ಮಂಡ್ಯ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಾಗಿದ್ದು ನಾಳೆಯಿಂದ ತನಿಖೆ ನಡೆಸಲಾಗುತ್ತದೆ ಎಂದು ಹೇಳಲಾಗುತ್ತಿದೆ ಇದರ ಮಧ್ಯ ಈ ಒಂದು ಹಗರಣದಲ್ಲಿ ನೀವು ರಾಜೀನಾಮೆ ನೀಡಬೇಡಿ ಎಂದು ಸಿದ್ದರಾಮಯ್ಯ ಅಭಿಮಾನಿ ಒಬ್ಬರು ರಕ್ತದ ಮೂಲಕ ಪತ್ರ ಬರೆದು ಮನವಿ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಹೌದು ರಾಜೀನಾಮೆ ನೀಡದಂತೆ ಮುಖ್ಯಮಂತ್ರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾನೆ. ಮಂಡ್ಯ ಜಿಲ್ಲೆಯ ಮುತ್ತಹಳ್ಳಿಯ ಸಚಿನ್, ಅರಸು ಬಳಿಕ ಅತಿ ಹೆಚ್ಚು ಸರಕಾರಿ ಯೋಜನೆ ನೀಡಿದ್ದೀರಿ. ಬಡ ಜನರಿಗೆ ಅತಿ ಹೆಚ್ಚು ಯೋಜನೆ ನೀಡಿದ ಮುಖ್ಯಮಂತ್ರಿ ನೀವು. ಬಡವರು ಹಾಗೂ ದೀನ ದಲಿತರ ಪರವಾಗಿರುವಂತಹ ಮುಖ್ಯಮಂತ್ರಿಗಳು ನೀವು. ಮುಡಾ ಹಗರಣದಲ್ಲಿ ನೀವು ರಾಜೀನಾಮೆ ನೀಡಬಾರದು ನಿಮ್ಮೊಂದಿಗೆ ನಾವಿದ್ದೇವೆ ಎಂದು ರಕ್ತದಲ್ಲಿ ಸಚಿನ್ ಪತ್ರ ಬರೆದಿದ್ದಾರೆ.