದಲ್ಲಿ ಮಹೇಶಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಲಾಗಿದೆ. ತಾವೇ ಹಾಕಿದ ನಿಷೇಧಾಜ್ಞೆಗೆ ಪೊಲೀಸರು ಎಳ್ಳು ನೀರು ಬಿಟ್ಟಿದ್ದಾರೆ.
ಟೌನ್ ಹಾಲ್ ಹೊರತುಪಡಿಸಿ ಮೈಸೂರಲ್ಲಿ ಮಹಿಷ ಆಚರಣೆಗೆ ನಿಷೇಧಜ್ಞೆ ಹೇರಲಾಗಿತ್ತು. ಪೊಲೀಸ್ ಕಮಿಷನರ್ ನಿಷೇಧಾಜ್ಞೆ ಜಾರಿ ಮಾಡಿದ್ದರು. ಹೀಗಿದ್ದರೂ ಪೊಲೀಸರು ಇವರನ್ನು ಕರೆದುಕೊಂಡು ಹೋಗಿ ಮಹಿಷ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಿದ್ದಾರೆ. ಆ ಮೂಲಕ ಪೊಲೀಸರಿಂದಲೇ ಕಾನೂನು ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪ ಕೇಳಿ ಬಂದಿದೆ.